ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಲವ್ ಜಿಹಾದ್ ಸಿಐಡಿ ತನಿಖೆಗೆ : ಆಚಾರ್ಯ

|
Google Oneindia Kannada News

VS Acharya
ಬೆಂಗಳೂರು, ಅ. 27 : ಲವ್ ಜಿಹಾದ್ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲಾಗಿದೆ. ಗೃಹ ಸಚಿವ ವಿ ಎಸ್ ಆಚಾರ್ಯ ನೇತೃತ್ವದಲ್ಲಿ ಡಿಐಜಿ ಅಜಯಕುಮಾರ್ ಸಿಂಗ್, ಅಗ್ನಿಶಾಮಕ ಹಾಗೂ ತುರ್ತು ಸೇವೆ ವಿಭಾಗದ ಮುಖ್ಯಸ್ಥ ಜೀಜಾ ಹರಿಸಿಂಗ್, ಸಿಐಡಿ ಪೊಲೀಸ್ ಮಹಾನಿರ್ದೇಶಕ ಡಿವಿ ಗುರುಪ್ರಸಾದ್, ಎಡಿಜಿಪಿ ಕಾನೂನು ಸುವವ್ಯಸ್ಥೆ ಎ ಆರ್ ಇನ್ಫಂಟ್ ಮತ್ತು ಬೆಂಗಳೂರು ಪೊಲೀಸ್ ಆಯುಕ್ತ ಶಂಕರ ಬಿದರಿ ಪಾಲ್ಗೊಂಡಿದ್ದ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ.

ಲವ್ ಜಿಹಾದ್ ಹೆಸರಿನಲ್ಲಿ ಯುವತಿಯರು ಬಲವಂತವಾಗಿ ಮತಾಂತರಗೊಂಡಿದ್ದಾರೆಯೇ ? ಈ ಜಾಲದ ಹಿಂದೆ ಯಾವ ಸಂಘಟನೆ ಇದೆ ? ಹಣಕಾಸಿನ ನೆರವು ಎಲ್ಲಿಂದ ಬರುತ್ತಿದೆ ಮತ್ತಿತರ ವಿಚಾರಗಳ ಬಗ್ಗೆ ಸೂಚನೆ ನೀಡಲಾಗಿದೆ ಎಂದು ಸಭೆ ಬಳಿಕ ಸಚಿವ ಆಚಾರ್ಯ ಮಾಧ್ಯಮ ಪ್ರತಿನಿಧಿಗಳಿಗೆ ವಿವರಿಸಿದರು.

ಮಾನವ ಕಳ್ಳ ಸಾಗಣೆ ವಿರೋಧಿ ಡಿಐಜಿ ಮಾಲಿನಿ ಕೃಷ್ಣಮೂರ್ತಿ ಅವರನ್ನು ತನಿಖಾ ಮುಖ್ಯಸ್ಥರಾಗಿ ನೇಮಕ ಮಾಡಲಾಗಿದೆ. ಕೇರಳಕ್ಕೂ ಒಂದು ತಂಡವನ್ನು ಕಳುಹಿಸಲು ನಿರ್ಧರಿಸಲಾಗಿದ್ದು, ಲವ್ ಜಿಹಾದ್ ನಡೆದಿದೆ ಎನ್ನಲಾದ ನಾಲ್ಕು ಜಿಲ್ಲೆಗಳಿಗೆ ಎಸ್ಪಿ ದರ್ಜೆಯ ಅಧಿಕಾರಿ ನೇತೃತ್ವದಲ್ಲಿ ಪ್ರತ್ಯೇಕ ತಂಡ ತೆರಳಿ ಮಾಹಿತಿ ಸಂಗ್ರಹಿಸಲಿದೆ.

(ದಟ್ಸ್ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X