ತ್ಯಾಜ್ಯ ವಿಲೇವಾರಿಗೆ ಉಚಿತ ಸಹಾಯವಾಣಿ

ನಗರದ ಎಲ್ಲಾ ಪ್ರದೇಶಗಳಲ್ಲಿ ಪೂರ್ಣಪ್ರಮಾಣದ ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ 24/7 ತಾಸುಗಳ ಉಚಿತ ಸಹಾಯವಾಣಿಯೊಂದನ್ನು ಆರಂಭಿಸಿದ್ದು, ನಗರದ ಯಾವ ಭಾಗದಲ್ಲಾದರೂ ಸ್ವಚ್ಛತೆಗೆ ಅಡ್ಡಿಯುಂಟುಮಾಡುವ ತ್ಯಾಜ್ಯ ವಸ್ತುಗಳ ರಾಶಿ, ಅಥವಾ ಪಾಲಿಕೆ ಅಧಿಕಾರಿಗಳ ನಿರ್ಲಕ್ಷ್ಯ ಕಂಡುಬಂದಲ್ಲಿ ದೂ.080-22660000/22221188ಗೆ ಕರೆ ಮಾಡಿ ದೂರು ದಾಖಲಿಸಿದರೆ ಕೆಲವೇ ತಾಸುಗಳಲ್ಲಿ ಸಮಸ್ಯೆ ಇತ್ಯರ್ಥಗೊಳ್ಳುತ್ತದೆ.ಎಂದು ಪಾಲಿಕೆ ಆಯುಕ್ತ ಭರತ್ಲಾಲ್ ಮೀನಾ ತಿಳಿಸಿದರು.
ಭವಿಷ್ಯದಲ್ಲಿ ಉದ್ಯಾನಗರಿ ಬೆಂಗಳೂರನ್ನು ಸ್ವಚ್ಛತೆಯ ಮಾದರಿ ನಗರವನ್ನಾಗಿ ಪರಿವರ್ತಿಸುವ ಸಲುವಾಗಿ ಈ ಸಂಖ್ಯೆಯನ್ನು ಕಾರ್ಯರೂಪಕ್ಕೆ ತರಲಾಗಿದೆ. ನಗರಾಭಿವೃದ್ಧಿಗೆ ರಾಜ್ಯ ಸರ್ಕಾರ 22 ಸಾವಿರ ಕೋಟಿ ರು ಮಂಜೂರು ಮಾಡಿದೆ. ಅದರ ಸದುಪಯೋಗ ಆಗುವ ಯೋಜನೆಗಳು ಸಿದ್ಧವಿದೆ ಎಂದರು. ನಗರದ ಯಾವುದೇ ಪ್ರದೇಶಗಳಲ್ಲಿ ತ್ಯಾಜ್ಯ ವಸ್ತುಗಳು ಕಂಡು ಬಂದರೆ ಈ ಎರಡೂ ಸಹಾಯವಾಣಿಗೆ ದೂರು ನೀಡಬಹುದು. ದಿನದ 24 ತಾಸುಗಳಲ್ಲಿ ಇವು ಕಾರ್ಯರೂಪದಲ್ಲಿರುತ್ತವೆ. ಸಕಾಲದಲ್ಲಿ ಇವು ದೊರೆಯದಿದ್ದ ಪಕ್ಷದಲ್ಲಿ ನನ್ನ ಮೊಬೈಲ್ ಸಂಖ್ಯೆಗೂ ಸಂದೇಶ ರವಾನಿಸುವ ವ್ಯವಸ್ಥೆಯನ್ನು ಶೀಘ್ರವೇ ಕಲ್ಪಿಸಲಾಗುವುದು ಎಂದರು. ರಾಜ್ಯ ಪತ್ರಿಕೋದ್ಯಮ ಹಾಗೂ ಸಂವಹನ ಶಿಕ್ಷಕರ ಒಕ್ಕೂಟದ ಅಧ್ಯಕ್ಷ ಡಾ.ಬಿ.ಕೆ.ರವಿ, ಕಾಲೇಜಿನ ಪದವಿ ವಿಭಾಗದ ಪ್ರಾಂಶುಪಾಲರಾದ ಕೆ.ಎಸ್.ಭಾರತಿ, ಮತ್ತು ಪದವಿಪೂರ್ವ ವಿಭಾಗದ ಪ್ರಾಂಶುಪಾಲರಾದ ಅನುರಾಧ ಉಪಸ್ಥಿತರಿದ್ದರು.
(ಏಜೆನ್ಸೀಸ್)
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications