ಎಲ್ಲ ಬಿಕ್ಕಟ್ಟಿಗೆ ಈಯಮ್ಮನೇ ಕಾರಣ : ಶಾಂತಾ

ಶೋಭಾ ಕರಂದ್ಲಾಜೆ ಕಾರ್ಯವೈಖರಿ, ವಿವಿಧ ಇಲಾಖೆಯಲ್ಲಿನ ಹಸ್ತಕ್ಷೇಪ, ಸಚಿವ-ಸಂಸದರ ನಿರ್ಲಕ್ಷ್ಯದ ವಿರುದ್ಧ ರೆಡ್ಡಿ ಸಹೋದರರು, ಶ್ರೀರಾಮುಲು, ಹೊನ್ನಾಳಿ ಶಾಸಕ ರೇಣುಕಾಚಾರ್ಯ ಮತ್ತು ಸ್ವತಃ ಬಿಜೆಪಿ ರಾಜ್ಯಾಧ್ಯಕ್ಷರಾಗಿರುವ ಸದಾನಂದ ಗೌಡ ಅವರು ಧ್ವನಿ ಎತ್ತಿದ್ದರು. ಆದರೆ, ಬಿಜೆಪಿಯ 'ಐರನ್ ಲೇಡಿ' ಎಂಬಂತೆ ಬಿಂಬಿತವಾಗಿರುವ ಶೋಭಾ ವಿರುದ್ಧ ಮಹಿಳೆಯರೊಬ್ಬರು ಪ್ರಥಮ ಬಾರಿಗೆ ವಾಗ್ದಾಳಿ ನಡೆಸಿದ್ದಾರೆ.
ಬಿಜೆಪಿಯಲ್ಲಿ ಉದ್ಭವಾಗಿರುವ ಎಲ್ಲಾ ಬಿಕ್ಕಟ್ಟಿಗೆ ಈಯಮ್ಮನೇ ಕಾರಣ. ಬೇರೆ ಸಚಿವ ಕೆಲಸದಲ್ಲಿ ಅನವಶ್ಯಕವಾಗಿ ಹಸ್ತಕ್ಷೇಪ ಮಾಡುತ್ತಿದ್ದಾಳೆ. ಈ ರಾಜ್ಯದ ಸೆಕೆಂಡ್ ಮುಖ್ಯಮಂತ್ರಿ ತಾನೇ ಎಂಬಂತೆ ದುರಹಂಕಾರದಿಂದ ವರ್ತಿಸುತ್ತಿದ್ದಾಳೆ ಎಂದು ಶಾಂತಾ ಶಾಂತವಾಗಿಯೇ ಶೋಭಾ ವಿರುದ್ಧ ಹರಿಹಾಯ್ದಿದ್ದಾರೆ.
ನೆರೆ ಪರಿಹಾರ ಕಾರ್ಯದಲ್ಲೂ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಲಿ, ಸಂಸದರನ್ನಾಗಲಿ ವಿಶ್ವಾಸಕ್ಕೆ ತೆಗೆಕೊಂಡಿಲ್ಲ. ಎಲ್ಲ ತಾನು ಹೇಳಿದಂತೆಯೇ ನಡೆಯಬೇಕೆಂಬಂತೆ ವರ್ತಿಸುತ್ತಿದ್ದಾಳೆ. ಬಾಯಿ ಮುಚ್ಚಿಕೊಂಡಿದ್ದರೆ ಎಲ್ಲ ಸಮಸ್ಯೆಗಳಿಗೂ ಪರಿಹಾರ ಸಿಗುತ್ತಿತ್ತು. ಆದರೆ, ಈಗ ರಾಜೀನಾಮೆ ಬಗ್ಗೆ ಮಾತನಾಡುತ್ತಿದ್ದಾಳೆ. ಈಯಮ್ಮ ರಾಜೀನಾಮೆ ನೀಡಲೇಬೇಕು. ಆಗಲೇ ಎಲ್ಲ ಬಿಕ್ಕಟ್ಟೂ ಬಗೆಹರಿಯುತ್ತವೆ ಎಂದು ಶೋಭಾ ವಿರುದ್ಧ ಶಾಂತಾ ಕೆಂಡಕಾರಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications