ಮೈಸೂರು : ಮುಂದುವರಿದ ತೆರವು ಕಾರ್ಯಾಚರಣೆ

ನಗರದ 18 ಪ್ರಮುಖ ರಸ್ತೆಗಳಲ್ಲಿ ಪಾದಚಾರಿ ರಸ್ತೆಯನ್ನು ಮಳಿಗೆಗಳ ಮಾಲೀಕರು ಒತ್ತುವರಿ ಮಾಡಿಕೊಂಡಿದ್ದರು. ಆ ಪೈಕಿ ಆರು ರಸ್ತೆಗಳು ನಗರದ ಹೃದಯ ಭಾಗದಲ್ಲೇ ಇದ್ದು, ಸಾರ್ವಜನಿಕರು ಹಾಗೂ ಪ್ರವಾಸಿಗರಿಗೆ ತೀವ್ರ ಸಮಸ್ಯೆ ಉಂಟು ಮಾಡುತ್ತಿದ್ದ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಿ ಒತ್ತುವರಿ ತೆರವುಗೊಳಿಸಲಾಯಿತು.
ನಗರದ ಜೀವಣ್ಣರಾಯಕಟ್ಟೆ ಮೈದಾನ ಹಾಗೂ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಬಳಿಯಿಂದ ಆರಂಭವಾದ ಕಾರ್ಯಾಚರಣೆ ಎರಡು ಹಂತಗಳಲ್ಲಿ ನಡೆಯಿತು. ಒಟ್ಟು 27 ತಂಡಗಳು ಬೆಳಿಗ್ಗೆ ಆರು ಗಂಟೆಗೆ ಸರಿಯಾಗಿ ತೆರವು ಕಾರ್ಯಾಚರಣೆ ಆರಂಭಿಸಿದವು. ಜೆಸಿಬಿ ಯಂತ್ರಗಳು ಭರದಲ್ಲಿ ಒತ್ತುವರಿ ತೆರವುಗೊಳಿಸಿದವು. ಈ ಸಂದರ್ಭದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ಸಂಭವಿಸದಂತೆ ಮುನ್ನೆಚ್ಚರಿಕಾ ಕ್ರಮವಾಗಿ ವಿಶೇಷ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು.
ರಾಜ್ಯ ಮೀಸಲು ಪಡೆಯ ಆರು ಪ್ಲಟೂನ್, ನಗರ ಸಶಸ್ತ್ರ ಮೀಸಲು ಪಡೆಯ 8 ಪ್ಲಟೂನ್ ಪೊಲೀಸ್ ಸಿಬ್ಬಂದಿಗಳು, ಮೂವರು ಡಿಸಿಪಿ, 8 ಮಂದಿ ಎಸಿಪಿ,18 ಇನ್ಸ್ಪೆಕ್ಟರ್ಗಳು, 32 ಮಂದಿ ಸಬ್ ಇನ್ಸ್ಪೆಕ್ಟರ್ ಗಳು ಹಾಗೂ 400 ಮಂದಿ ನಾಗರಿಕ ಪೊಲೀಸರನ್ನು ಕಾರ್ಯಾಚರಣೆಗೆ ನಿಯೋಜಿಸಲಾಗಿದೆ.
ಏಕಕಾಲಕ್ಕೆ ಕಾರ್ಯಾಚರಣೆ ನಡೆಸುವ ಸಂಬಂಧ ಬೇಸ್ ಒಂದು ಹಾಗೂ ಬೇಸ್ ಎರಡು ಎಂಬ ವಿಭಾಗಗಳನ್ನು ಮಾಡಲಾಗಿತ್ತು. 280 ಮಂದಿ ಗ್ಯಾಂಗ್ ಮನ್, 27 ಮಂದಿ ಗೆಜೆಟೆಡ್ ಅಧಿಕಾರಿಗಳು, 27 ಮಂದಿ ಐಡೆಂಟಿಫೈ ಅಧಿಕಾರಿಗಳು, ಇಬ್ಬರು ಫೇಸ್ ಅಧಿಕಾರಿಗಳು, ಒಂಬತ್ತು ಎಸಿ ಸ್ಕ್ವಾಡ್ ಅನ್ನು ನಿಯೋಜಿಸಲಾಗಿದೆ.
(ದಟ್ಸ್ ಕನ್ನಡ ವಾರ್ತೆ)
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications