ಹತ್ತು ವರ್ಷ ನಾನೇ ಸಿಎಂ: ಯಡಿಯೂರಪ್ಪ

ಪಕ್ಷದಲ್ಲಿ ಉಂಟಾಗಿರುವ ಬಿಕ್ಕಟ್ಟಿನ ಬಗ್ಗೆ ಪ್ರತಿಕ್ರಿಯಿಸುತ್ತಾ, ಜೀವನ ಎಂದರೆ ಚಾಲೆಂಜ್ ಇದ್ದಂತೆ. ಬಿಕ್ಕಟ್ಟನ್ನು ಚಾಲೆಂಜ್ ನಂತೆ ಸ್ವೀಕರಿಸಿ ಶೀಘ್ರದಲ್ಲೇ ಪರಿಹರಿಸಿಕೊಳ್ಳುತ್ತೇವೆ. ಎಲ್ಲಿಯವರೆಗೆ ಜನರ ಆಶೀರ್ವಾದ ಇರುತ್ತದೋ ಅಲ್ಲಿಯವರೆಗೂ ನಾನು ಮುಖ್ಯಮಂತ್ರಿಯಾಗಿ ಮುಂದುವರಿಯುತ್ತೇವೆ. ಇದರಲ್ಲಿ ಯಾವುದೇ ಅನುಮಾನ ಬೇಡ ಎಂದರು.
ಶ್ರೀರಾಮುಲು, ಕರುಣಾಕರ ರೆಡ್ಡಿ, ಜನಾರ್ದನರೆಡ್ಡಿ ಅಥವಾ ಯಡಿಯೂರಪ್ಪ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ. ಶೆಟ್ಟರ್ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂಬುದಷ್ಟೇ ಅವರೆಲ್ಲರ ಬೇಡಿಕೆ. ಅಷ್ಟೇ ವಿನಃ ನೀವಂದುಕೊಂಡಂತೆ ಇನ್ನೇನು ಆಗಿಲ್ಲ. ಸಮಸ್ಯೆ ಶೀಘ್ರದಲ್ಲೇ ಬಗೆಹರಿಯಲಿದೆ ಎಂದು ಪ್ರತಿಕ್ರಿಯಿಸಿದರು. ನವೆಂಬರ್ 4ರಂದು ಯಡಿಯೂರಪ್ಪ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.
ಸಿಎಂಗೆ 83 ಶಾಸಕರ ಬೆಂಬಲ: ಬಚ್ಚೇಗೌಡ
ಯಡಿಯೂರಪ್ಪ ಅವರಿಗೆ 83 ಶಾಸಕರ ಬೆಂಬಲವಿದೆ ಎಂದು ಕಾರ್ಮಿಕ ಸಚಿವ ಬಿ ಎನ್ ಬಚ್ಚೇಗೌಡ ಬೆಂಗಳೂರಿನಲ್ಲಿ ಸುದ್ದಿಗಾರರಿಗೆ ತಿಳಿಸಿದರು. ರೆಡ್ಡಿಗಳಿಗೆ ಅಷ್ಟು ಶಾಸಕರಬೆಂಬಲವಿದೆ, ಸಿಎಂಗೆ ಇಷ್ಟು ಶಾಸಕರ ಬೆಂಬಲವಿದೆ ಎಂದು ಮಾಧ್ಯಮಗಳಲ್ಲಿ ಬರುತ್ತಿರುವ ಸುದ್ದಿಗಳಲ್ಲಿ ಹುರುಳಿಲ್ಲ.ಹಾಗಾಗಿ ತಾವು ಈ ವಿಷಯವನ್ನ ಸ್ಪಷ್ಟಪಡಿಸಬೇಕಾಗಿದೆ ಎಂದರು.ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ ಎಂದು ಅರುಣ್ ಜೇಟ್ಲಿ ಹೇಳಿದ್ದಾರೆ. ರೆಡ್ಡಿಗಳು ಬಲವಂತವಾಗಿ ನಾನಾ ಆಮಿಷಗಳನ್ನು ಒಡ್ಡಿ ಶಾಸಕರನ್ನು ಕರೆದುಕೊಂಡು ಹೋಗಿದ್ದಾರೆ ಎಂದು ಬಚ್ಚೇಗೌಡ ಆರೋಪಿಸಿದರು.
ದೆಹಲಿಗೆ ದೌಡಾಯಿಸಿದ ಸ್ಪೀಕರ್ ಶೆಟ್ಟರ್
ಬಿಜೆಪಿ ಹೈಕಮಾಂಡ್ ಬುಲಾವ್ ಮೇರೆಗೆ ಸ್ಪೀಕರ್ ಜಗದೀಶ್ ಶೆಟ್ಟರ್ ಇಂದು ದೆಹಲಿಗೆ ಹೊರಟರು. ಇಂದು ರಾತ್ರಿ ಅವರು ಬಿಜೆಪಿ ವರಿಷ್ಠರೊಂದಿಗೆ ಮಾತುಕತೆ ನಡೆಸಲಿದ್ದಾರೆ. ಬಿಕ್ಕಟ್ಟಿನ ಬಗ್ಗೆ ಪ್ರತಿಕ್ರಿಯಿಸಲು ಅವರು ನಿರಾಕರಿಸಿದರು. ಅರುಣ್ ಜೇಟ್ಲೆ ಅವರನ್ನು ಭಾನುವಾರ ಅಥವಾ ಸೋಮವಾರ ಭೇಟಿಯಾಗುವ ಸಾಧ್ಯತೆ ಇದೆ.
ದೆಹಲಿಗೆ ಹಾರಿಗೆ ಗೃಹ ಸಚಿವ ಆಚಾರ್ಯ
ನಾಯಕತ್ವದ ಬದಲಾವಣೆ ಪ್ರಶ್ನೆಯೇ ಇಲ್ಲ. ಯಡಿಯೂರಪ್ಪ ಅವರ ನಾಯಕತ್ವದಲ್ಲೇ ಮುಂದುವರಿಯುತ್ತೇವೆ. ಶೀಘ್ರದಲ್ಲೇ ಬಿಕ್ಕಟ್ಟು ಬಗೆಹರಿಯಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು. ನವೆಂಬರ್ 2ರಿಂದ ನೆರೆ ಪರಿಸ್ಥಿತಿಯ ಪುನರ್ವಸತಿ ಕಾರ್ಯ ನಡೆಯಲಿದೆ ವಿವರವನ್ನು ಗೃಹ ಸಚಿವರು ನೀಡಿದರು.
(ದಟ್ಸ್ ಕನ್ನಡ ವಾರ್ತೆ)
-
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
ರಿಷಬ್ ಸಮಯ ಬಂದಾಗ ಮಾತಾಡ್ತೀನಿ ಅಂದ: ಅನ್ಫಾಲೋ, ಗೆಳೆಯರಲ್ಲಿ ಬಿರುಕು ವದಂತಿ ಬಗ್ಗೆ ಪ್ರಮೋದ್ ಶೆಟ್ಟಿ ಪ್ರತಿಕ್ರಿಯೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾ ಕುಮಾರಿ ನೇಮಕ -
April 5 Horoscope: ನಿಮ್ಮ ಅದೃಷ್ಟ ಹೇಗಿದೆ? ಸಂಪೂರ್ಣ ಮಾಹಿತಿ ಇಲ್ಲಿ -
ಬೆಂಗಳೂರಿನ ಹೊಸೂರು ರಸ್ತೆಯ ದುಸ್ಥಿತಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಟ್ಯಾಗ್ ಮಾಡಿ ಕಿರಣ್ ಮಜುಂದಾರ್ ಶಾ ಆಕ್ರೋಶ -
Bengaluru Viral: ಬೆಂಗಳೂರಿನ ಲಾಲ್ಬಾಗ್ ನೋಡಿ ತಪ್ಪೊಪ್ಪಿಗೆ ಕೊಡಬೇಕು ಎಂದ ವಿದೇಶಿಗ, ವಿಡಿಯೋ ವೈರಲ್ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
Virat Kohli: ಎಲ್ಲೂ ಅವಕಾಶ ಸಿಗದಿದ್ರೆ ಸ್ಯಾಂಡಲ್ವುಡ್ಗೆ ಬರ್ತೀನಿ: ವಿರಾಟ್ ಕೊಹ್ಲಿ ವಿಡಿಯೋ ವೈರಲ್












Click it and Unblock the Notifications