ಶಾಪಗ್ರಸ್ತ ದೇವರ ಖಾತೆ ಆಚಾರ್ಯರ ಕೈಗೆ

BSY transfers muzarai dept to VS Acharya
ಬೆಂಗಳೂರು, ನ. 2 : ಶಾಪಗ್ರಸ್ತ ಖಾತೆಯೆಂದೇ ಹೆಸರುವಾಸಿಯಾಗಿರುವ 'ಮುಜರಾಯಿ ಖಾತೆ' ಈಗ ಗೃಹ ಸಚಿವ ವಿಎಸ್ ಆಚಾರ್ಯ ಅವರ ಹೆಗಲೇರಿದೆ. ಇತ್ತೀಚಿನ ಉಪಚುನಾವಣೆಯಲ್ಲಿ ಸೋಮಣ್ಣ ಪರಾಭವಗೊಂಡ ನಂತರ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಸುಪರ್ದಿಯಲ್ಲಿ ಈ ಖಾತೆ ಇತ್ತು. ಈ ಮೂಲಕ ಮುಜರಾಯಿ ಖಾತೆ ವಹಿಸಿಕೊಂಡರೆ ಅಪಾಯ ಎನ್ನುವ ಹೊಸ ನಂಬಿಕೆಗೆ ಯಡಿಯೂರಪ್ಪ ಚಾಲನೆ ನೀಡಿದಂತಾಗಿದೆ.

ಸದ್ಯದ ರಾಜಕೀಯ ಬಿಕ್ಕಟ್ಟಿನಲ್ಲಿ ಸಿಎಂ ತಮ್ಮ ಹೊಣೆಯಲ್ಲಿದ್ದ ಈ ಹೆಚ್ಚುವರಿ ಖಾತೆಯನ್ನು ತರಾತುರಿಯಲ್ಲಿ ಆಚಾರ್ಯಗೆ ವಹಿಸಿ ಶನಿವಾರವೇ (ಅ 31) ಆದೇಶ ಹೊರಡಿಸಿದ್ದಾರೆ. ವೈದ್ಯ ಶಿಕ್ಷಣ ಸಚಿವ ರಾಮಚಂದ್ರೇಗೌಡ ಈ ಖಾತೆ ವಹಿಸಿಕೊಳ್ಳಲು ನಿರಾಕರಿಸಿದ ಹಿನ್ನೆಲೆಯಲ್ಲಿ ಆಚಾರ್ಯಗೆ ಮುಜರಾಯಿ ಖಾತೆ ಬೇಡವೆಂದರೂ ಒಲಿದು ಬಂದಿದೆ.

ಮುಜರಾಯಿ ಖಾತೆ ವಹಿಸಿಕೊಂಡ ಸಚಿವರುಗಳು ನಂತರದ ಚುನಾವಣೆಯಲ್ಲಿ ಸೋಲುಂಡ ಸಂಪ್ರದಾಯಗಳು ಬೆಳೆದು ಬಂದಿದೆ. ಕುಮಾರಸ್ವಾಮಿ ಸರಕಾರದಲ್ಲಿ ಮುಜರಾಯಿ ಸಚಿವರಾಗಿದ್ದ ನಾಗರಾಜ ಶೆಟ್ಟಿ, ಇದಕ್ಕೂ ಮೊದಲು ಈ ಖಾತೆ ವಹಿಸಿಕೊಂಡಿದ್ದ ಸುಮಾ ವಸಂತ್, ಎಂಪಿ ಪ್ರಕಾಶ್ ನಂತರದ ಚುನಾವಣೆಯಲ್ಲಿ ಸೋಲುಂಡಿದ್ದರು. ಈ ಸಂಪ್ರದಾಯಕ್ಕೆ ಇತ್ತೀಚಿನ ಉದಾಹರಣೆಯೆಂದರೆ ಆಪರೇಷನ್ ಕಮಲದ ಮೂಲಕ ಬಿಜೆಪಿ ಸೇರಿ, ಈ ಖಾತೆ ವಹಿಸಿಕೊಂಡು ನಂತರದ ಚುನಾವಣೆಯಲ್ಲಿ ಗೋವಿಂದರಾಜನಗರದಿಂದ ಸ್ಪರ್ಧಿಸಿ ಸೋತಿರುವುದು 'ಸೋಲಿಲ್ಲದ ಸರದಾರ' ವಿ ಸೋಮಣ್ಣ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+