ವಿಮಾನಕ್ಕೆ ಹುಸಿ ಬಾಂಬ್ ಇಟ್ಟ ಇನ್ಫಿ ಟೆಕ್ಕಿ

ಇತ್ತೀಚೆಗೆ ಮುಂಬೈ ಮೂಲದ ವೈದ್ಯನೊಬ್ಬ ಕೆಲಸದ ಒತ್ತಡದಿಂದ ವಿಮಾನ ನಿಲ್ದಾಣಕ್ಕೆ ಸಮಯ ಸರಿಯಾಗಿ ಬರಲು ಸಾಧ್ಯವಾಗದಿದ್ದರಿಂದ ವಿಮಾನದಲ್ಲಿ ಬಾಂಬ್ ಇದೆ ಎಂಬ ಹುಸಿ ಕರೆ ಮಾಡಿ ಪೊಲೀಸರ ಅತಿಥಿಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿತ್ತು. ಇದರ ಬೆನ್ನಲ್ಲೇ ಬೆಂಗಳೂರಿನ ಇನ್ಫೋಸಿಸ್ ನಲ್ಲಿ ಸಾಫ್ಟ್ ವೇರ್ ಇಂಜಿನಿಯರ್ ಆಗಿರುವ ವ್ಯಕ್ತಿಯೊಬ್ಬ ವಿಮಾನದಲ್ಲಿ ಬಾಂಬ್ ಇರಿಸಲಾಗಿದೆ ಎಂದು ಹುಸಿ ಕರೆ ಮಾಡಿ ಪೊಲೀಸರ ಅತಿಥಿಯಾದ ಘಟನೆ ನವದೆಹಲಿಯಲ್ಲಿ ಭಾನುವಾರ ನಡೆದಿದೆ.
ಅಭಿಷೇಕ್ ಗುಪ್ತಾ (25) ವಿಮಾನದಲ್ಲಿ ಬಾಂಬ್ ಇದೆ ಎಂದು ಹುಸಿ ಕರೆ ಮಾಡಿರುವ ಭೂಪ. ಲಖನೌದಲ್ಲಿದ್ದ ಈತ ರೈಲಿನಲ್ಲಿ ದೆಹಲಿಗೆ ಬರಬೇಕಿತ್ತು. ಆ ಬಳಿಕ ವಿಮಾನದಲ್ಲಿ ಬೆಂಗಳೂರು ತಲುಪಬೇಕಿತ್ತು. ಲಖನೌ ರೈಲು ಬೆಳಗ್ಗೆ 6 ಗಂಟೆಗೆ ತಲುಪುತ್ತದೆ. ಬೆಳಗ್ಗೆ 8.45ಕ್ಕೆ ದಿಲ್ಲಿಯಿಂದ ಬೆಂಗಳೂರಿಗೆ ಗೋ ಏರ್ ವಿಮಾನ ಸೇವೆ ಇದೆ. ಅಭಿಷೇಕ್ ಪ್ರಯಾಣ ನಿಗದಿಪಡಿಸಿಕೊಂಡಿದ್ದ. ಆದರೆ, 6ಕ್ಕೆ ದಿಲ್ಲಿ ತಲುಪಬೇಕಿದ್ದ ರೈಲು ಆಗಮನ ವಿಳಂಬವಾಗಿದೆ.
ತಾನು ವಿಮಾನ ನಿಲ್ದಾಣಕ್ಕೆ ಹೋಗುವಷ್ಟರಲ್ಲಿ ಗೋ ಏರ್ ವಿಮಾನ ಹಾರಿಹೋಗುತ್ತದೆ ಎನ್ನುವುದನ್ನು ಅರಿತ ಅಭಿಷೇಕ್ ವಿಮಾನಯಾನ ಸಂಸ್ಥೆಯ ಕಾಲ್ ಸೆಂಟರ್ ಗೆ ಫೋನಾಯಿಸಿ ವಿಳಂಬದ ಬಗ್ಗೆ ವಿವರಿಸಿದ್ದಾನೆ. ಮೊದಲ ವಿಮಾನದ ಬದಲಿಗೆ ಎರಡನೇ ವಿಮಾನದಲ್ಲಿ ಬೆಂಗಳೂರಿಗೆ ಕಳುಹಿಸಲು ವ್ಯವಸ್ಥೆ ಮಾಡಿ ಎಂದ ಕೇಳಿದ, ಗೋ ಏರ್ ಸಿಬ್ಬಂದಿ ಅದನ್ನು ತಿರಸ್ಕರಿಸಿದೆ. ಹೀಗಾಗಿ ಇನ್ನೊಂದು ಸಾರಿ ಕಾಲ್ ಸೆಂಟರ್ ಗೆ ಫೋನ್ ಮಾಡಿ ವಿಮಾನದಲ್ಲಿ ಬಾಂಬ್ ಇದೆ ಎಂದು ಹುಸಿ ಕರೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಅಭಿಷೇಕ್ ನನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.
(ಏಜನ್ಸೀಸ್)
-
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ












Click it and Unblock the Notifications