ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರುಣಾಕರ ರೆಡ್ಡಿ ರಾಜೀನಾಮೆಗೆ ಎಚ್ಡಿಕೆ ಆಗ್ರಹ

|
Google Oneindia Kannada News

HD Kumaraswamy
ಬೆಂಗಳೂರು, ಅ. 26 : ರೆಡ್ಡಿ ಮತ್ತು ಸಿಎಂ ನಡುವೆ ಮುಸುಕಿನ ಗುದ್ದಾಟ ಆರಂಭವಾಗಿರುವ ಬೆನ್ನಲ್ಲೇ ಅದರ ಲಾಭ ಪಡೆಯಲು ಪ್ರತಿಪಕ್ಷಗಳು ನಿರತವಾಗಿವೆ. ಸ್ವಾಭಿಮಾನ ಇದ್ದರೆ ಕಂದಾಯ ಸಚಿವ ಕರುಣಾಕರರೆಡ್ಡಿ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಕೆಣಕಿದ್ದಾರೆ.

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನೆರೆ ಪರಿಹಾರದ ವಿಚಾರದಲ್ಲಿ ಮುಖ್ಯಮಂತ್ರಿ ಕಂದಾಯ ಸಚಿವರನ್ನೇ ಕಡೆಗಣಿಸಿದ್ದಾರೆ ಎಂಬ ಮಾಧ್ಯಮ ವರದಿಗಳು ಬರುತ್ತಿವೆ. ಇದು ನಿಜವೇ ಆಗಿದ್ದರೆ ಕರುಣಾಕರರೆಡ್ಡಿ ಒಂದು ನಿಮಿಷವೂ ಸಚಿವ ಸ್ಥಾನದಲ್ಲಿ ಮುಂದುವರಿಯಬಾರದು ಎಂದಿದ್ದಾರೆ.

ನೆರೆ ಹಾಗೂ ಬರ ಬಂದಾಗ ಅದರ ನಿರ್ವಹಣೆಯ ಜವಾಬ್ದಾರಿ ಇರುವುದು ಕಂದಾಯ ಸಚಿವರಿಗೆ, ಆದರೆ ಮುಖ್ಯಮಂತ್ರಿ ಕಚೇರಿಯೇ ನೇರವಾಗಿ ತೀರ್ಮಾನ ಮಾಡುತ್ತಿದೆ. ಸಂಸದರೊಬ್ಬರ ನೇತೃತ್ವದಲ್ಲಿ ಉಸ್ತುವಾರಿ ಸಮಿತಿ ರಚನೆ ಮಾಡುತ್ತಾರೆ. ಇದರಿಂದ ಸ್ಪಷ್ಟವಾಗುವುದೇನೆಂದರೆ, ಕಂದಾಯ ಸಚಿವರನ್ನು ಮುಖ್ಯಮಂತ್ರಿಗಳು ಸಂಪೂರ್ಣವಾಗಿ ನಿರ್ಲಕ್ಷಿಸಿದ್ದಾರೆ ಎಂದರು.

(ದಟ್ಸ್ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X