ಕರ್ನಾಟಕದ ಹಣಕಾಸು ಪರಿಸ್ಥಿತಿ ಸುಭದ್ರ
ಬೆಂಗಳೂರು,ಅ. 30 : ಕರ್ನಾಟಕವು 2004-05 ನೇ ಸಾಲಿನಿಂದ ಇಲ್ಲಿಯವರೆವಿಗೂ ಉತ್ತಮವಾದ ಆದಾಯವನ್ನು ಹೊಂದಿದೆ. ಬಿಎಸ್ಬಿಪಿ ಆಧಾರಿತ ವಿತ್ತೀಯ ಕೊರತೆ, ಸಾಲ ಬಾಕಿ ಮತ್ತು ಬಡ್ಡಿ ಪಾವತಿಯ ಅನುಪಾತವು ರೆವಿನ್ಯೂ ಆದಾಯದ ಶೇಕಡಾವಾರು ಹಿನ್ನೆಲೆಯಲ್ಲಿ ನಿಗದಿತ ಮಿತಿಯೊಳಗೇ ಇದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು.
ಭಾರತ ಸರ್ಕಾರದ ಕಂಟ್ರೋಲರ್ ಮತ್ತು ಆಡಿಟರ್ ಜನರಲ್ ಆಫ್ ಇಂಡಿಯಾ ಅವರೊಂದಿಗೆ ನಡೆದ ಸಭೆಯಲ್ಲಿ ರಾಜ್ಯದ ಹಣಕಾಸು ಪರಿಸ್ಥಿತಿಯನ್ನು ವಿವರಿಸುತ್ತಾ ಮುಖ್ಯಮಂತ್ರಿಗಳು ಮಾತನಾಡುತ್ತಿದ್ದರು.
ಕಂಟ್ರೋಲರ್ ಜನರಲ್ ವಿನೋದ್ರಾಯ್ ಅವರು ಇದಕ್ಕೆ ಉತ್ತರವಾಗಿ ಮಾತನಾಡಿ, ಅಭಿವೃದ್ಧಿ ಮತ್ತು ಮೂಲಭೂತ ಹಣಕಾಸಿನ ಉತ್ತಮ ನಿರ್ವಹಣೆಯ ಶ್ರೀಮಂತ ಪರಂಪರೆಯನ್ನು ಕನಾಟಕವು ಹೊಂದಿದೆ. ಕಳೆದ ವರ್ಷದಿಂದ ಜಗತ್ತು ಎದುರಿಸುತ್ತಿರುವ ಆರ್ಥಿಕ ಹಿನ್ನಡೆ ಪರಿಸ್ಥಿತಿಯ ಸವಾಲನ್ನು ರಾಜ್ಯವು ಸಮರ್ಥವಾಗಿ ಎದುರಿಸಿದೆ. ಮುಂದಿನ ಒಂದು ವರ್ಷದಲ್ಲಿ ಸಹಜಸ್ಥಿತಿಗೆ ರಾಜ್ಯ ಮರಳುವ ಎಲ್ಲ ಭರವಸೆಯೂ ಕಂಡುಬರುತ್ತಿದೆ ಎಂದು ಹೇಳಿದರು.
ಇತ್ತೀಚೆಗೆ ಸಂಭವಿಸಿದ ಅತಿವೃಷ್ಠಿ ಮತ್ತು ನೆರೆಹಾವಳಿಯ ಸಂಕಷ್ಟ ಪರಿಸ್ಥಿತಿಯನ್ನು ಅತ್ಯುತ್ತಮವಾಗಿ ನಿರ್ವಹಿಸಿದ ಜಿಲ್ಲಾ ಆಡಳಿತಗಳು ಮತ್ತು ರಾಜ್ಯದ ಸಮರ್ಥ ನಾಯಕತ್ವವನ್ನು ಅವರು ಪ್ರಶಂಸಿಸಿದರು. ಸಾರ್ವಜನಿಕ ಉದ್ದಿಮೆಗಳಿಗೆ ಸರ್ಕಾರವು ನೀಡುವ ಅನುದಾನವು ಬಳಕೆಯಾಗದೆ ಎಲ್ಲೆಲ್ಲಿ ಫಿಕ್ಸ್ಡ್ ಡಿಪಾಸಿಟ್ನಲ್ಲಿ ಉಳಿದಿದೆಯೋ ಅಂತಹ ಮೊತ್ತವನ್ನು ಇನ್ನಿತರ ಅಗತ್ಯ ಹಾಗೂ ಆದ್ಯ ಕಾರ್ಯಕ್ರಮಗಳಿಗೆ ಬಳಸುವುದು ಉತ್ತಮವೆಂದು ತಿಳಿಸಿದರು. ರಾಜ್ಯದ ಅಭಿವೃದ್ಧಿ ಯೋಜನೆಗಳಿಗೆ ಇನ್ನಷ್ಟು ಹೆಚ್ಚಿನ ಅನುದಾನವನ್ನು ನೀಡುವ ಭರವಸೆಯನ್ನೂ ಅವರು ನೀಡಿದರು.
(ದಟ್ಸ್ ಕನ್ನಡ ವಾರ್ತೆ)
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications