ರೆಡ್ಡಿ ವಿರುದ್ದ ಯಡಿಯೂರಪ್ಪ ರಣಕಹಳೆ

ಡಾಲರ್ಸ್ ಕಾಲೋನಿಯ ತಮ್ಮ ನಿವಾಸದಲ್ಲಿ ರೆಡ್ಡಿ ಬೆಂಬಲಿಗ ಸಚಿವರನ್ನು ಹೊರತುಪಡಿಸಿ 26 ಸಚಿವರ ಸಭೆ ನಡೆಸಿದ ಯಡಿಯೂರಪ್ಪ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಇತ್ತೀಚೆಗೆ ಮಾಧ್ಯಮಗಳಲ್ಲಿ ಬರುತ್ತಿರುವ ಸಂಗತಿಗಳನ್ನು ಅಲ್ಲಗಳೆಯುವುದಿಲ್ಲ ಎಂದು ತಮ್ಮ ಮತ್ತು ರೆಡ್ಡಿಗಳ ನಡುವೆ ಭಿನ್ನಾಭಿಪ್ರಾಯ ಇರುವುದನ್ನು ಒಪ್ಪಿಕೊಂಡರು.
ನೆರೆ ಸಂತ್ರಸ್ಥರಿಗೆ ಮನೆ ನಿರ್ಮಾಣ ಮಾಡುವುದು ಸರಕಾರದ ಗುರಿ. ಈ ಬಗ್ಗೆ ಇಂದಿನ ಸಚಿವರ ಸಭೆಯಲ್ಲಿ ನಡೆಸಲಾಯಿತು. ಜೊತೆಗೆ ನವೆಂಬರ್ 2 ರಂದು ಸರಕಾರ ಮತ್ತು ಖಾಸಗಿ ಸಹಭಾಗಿತ್ವದಲ್ಲಿ ಸಂತ್ರಸ್ಥರಿಗೆ ಮನೆ ನಿರ್ಮಾಣ ಕಾರ್ಯಕ್ರಮದ ಶಂಕುಸ್ಥಾಪನೆ ಕಾರ್ಯಕ್ರಮ ಏರ್ಪಡಿಸಲಾಗಿದೆ. ಕೇಂದ್ರ ಗೃಹ ಸಚಿವ ಪಿ ಚಿದಂಬರಂ ಕಾರ್ಯಕ್ರಮ ಉದ್ಘಾಟಿಸಲು ಒಪ್ಪಿಕೊಂಡಿದ್ದಾರೆ. ಮಾಜಿ ರಾಷ್ಟ್ರಪತಿ ಅಬ್ಧುಲ್ ಕಲಾಂ ಹಾಗೂ ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡರಿಗೂ ಕಾರ್ಯಕ್ರಮಕ್ಕೆ ಆಹ್ವಾನ ನೀಡಲಾಗುವುದು. ಸಾಧ್ಯವಾದರೆ ಇಂದು ಮಧ್ಯಾಹ್ನ ದೇವೇಗೌಡರನ್ನು ಭೇಟಿ ಮಾಡಿ ಅಹ್ವಾನಿಸುತ್ತೇನೆ ಎಂದು ಯಡಿಯೂರಪ್ಪ ಹೇಳಿದರು.
(ದಟ್ಸ್ ಕನ್ನಡ ವಾರ್ತೆ)












Click it and Unblock the Notifications