ಶೀಘ್ರದಲ್ಲೆ ಸಂಪುಟಕ್ಕೆ ಜಗದೀಶ್ ಶೆಟ್ಟರ್: ಸಿಎಂ
ಈ ಸಂದರ್ಭದಲ್ಲಿ ಮಾತನಾಡಿದ ಆವರು, ಶೀಘ್ರದಲ್ಲೇ ಶೆಟ್ಟರ್ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲಾಗುತ್ತದೆ. ಈ ಹಿಂದೆಯೂ ಶೆಟ್ಟರ್ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳುವ ಆಸೆ ಇತ್ತು. ಆದರೆ ಹೈಕಮಾಂಡ್ ಆದೇಶದಂತೆ ಸ್ಪೀಕರ್ ಸ್ಥಾನಕ್ಕೆ ನೇಮಿಸಲಾಗಿತ್ತು ಎಂದು ಯಡಿಯೂರಪ್ಪ ಈ ಸಂದರ್ಭದಲ್ಲಿ ತಿಳಿಸಿದರು.
ರಾಜ್ಯದಲ್ಲಿ ನಡೆಯುತ್ತಿರುವ ವಿದ್ಯಮಾನಗಳ ಬಗ್ಗೆ ಮೌನವಹಿಸುವಂತೆ ಪಕ್ಷದ ಹೈಕಮಾಂಡ್ ಆದೇಶ ನೀಡಿದೆ. ಆದ್ದರಿಂದ ನಾನು ಭಿನ್ನಮತದ ಬಗ್ಗೆ ಏನನ್ನೂ ಹೇಳುವುದಿಲ್ಲ ಎಂದು ಅವರು ಪುನರುಚ್ಚರಿಸಿದರು. ನಂತರ ಅವರು ರಸ್ತೆಯ ಮಾರ್ಗವಾಗಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಪ್ರಯಾಣ ಬೆಳೆಸಿದರು.
ಕುಕ್ಕೆ ಸುಬ್ರಹ್ಮಣ್ಯದಲ್ಲಿ ದೇವರ ಆಶೀರ್ವಾದ ಪಡೆದ ಪಡೆದ ಅವರು ಮುಜರಾಯಿ ಇಲಾಖೆ ಹಮ್ಮಿಕೊಂಡಿರುವ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ವೀಕ್ಷಿಸಿದರು. ನಂತರ ಅವರು ಕುಕ್ಕೆ ಸುಬ್ರಹ್ಮಣ್ಯನಿಗೆ ವಿಶೇಷ ಪೂಜೆ ಸಲ್ಲಿಸಿದರು. ಪಂಚಾಮೃತ, ಕ್ಷೀರಾಭಿಷೇಕವನ್ನು ಮಾಡಿಸಿದರು. ಒಣ ದ್ರಾಕ್ಷಿಯ ತುಲಾಭಾರವನ್ನು ಯಡಿಯೂರಪ್ಪ ಸಮರ್ಪಿಸಿದರು.
(ದಟ್ಸ್ ಕನ್ನಡ ವಾರ್ತೆ)