ಪುನರ್ವಸತಿ ಕಾರ್ಯ ಆರಂಭ : ಶೋಭಾ
ಬೆಂಗಳೂರು, ಅ. 30 : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವೆ ಶೋಭಾ ಕರಂದ್ಲಾಜೆ ಅವರು ನೆರೆಪೀಡಿತ ಜಿಲ್ಲೆಗಳ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ವಿಡಿಯೊಕಾನ್ಫರೆನ್ಸ್ ನಡೆಸಿ, ಇಲಾಖೆಯಿಂದ ಕೈಗೆತ್ತಿಕೊಳ್ಳಲಾಗಿರುವ ಪರಿಹಾರ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ನಡೆಸಿದರು.
ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಎಲ್ಲ ಜಿಲ್ಲೆಗಳಲ್ಲಿ ಇನ್ನು 15 ದಿನದೊಳಗೆ ಜನಜೀವನ ಸಹಜ ಸ್ಥಿತಿಗೆ ಮರಳುವುದು ಗ್ರಾಮಗಳಲ್ಲಿ ಕುಡಿಯುವ ನೀರಿನ ಸೌಲಭ್ಯ, ರಸ್ತೆ ದುರಸ್ತಿ ಕಾರ್ಯಗಳು ಸಮರೋಪಾದಿಯಲ್ಲಿ ನಡೆಯುತ್ತಿದ್ದು, ಜನ ನೆರೆಯನ್ನು ಮರೆಯುವ ರೀತಿಯಲ್ಲಿ ಪರಿಹಾರ ಕಾರ್ಯಗಳು ನಡೆಯಲಿವೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಪ್ರವಾಹ ಪೀಡಿತ ಹನ್ನೊಂದು ಜಿಲ್ಲೆಗಳಾದ ಬೀದರ್, ಗುಲ್ಬರ್ಗ, ರಾಯಚೂರು, ಬಳ್ಳಾರಿ, ಕೊಪ್ಪಳ, ಬೆಳಗಾವಿ, ಬಾಗಲಕೋಟೆ, ಬಿಜಾಪುರ, ಧಾರವಾಡ, ಗದಗ ಹಾಗೂ ಹಾವೇರಿ ಜಿಲ್ಲೆಗಳಿಂದ ಪ್ರವಾಹದಿಂದ ಸಂಭವಿಸಿದ ನಷ್ಟ, ಪರಿಹಾರ ಕಾರ್ಯಗಳ ಪ್ರಗತಿ ಪರಿಶೀಲನೆ ನಡೆಸಿದ ಅವರು ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಕೈಗೆತ್ತಿಕೊಳ್ಳಲಾಗಿರುವ ಎಲ್ಲ ಪರಿಹಾರ ಕಾಮಗಾರಿಗಳನ್ನು ನವೆಂಬರ್ 7ರೊಳಗೆ ಪೂರ್ಣಗೊಳಿಸಬೇಕು. ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಕುಡಿಯುವ ನೀರಿನ ಪೂರೈಕೆ ವ್ಯವಸ್ಥೆ ಸರಿಪಡಿಸಿದ ನಂತರ ನೀರಿನ ಗುಣಮಟ್ಟವನ್ನು ಕಡ್ಡಾಯವಾಗಿ ಪರೀಕ್ಷೆ ಮಾಡುವಂತೆ ಅವರು ಸೂಚಿಸಿದರು.
ನೆರೆ ನಷ್ಟ ಸಮೀಕ್ಷಾ ಕಾರ್ಯದಲ್ಲಿ ತೊಡಗಿರುವ ಗ್ರಾಮ ಪಂಚಾಯಿತಿ ಕಾರ್ಯದರ್ಶಿಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುವಂತೆ ಹಾಗೂ ಈ ಬಗ್ಗೆ ಮೇಲ್ವಿಚಾರಣೆ ನಡೆಸುವಂತೆ ಸಿಇಓಗಳಿಗೆ ನಿರ್ದೇಶನ ನೀಡಿದರು. ಗ್ರಾಮ ಪಂಚಾಯಿತಿ ಕಾರ್ಯದರ್ಶಿಗಳ ಖಾಲಿ ಇರುವ ಹುದ್ದೆಗಳಿಗೆ ಇತರ ಜಿಲ್ಲೆಗಳಿಂದ ನಿಯೋಜನೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.
ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಭಾರತ ಸರ್ಕಾರವು ರಾಜ್ಯಕ್ಕೆ 2300 ಕೋಟಿ ರೂಪಾಯಿಗಳ ಗುರಿ ನೀಡಿದ್ದು, ಈ ವರೆಗೆ 770 ಕೋಟಿ ರೂಪಾಯಿ ವೆಚ್ಚವಾಗಿದೆ. ನವೆಂಬರ್ ತಿಂಗಳ ಅಂತ್ಯದೊಳಗೆ ಶೇ. 50 ರಷ್ಟರ ಗುರಿ ಸಾಧಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ನೆರೆಪೀಡಿತ ಪ್ರದೇಶಗಳಲ್ಲಿ ಗ್ರಾಮಗಳ ಸ್ಥಳಾಂತರಕ್ಕೆ ಸಂಬಂಧಿಸಿದಂತೆ ಬಡಾವಣೆಗಳ ನಿರ್ಮಾಣ ಕಾರ್ಯವನ್ನೂ ಈ ಯೋಜನೆಯಡಿ ಕೈಗೆತ್ತಿಕೊಳ್ಳುವಂತೆ ಅವರು ತಿಳಿಸಿದರು.
(ದಟ್ಸ್ ಕನ್ನಡ ವಾರ್ತೆ)
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications