ತ್ಯಾಜ್ಯ ವಿಲೇವಾರಿಗೆ ಉಚಿತ ಸಹಾಯವಾಣಿ

ನಗರದ ಎಲ್ಲಾ ಪ್ರದೇಶಗಳಲ್ಲಿ ಪೂರ್ಣಪ್ರಮಾಣದ ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ 24/7 ತಾಸುಗಳ ಉಚಿತ ಸಹಾಯವಾಣಿಯೊಂದನ್ನು ಆರಂಭಿಸಿದ್ದು, ನಗರದ ಯಾವ ಭಾಗದಲ್ಲಾದರೂ ಸ್ವಚ್ಛತೆಗೆ ಅಡ್ಡಿಯುಂಟುಮಾಡುವ ತ್ಯಾಜ್ಯ ವಸ್ತುಗಳ ರಾಶಿ, ಅಥವಾ ಪಾಲಿಕೆ ಅಧಿಕಾರಿಗಳ ನಿರ್ಲಕ್ಷ್ಯ ಕಂಡುಬಂದಲ್ಲಿ ದೂ.080-22660000/22221188ಗೆ ಕರೆ ಮಾಡಿ ದೂರು ದಾಖಲಿಸಿದರೆ ಕೆಲವೇ ತಾಸುಗಳಲ್ಲಿ ಸಮಸ್ಯೆ ಇತ್ಯರ್ಥಗೊಳ್ಳುತ್ತದೆ.ಎಂದು ಪಾಲಿಕೆ ಆಯುಕ್ತ ಭರತ್ಲಾಲ್ ಮೀನಾ ತಿಳಿಸಿದರು.
ಭವಿಷ್ಯದಲ್ಲಿ ಉದ್ಯಾನಗರಿ ಬೆಂಗಳೂರನ್ನು ಸ್ವಚ್ಛತೆಯ ಮಾದರಿ ನಗರವನ್ನಾಗಿ ಪರಿವರ್ತಿಸುವ ಸಲುವಾಗಿ ಈ ಸಂಖ್ಯೆಯನ್ನು ಕಾರ್ಯರೂಪಕ್ಕೆ ತರಲಾಗಿದೆ. ನಗರಾಭಿವೃದ್ಧಿಗೆ ರಾಜ್ಯ ಸರ್ಕಾರ 22 ಸಾವಿರ ಕೋಟಿ ರು ಮಂಜೂರು ಮಾಡಿದೆ. ಅದರ ಸದುಪಯೋಗ ಆಗುವ ಯೋಜನೆಗಳು ಸಿದ್ಧವಿದೆ ಎಂದರು. ನಗರದ ಯಾವುದೇ ಪ್ರದೇಶಗಳಲ್ಲಿ ತ್ಯಾಜ್ಯ ವಸ್ತುಗಳು ಕಂಡು ಬಂದರೆ ಈ ಎರಡೂ ಸಹಾಯವಾಣಿಗೆ ದೂರು ನೀಡಬಹುದು. ದಿನದ 24 ತಾಸುಗಳಲ್ಲಿ ಇವು ಕಾರ್ಯರೂಪದಲ್ಲಿರುತ್ತವೆ. ಸಕಾಲದಲ್ಲಿ ಇವು ದೊರೆಯದಿದ್ದ ಪಕ್ಷದಲ್ಲಿ ನನ್ನ ಮೊಬೈಲ್ ಸಂಖ್ಯೆಗೂ ಸಂದೇಶ ರವಾನಿಸುವ ವ್ಯವಸ್ಥೆಯನ್ನು ಶೀಘ್ರವೇ ಕಲ್ಪಿಸಲಾಗುವುದು ಎಂದರು. ರಾಜ್ಯ ಪತ್ರಿಕೋದ್ಯಮ ಹಾಗೂ ಸಂವಹನ ಶಿಕ್ಷಕರ ಒಕ್ಕೂಟದ ಅಧ್ಯಕ್ಷ ಡಾ.ಬಿ.ಕೆ.ರವಿ, ಕಾಲೇಜಿನ ಪದವಿ ವಿಭಾಗದ ಪ್ರಾಂಶುಪಾಲರಾದ ಕೆ.ಎಸ್.ಭಾರತಿ, ಮತ್ತು ಪದವಿಪೂರ್ವ ವಿಭಾಗದ ಪ್ರಾಂಶುಪಾಲರಾದ ಅನುರಾಧ ಉಪಸ್ಥಿತರಿದ್ದರು.
(ಏಜೆನ್ಸೀಸ್)
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications