ಸಿಎಂ ಬಗ್ಗೆ ಗೌರವ : ರೆಡ್ಡಿ ಯುಟರ್ನ್

ಬುಧವಾರ ಯಡಿಯೂರಪ್ಪ ಅವರನ್ನು ನೀಚ, ನರಿ, ಬುದ್ಧಿ ಇಲ್ಲದ ಸಿಎಂ ಹೀಗೆ ಮನಬಂದಂತೆ ವಾಗ್ದಾಳಿ ನಡೆಸಿದ್ದ ಜನಾರ್ದನರೆಡ್ಡಿ, ಇಂದು ಸಂಪೂರ್ಣ ಯು ಟರ್ನ್ ತೆಗೆದುಕೊಂಡಿದ್ದಾರೆ. ಇಂದು ಸಂಜೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ಅವರ ಬಗ್ಗೆ ಈ ಕ್ಷಣದವರೆಗೂ ಅಪಾರ ಗೌರವ ಹಾಗೂ ಸಂಪೂರ್ಣ ವಿಶ್ವಾಸವಿದೆ. ಆದರೆ, ಮುಖ್ಯಮಂತ್ರಿಗಳ ಸುತ್ತಮುತ್ತ ಇರುವ ಕೆಲ ಸಚಿವರು ಅವರನ್ನು ದಾರಿ ತಪ್ಪಿಸುತ್ತಿದ್ದಾರೆ. ನೆರೆ ಸಂತ್ರಸ್ತರ ವಿಷಯಕ್ಕೆ ಸಂಬಂಧಿಸಿದಂತೆ ಮಂತ್ರಿ ಮಂಡಲದ ದುಷ್ಟ ಮಂತ್ರಿಗಳ ಮಾತು ಕೇಳಿದ ಸಿಎಂ ನಮಗೆ ಸಾಕಷ್ಟು ನೋವು ಆಗುವ ರೀತಿಯಲ್ಲಿ ನಡೆದುಕೊಂಡಿದ್ದಾರೆ ಎಂದು ಆರೋಪಿಸಿದರು.
'ವಿನಾಶಕಾಲೇ ವಿಪರೀತ ಬುದ್ಧಿ' ಎನ್ನುವ ಹಾಗೆ ಕೆಲ ಮಂತ್ರಿಗಳ ಮಾತು ಕೇಳಿ ಮುಖ್ಯಮಂತ್ರಿಗಳು ಕಂದಾಯ ಸಚಿವ ಕರುಣಾಕರರೆಡ್ಡಿ ಅವರನ್ನೇ ಮೂಲಗುಂಪಾಗಿಸಿದ್ದಾರೆ. ಇದಕ್ಕೆ ಕಾರಣ ಏನು ಎಂದು ಪ್ರಶ್ನಿಸಿದ ಜನಾರ್ದನರೆಡ್ಡಿ, ನೆರೆ ಸಂತ್ರಸ್ತರಿಗೆ ಮನೆ ಕಟ್ಟಿಸಿಕೊಡಲು ಗಣಿ ಮಾಲೀಕರು ಮುಂದೆ ಬಂದರೆ ಅದಕ್ಕೆ ಅಡ್ಡಗಾಲು ಹಾಕುವುದಾದರೂ ಏಕೆ ಎಂದರು. ಮುಖ್ಯಮಂತ್ರಿಗಳ ಈ ನಿರ್ಧಾರದಲ್ಲಿ ಯಡಿಯೂರಪ್ಪ ಸುತ್ತ ಇರುವ ಕೆಲ ದುಷ್ಟ ಮಂತ್ರಿಗಳ ಕೈವಾಡವಿದೆ. ಕರುಣಾಕರರೆಡ್ಡಿ ಅವರ ನೇತೃತ್ವದಲ್ಲಿ ಮನೆಗಳ ನಿರ್ಮಾಣ ಮಾಡಿದರೆ ರೆಡ್ಡಿಗಳು ರಾಜಕೀಯವಾಗಿ ಮತ್ತಷ್ಟು ಪ್ರಬಲರಾಗುತ್ತಾರೆ ಎಂದು ಸಿಎಂ ತಲೆಕೆಡಿಸಲಾಗಿದೆ ಎಂದು ಜನಾರ್ದನರೆಡ್ಡಿ ಕಿಡಿಕಾರಿದರು.
ನಾವು ಬಿಜೆಪಿಯಿಂದ ರಾಜಕೀಯ ಆರಂಭಿಸಿದವರು, ಇಲ್ಲಿಯೇ ನಮ್ಮ ರಾಜಕೀಯ ಜೀವನ ಅಂತ್ಯಗೊಳ್ಳಲಿದೆ. ಬೇರೆ ಪಕ್ಷಕ್ಕೆ ಹೋಗುವ ಮಾತೇ ಇಲ್ಲ. ತನುಮನಧನದಿಂದ ಪಕ್ಷವನ್ನು ಕಟ್ಟಿದ್ದೇವೆ. ಬಿಜೆಪಿಯನ್ನು ಬಿಟ್ಟು ಹೋಗುವುದಿಲ್ಲ. ಸರಕಾರ ಪಾರದರ್ಶಕವಾಗಿ ಸುಸೂತ್ರವಾಗಿ ನಡೆಯಬೇಕು ಎಂಬುದು ನಮ್ಮ ಆಗ್ರಹ. ಉತ್ತಮ ನಾಯಕರ ಅವಶ್ಯಕತೆ ಇದೆ ಎಂದು ರೆಡ್ಡಿ ಹೇಳಿದರು.
ರೆಡ್ಡಿಗಳು ಬಂಡಾಯದಿಂದ ತಮ್ಮ ಒಂದು ಆಶಯ ಈಡೇರಿಸಿಕೊಂಡಿದ್ದಾರೆ. ತಮ್ಮ ನೇತೃತ್ವದಲ್ಲಿ ಗಣಿ ಮಾಲೀಕರು ನೆರೆ ಸಂತ್ರಸ್ತರಿಗೆ ಮನೆ ನಿರ್ಮಾಣ ಮಾಡಿ ಕೊಡುತ್ತಿರುವುದನ್ನು ರಾಜ್ಯಕ್ಕೆ ಮನವರಿಕೆ ಮಾಡಿಕೊಟ್ಟಿದ್ದಾರೆ. ಆದರೆ, ನಾಯಕತ್ವ ಬದಲಾವಣೆ ಸಾಧ್ಯವಾಗದಿದ್ದರೂ ಕೆಲ ಸಚಿವರು ಕೊಕ್, ಸಿಎಂ ಬಳಿ ಇರುವ ಅಧಿಕಾರಿಗಳ ವರ್ಗಾವಣೆ ಮಾಡಿಸುವಲ್ಲಿ ಯಶಸ್ವಿಯಾಗುವ ಸಾಧ್ಯತೆ ಇದೆ.
(ದಟ್ಸ್ ಕನ್ನಡ ವಾರ್ತೆ)
-
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ 3 ಜಾಗ ನಿಗದಿ: ಡಿಸಿಎಂ ಡಿ.ಕೆ ಶಿವಕುಮಾರ್ ಅಪ್ಡೇಟ್ಸ್ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್












Click it and Unblock the Notifications