ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೆಎಂಎಫ್ : ಸದಾನಂದಗೌಡ ರಾಜೀನಾಮೆ ?

|
Google Oneindia Kannada News

DV Sadananda gowda
ಬೆಂಗಳೂರು, ಅ. 27 : ಬಳ್ಳಾರಿಯ ರೆಡ್ಡಿಗಳು ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಸಮರ ಸಾರಿರುವ ಬೆನ್ನಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಡಿವಿ ಸದಾನಂದಗೌಡ ಅವರ ಸಿಎಂ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೆಎಂಎಫ್ ಅಧ್ಯಕ್ಷರನ್ನಾಗಿಸುವ ಭರವಸೆ ನೀಡಿದ್ದ ಮುಖ್ಯಮಂತ್ರಿಗಳು ಮಾತಿಗೆ ತಪ್ಪಿರುವುದೇ ಇದಕ್ಕೆ ಕಾರಣವಾಗಿದೆ.

ಬಲ್ಲ ಮೂಲಗಳ ಪ್ರಕಾರ ಸದಾನಂದಗೌಡ ಅವರು ತಮ್ಮ ಆಪ್ತರೊಂದಿಗೆ ಈ ವಿಷಯವನ್ನು ಹಂಚಿಕೊಂಡಿದ್ದು, ಕೆಎಂಎಫ್ ಅಧ್ಯಕ್ಷ ಸ್ಥಾನ ದೊರೆಯದಿದ್ದರೆ ಕೆಎಂಎಫ್ ನಿರ್ದೇಶಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದ್ದಾರೆ. ಸದಾನಂದಗೌಡ ಅವರ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಅಧಿಕಾರ ಅವಧಿ ಇದೇ ಡಿಸೆಂಬರ್ ಗೆ ಮುಗಿಯಲಿದೆ. ಈ ಹಿನ್ನೆಲೆಯಲ್ಲಿ ಕೆಎಂಎಫ್ ಅಧ್ಯಕ್ಷ ಸ್ಥಾನವನ್ನು ನೀಡುವುದಾಗಿ ಮುಖ್ಯಮಂತ್ರಿಗಳು ಮಾತು ಕೊಟ್ಟಿದ್ದರು. ಆದರೆ, ಬಳ್ಳಾರಿಯ ಸೋಮಶೇಖರರೆಡ್ಡಿ ಅವರನ್ನು ಕೆಎಂಎಫ್ ಅಧ್ಯಕ್ಷರನ್ನಾಗಿಸಿದ್ದು, ಗೌಡರ ಮುನಿಸಿಗೆ ಕಾರಣವಾಗಿದೆ. ಜೊತೆಗೆ ಯಡಿಯೂಪ್ಪ ಅವರ ಆಪ್ತ ಸಹಾಯಕ ವಿ ಪಿ ಬಳಿಗಾರ್ ಮತ್ತು ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ನೀಡಿರುವ ಪ್ರಾಮುಖ್ಯತೆ ಸದಾನಂದಗೌಡರ ಕಣ್ಣು ಕೆಂಪಗಾಗಿಸಿದೆ.

ರೆಡ್ಡಿಗಳು ಎಬ್ಬಿಸಿರುವ ಧೂಳಿಗೆ ಬಿಜೆಪಿ ಕಾದಕೆಂಡದಂತಾಗಿದ್ದು, ಸದಾನಂದಗೌಡ ಅವರ ಈ ನಿಲುವು ಯಡಿಯೂರಪ್ಪ ಅವರನ್ನು ಮತ್ತಷ್ಟು ಇಕ್ಕಟ್ಟಿಗೆ ಸಿಲುಕಿಸುವ ಸಾಧ್ಯತೆಯಂತೂ ತಳ್ಳಿಹಾಕುವಂತಿಲ್ಲ. ರೆಡ್ಡಿಗಳು ನಾಯಕತ್ವ ಬದಲಾವಣೆ ಮಾಡಬೇಕು ಎಂದು ಪಟ್ಟು ಹಿಡಿದಿರುವುದು ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

(ದಟ್ಸ್ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X