ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರೆಡ್ಡಿಯನ್ನು ಬಗ್ಗಿಸುವುದೇ ಬಿಜೆಪಿ ಹೈಕಮಾಂಡ್?

|
Google Oneindia Kannada News

Janardhana Reddy in New Delhi
ನವದೆಹಲಿ, ನ. 2 : ಬಿಜೆಪಿಯಲ್ಲಿ ಉಂಟಾಗಿರುವ ಬಿಕ್ಕಟ್ಟಿನ ಕೇಂದ್ರ ಬಿಂದುವಾಗಿರುವ ಪ್ರವಾಸೋಧ್ಯಮ ಸಚಿವ ಜನಾರ್ದನ ರೆಡ್ಡಿ ಕೊನೆಗೂ ದೆಹಲಿ ತಲುಪಿದ್ದಾರೆ. ನಾಯಕತ್ವದ ಬದಲಾವಣೆ ಇಲ್ಲ ಎಂದು ಬಿಜೆಪಿ ಹೈಕಮಾಂಡ್ ಭಾನುವಾರ ಸಂದೇಶ ರವಾನೆ ಮಾಡಿರುವ ಬೆನ್ನಲ್ಲೇ ರೆಡ್ಡಿ ದಿಲ್ಲಿ ಭೇಟಿ ನೀಡಿರುವುದು ಭಾರಿ ಕುತೂಹಲಕ್ಕೆ ಕಾರಣವಾಗಿದೆ.

ನಾಯಕತ್ವ ಬದಲಾವಣೆಯಾಗಬೇಕು ಎನ್ನುವುದು ರೆಡ್ಡಿಗಳ ಪ್ರಮುಖ ಬೇಡಿಕೆ. ರಾಜ್ಯದ ಒಳಿಗಾಗಿ ನಾಯಕತ್ವ ಬದಲಾವಣೆ ಆಗಬೇಕು ಎನ್ನುವುದು ಎಲ್ಲರ ಅಶಯವಾಗಿದೆ. ಈ ಬಗ್ಗೆ ಹೈಕಮಾಂಡ್ ಗೆ ಮನವರಿಕೆ ಮಾಡಿಕೊಡುವೆ. ವರಿಷ್ಠರು ಈ ಬಗ್ಗೆ ಗಂಭೀರ ಚಿಂತನೆ ನಡೆಸಬೇಕಾದ ಅವಶ್ಯಕತೆ ಇದೆ ಎಂದು ಜನಾರ್ದನರೆಡ್ಡಿ ಹೇಳಿದರು.

ಜನಾರ್ದನರೆಡ್ಡಿ ಇಂದು ಪಕ್ಷದ ಹಿರಿಯ ಮುಖಂಡರಾದ ಎಲ್ ಕೆ ಅಡ್ವಾಣಿ, ಸುಷ್ಮಾ ಸ್ವರಾಜ್, ಅರುಣ್ ಜೇಟ್ಲಿ ಮತ್ತು ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ.

(ಏಜನ್ಸೀಸ್)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X