ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನಿಂದನೆ : ರೆಡ್ಡಿಗಳ ವಿರುದ್ಧ ಗರಂ ಆದ ಸಿಎಂ

|
Google Oneindia Kannada News

ಬೆಂಗಳೂರು, ಅ. 29 : ರಾಜ್ಯದ ಮುಖ್ಯಮಂತ್ರಿಯಾಗಿರುವ ವ್ಯಕ್ತಿಯ ವಿರುದ್ಧ ಬಳ್ಳಾರಿ ಸಚಿವರು ಹಗುರವಾಗಿ ಮಾತನಾಡಿರುವ ಸಂಗತಿಯನ್ನು ಹೈಕಮಾಂಡ್ ಎದುರಿಗೆ ಪ್ರಸ್ತಾಪಿಸುವೆ. ಅವರ ವಿರುದ್ಧ ಕಠಿಣ ಕ್ರಮಕೈಗೊಳ್ಳಲು ಚಿಂತನೆ ನಡೆಸಿರುವ ವಿಚಾರವನ್ನು ಮುಖ್ಯಮಂತ್ರಿ ಬಹಿರಂಗಪಡಿಸಿದರು.

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನನ್ನ ಏಳ್ಗೆ ಸಹಿಸದ ಕೆಲ ವ್ಯಕ್ತಿಗಳು ನನ್ನ ವಿರುದ್ದ ಪಿತೂರಿ ಆರಂಭಿಸಿದ್ದಾರೆ ಎಂದು ಹರಿಹಾಯ್ದರು. ಮುಖ್ಯಮಂತ್ರಿ ಪದವಿಗೆ ಗೌರವ ಕೊಡದೆ ಮನಸ್ಸಿಗೆ ಬಂದಂತೆ ಮಾತನಾಡಿದ್ದಾರೆ. ಆ ಬಗ್ಗೆ ನನಗೆ ಅಸಮಾಧಾನವಿದೆ. ಇದನ್ನು ಹೈಕಮಾಂಡ್ ಮುಂದೆ ಇರಿಸಿ ಸೂಕ್ತ ಕ್ರಮಕ್ಕೆ ಒತ್ತಾಯಿಸುವೆ ಎಂದು ಎಚ್ಚರಿಕೆ ನೀಡಿದರು.

ಇಂತಹ ವ್ಯಕ್ತಿಗಳಿಗೆ ಹೆದರುವ ಪ್ರಶ್ನೆಯೇ ಇಲ್ಲ. ನನ್ನ ಅದ್ಯತೆ ಉತ್ತರ ಕರ್ನಾಟಕ ನೆರೆ ಸಂತ್ರಸ್ತರಿಗೆ ಮನೆ ನಿರ್ಮಿಸುವುದು. ಅದು ನಿರಾಂತಕವಾಗಿ ನಡೆಯಲಿದೆ. ನವೆಂಬರ್ 1 ರಂದು ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು ಎಂದು ಹೇಳಿದರು. ಬುಧವಾರ ಬಳ್ಳಾರಿ ಜಿಲ್ಲೆಯ ಸಿರಗುಪ್ಪಾ ತಾಲ್ಲೂಕಿನಲ್ಲಿ ಏರ್ಪಡಿಸಲಾಗಿದ್ದ ನವಗ್ರಾಮ ಯೋಜನೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಜನಾರ್ದನರೆಡ್ಡಿ ಮತ್ತು ಶ್ರೀರಾಮುಲು ಮುಖ್ಯಮಂತ್ರಿ ಯಡಿಯೂರಪ್ಪ ವೈಯಕ್ತಿಕ ವಾಗ್ದಾಳಿ ನಡೆಸಿದ್ದರು.

(ದಟ್ಸ್ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X