ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬೆಂಕಿಗೆ ತುಪ್ಪ ಸುರುವಿದ ಯಡಿಯೂರಪ್ಪ!

|
Google Oneindia Kannada News

BS Yeddyurappa
ಬೆಂಗಳೂರು, ಅ. 28 : ರೆಡ್ಡಿ ಮತ್ತು ತಮ್ಮ ಮದ್ಯೆ ಹೊತ್ತಿ ಉರಿಯುತ್ತಿರುವ ಬೆಂಕಿಗೆ ಸ್ವತಃ ಮುಖ್ಯಮಂತ್ರಿ ಯಡಿಯೂರಪ್ಪ ಅವರೇ ತುಪ್ಪ ಸುರುವಿದ್ದಾರೆ. ಬಳ್ಳಾರಿಯ ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿ ಮತ್ತು ಅರಣ್ಯಾಧಿಕಾರಿ ಅವರನ್ನು ದಿಢೀರ್ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ.

ಈ ಮೂಲಕ ರೆಡ್ಡಿ ಮತ್ತು ಯಡಿಯೂರಪ್ಪ ನಡುವೆ ಭಾರಿ ಕಂದಕ ನಿರ್ಮಾಣ ಆಗಿರುವುದು ಸಾಬೀತಾಗಿದೆ. ಅಶಿಸ್ತಿನ ನೆಪದಲ್ಲಿ ಬಳ್ಳಾರಿ ಜಿಲ್ಲಾಧಿಕಾರಿ ಬಿ ಶಿವಪ್ಪ, ಪೊಲೀಸ್ ವರಿಷ್ಠಾಧಿಕಾರಿ ಸೀಮಂತ್ ಕುಮಾರ್ ಸಿಂಗ್ ಹಾಗೂ ಅರಣ್ಯಾಧಿಕಾರಿ ಮುತ್ತಯ್ಯ ವರ್ಗಾವಣೆಗೊಂಡ ಅಧಿಕಾರಿಗಳಾಗಿದ್ದಾರೆ.

ಇವರ ಬದಲಿಗೆ ಹರ್ಷಾ ಗುಪ್ತಾ, ಡಿಸಿ ರಾಜಪ್ಪ ಮತ್ತು ಬಿಸ್ವಜಿತ್ ಮಿಶ್ರಾ ಅವರನ್ನು ಕ್ರಮವಾಗಿ ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿ ಮತ್ತು ಅರಣ್ಯಾಧಿಕಾರಿಯಾಗಿ ನೇಮಿಸಿ ಆದೇಶ ಹೊರಡಿಸಿದ್ದಾರೆ. ಅಲ್ಲದೇ ಆರೋಗ್ಯ ಇಲಾಖೆ ಪ್ರದಾನ ಕಾರ್ಯದರ್ಶಿ ಪೆರುಮಾಳ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಮದನ್ ಗೋಪಾಲ್ ಅವರನ್ನು ಅರೋಗ್ಯ ಇಲಾಖೆ ಪ್ರದಾನ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ.

(ದಟ್ಸ್ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X