ಶ್ರೀರಾಮುಲು ಹುಲಿ, ನೀಚ ಸಿಎಂಗೆ ಬುದ್ಧಿಬರಲಿ

ಉತ್ತರ ಕರ್ನಾಟಕದ ನವಗ್ರಾಮಗಳಲ್ಲಿ ನೆರೆ ಸಂತ್ರಸ್ತರಿಗಾಗಿ ಐವತ್ತು ಸಾವಿರ ಮನೆ ಕಟ್ಟಿಸುವ ನವಗ್ರಾಮ ಯೋಜನೆಗೆ ಶಂಕುಸ್ಥಾಪನೆ ಹಾಕಿದ ಸಂದರ್ಭದಲ್ಲಿ ರೆಡ್ಡಿ ಸಹೋದರರು ಮತ್ತು ಶ್ರೀರಾಮುಲು ಅವರ ಆಕ್ರೋಶ ಮುಗಿಲು ಮುಟ್ಟಿತ್ತು.
ಪ್ರತಿ ಹಂತದಲ್ಲೂ ಪರೋಕ್ಷವಾಗಿ ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ವಾಗ್ದಾಳಿ ನಡೆಸಿದರು. ಬೆಂಗಳೂರಿನಲ್ಲಿ ಹೊಟ್ಟೆಕಿಚ್ಚು ಮಂದಿ ಬಹಳ ಜನ ಇದ್ದಾರೆ. ಬರೀ ಮಾತಿನ ಮೂಲಕ ಮಾತನಾಡಿದ್ದಾರೆ. ಅವರಿಂದ ಏನೂ ಮಾತನಾಡಲು ಸಾಧ್ಯವಿಲ್ಲ ಎಂದು ಶ್ರೀರಾಮುಲು ಗುಡುಗಿದರು.
ನಂತರ ಮಾತು ಆರಂಭಿಸಿದ ಜನಾರ್ದನ ರೆಡ್ಡಿ ಪ್ರತಿ ಹಂತದಲ್ಲೂ ಯಡಿಯೂರಪ್ಪ ವಿರುದ್ಧ ದಾಳಿ ನಡೆಸಿದರು. ರಾಜಕೀಯ ಪಿಶಾಚಿಗಳಿಗೆ ಹೆದರುವುದಿಲ್ಲ. ಜನರಿಂದ ಮೇಲೆ ಬಂದಿದ್ದೇವೆ. ನಾವು ಬಡವರು, ನಿಮ್ಮ ಆಶೀರ್ವಾದದಿಂದ ಮೇಲೆ ಬಂದಿದ್ದೇವೆ. ಒಳ್ಳೆ ಕೆಲಸಕ್ಕೆ ಅಡ್ಡ ಮಾಡುವವರೇ ಜಾಸ್ತಿ. ನಮ್ಮವರೇ ನಮಗೆ ಅಡ್ಡಗಾಲು ಹಾಕುತ್ತಿದ್ದಾರೆ. ಕೆಲವರಿಗೆ ವಯಸ್ಸಾದರೂ ಬುದ್ಧಿ ಬಂದಿಲ್ಲ. ಡೋಂಟ್ ಕೇರ್, ನಿಮ್ಮ ನೀಚ ರಾಜಕಾರಣಕ್ಕೆ ನಾವು ಸೊಪ್ಪು ಹಾಕುವುದಿಲ್ಲ. ನಾವು ಉಗ್ರವಾದಿಗಳಲ್ಲ. ನಿಮ್ಮ ಸುತ್ತಮುತ್ತ ಇರುವವರು ಉಗ್ರಗಾಮಿಗಳಿದ್ದಾರೆ. ಅವರನ್ನು ಹದ್ದುಬಸ್ತಿನಲ್ಲಿಡಿ ಎಂದು ಯಡಿಯೂರಪ್ಪ ವಿರುದ್ಧ ವಾಗ್ದಾಳಿ ನಡೆಸಿದರು.
ಉತ್ತರ ಕರ್ನಾಟಕದ ನಿಜವಾದ ಹುಲಿ ಶ್ರೀರಾಮುಲು. ಅವರು ಮಾತು ಕೊಟ್ಟರೆ ತಪ್ಪುವುದಿಲ್ಲ. ತಪ್ಪಿದರೆ ಪ್ರಾಣ ಕೊಡಲೂ ಅವರು ಸಿದ್ಧ. ನಾವೂ ಬಡವರಾಗಿದ್ದೆವು. ಬಡತನದಲ್ಲಿಯೇ ಬೆಳೆದಿದ್ದೇವೆ. ನಾವು ಶ್ರೀಮಂತರಾಗಿರುವುದು ಶ್ರೀರಾಮುಲು ಅವರಂಥ ಹೃದಯ ಶ್ರೀಮಂತರಿಂದ, ನಿಮ್ಮ ಬೆಂಬಲದಿಂದ ಎಂದು ಜನಾರ್ದನ ರೆಡ್ಡಿ ನುಡಿದರು.
ಮುಖ್ಯಮಂತ್ರಿಗಳ ವಿರುದ್ದ ಸೆಡ್ಡು ಹೊಡೆದಿರುವ ರೆಡ್ಡಿಗಳು ಇಂದು ಮುಖ್ಯಮಂತ್ರಿಗಳ ಅನುಪಸ್ಥಿತಿಯಲ್ಲಿ ನೆರೆ ಸಂತ್ರಸ್ತರ ನೆರವಿಗಾಗಿ ನವಗ್ರಾಮಗಳ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಲಾಯಿತು. ಕಂದಾಯ ಸಚಿವ ಕರುಣಾಕರರೆಡ್ಡಿ ಜ್ಯೋತಿ ಬೆಳಗಿಸುವ ಮೂಲಕ ನವಗ್ರಾಮಗಳ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ವರ್ಗಾವಣೆಯಾಗಿರುವ ಬಳ್ಳಾರಿ ಜಿಲ್ಲಾಧಿಕಾರಿ ಬಿ ಶಿವಪ್ಪ, ಎಸ್ ಪಿ ಸೀಮಂತ ಕುಮಾರ್ ಸಿಂಗ್ ಮತ್ತು ಉಪ ಅರಣ್ಯ ಸಂರಕ್ಷಣಾಧಿಕಾರಿ ಮುತ್ತಯ್ಯ ಅವರು ಕೂಡ ಸಮಾರಂಭದಲ್ಲಿ ಭಾಗವಹಿಸಿದ್ದರು.
(ದಟ್ಸ್ ಕನ್ನಡ ವಾರ್ತೆ)
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications