ಬೇಟಿ ಬಚಾವೋ ಆಂದೋಲನ ಆರಂಭ

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ದಕ್ಷಿಣ ಭಾರತದಲ್ಲಿ ವ್ಯವಸ್ಥಿತವಾಗಿ ನಡೆಯುತ್ತಿರುವ ಈ ಷಡ್ಯಂತ್ರ ತಡೆಯಲು ಈ ಆಂದೋಲನ ಅನಿವಾರ್ಯ ಎಂದರು. ಕಳೆದ ಒಂದೆರಡು ವರ್ಷಗಳಿಂದ ಮುಸ್ಲಿಂ ಯುವಕರು ಹಿಂದೂ ಯುವತಿರನ್ನು ಪ್ರೀತಿಸುವ ನೆಪದಲ್ಲಿ ಲವ್ ಜಿಹಾದ್ ಆರಂಭಿಸಿದ್ದಾರೆ. ಇದರ ಹಿಂದೆ ಭಯೋತ್ಪಾದಕ ಸಂಘಟನೆಗಳ ಕೈವಾಡ ಇರುವ ಶಂಕೆಯೂ ವ್ಯಕ್ತವಾಗಿದೆ. ಈ ಕೃತ್ಯ ಹೀಗೆ ಬಿಟ್ಟರೆ ದೇಶದ ಸಮಗ್ರತೆ ಹಾಗೂ ಏಕತೆಗೆ ಧಕ್ಕೆ ಎದುರಾಗುವ ದಿನಗಳು ದೂರವಿಲ್ಲ. ಆದ್ದರಿಂದ ಈ ಬಗ್ಗೆ ಎಲ್ಲರೂ ಗಮನಹರಿಸಿಬೇಕು ಎಂದು ಮುತಾಲಿಕ್ ಪ್ರತಿಪಾದಿಸಿದರು.
ಮುಸ್ಲಿಂ ಯುವಕರು ಹಿಂದೂ ಯವತಿಯರನ್ನು ಗಿಮಕ್ ಮೂಲಕ ಬುಟ್ಟಿದೆ ಹಾಕಿಕೊಂಡು ಮದುವೆಯಾಗುತ್ತಾರೆ. ನಂತರ ಕೆಲ ವರ್ಷಗಳ ನಂತರ ಕೈಬಿಟ್ಟಿರುವ ಅನೇಕ ಉದಾಹರಣೆಗಳು ನಮ್ಮ ಮುಂದಿವೆ. ಆದ್ದರಿಂದ ತಂದೆ ತಾಯಿಂದಿರು ತನ್ನ ಮಗಳ ಬಗ್ಗೆ ಭಾರಿ ಎಚ್ಚರಿಕೆಯಿಂದ ಇರಬೇಕಾಗಿರುವುದು ಅವಶ್ಯಕ. ಶಾಲೆ, ಕಾಲೇಜ್ ಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ನಿಮ್ಮ ಮಗಳ ಬಗ್ಗೆ ಜಾಗರೂಕರಾಗಿರಲು ಈ ಆಂದೋಲನ ಆರಂಭಿಸುತ್ತಿರುವುದಾಗಿ ಮುತಾಲಿಕ್ ಹೇಳಿದರು.
ಈ ಆಂದೋಲನಕ್ಕೆ 25 ಸಾವಿರ ತರಬೇತಿ ಹೊಂದಿದ ಸೇನೆ ಕಾರ್ಯಕರ್ತರು ಕಾರ್ಯ ನಿರ್ವಹಿಸುತ್ತಾರೆ. ಲವ್ ಜಿಹಾದ್ ಕಂಡುಬರುತ್ತಿರುವ ಸ್ಥಳಗಳಲ್ಲಿ ಸೇನೆ ಕಾರ್ಯಕರ್ತರು ಕೆಲಸ ನಿರ್ವಹಿಸುತ್ತಾರೆ. ಲವ್ ಜಿಹಾದ್ ಕುಕೃತ್ಯ ಹೊಂದಿದ 25 ಸಾವಿರ ಸಿಡಿಗಳು, ಒಂದು ಬುಕ್ ಲೆಟ್ ಗಳು, 10 ಲಕ್ಷ ಹ್ಯಾಂಡ್ ಬಿಲ್ ಗಳು, 50 ಸಾವಿರ ಬಿತ್ತಿಪತ್ರಿಗಳು ಮೂಲಕ ಆಂದೋಲನ ಆರಂಭಿಸಲಾಗುವುದು. ರಾಜ್ಯಾದ್ಯಂತ ಪ್ರವಾಸ ಮಾಡುವುದಾಗಿ ಮುತಾಲಿಕ್ ಹೇಳಿದರು.
ಕರ್ನಾಟಕ ಫೋರಂ ಫಾರ್ ಡಿಗ್ನಿಟಿ ಸಂಘವು ಲವ್ ಜಿಹಾದ್ ಕೃತ್ಯದಲ್ಲಿ ತೊಡಗಿರುವುದನ್ನು ಕೇರಳ ಹೈಕೋರ್ಟ್ ಸ್ಪಷ್ಟಪಡಿಸಿದೆ. ರಾಜ್ಯದ 7500 ಹಿಂದೂ ಯುವತಿಯರು ಲವ್ ಜಿಹಾದ್ ಕೃತ್ಯಕ್ಕೆ ಬಲಿಯಾಗಿದ್ದಾರೆ. ಮುಂದೆ ಹಾಗಾಗಲು ಬಿಡಬಾರದು ಎನ್ನುವ ಕಾರಣಕ್ಕೆ ಆಂದೋಲನ ಆರಂಭಿಸಲಾಗಿದೆ ಎಂದು ಅವರು ಹೇಳಿದರು.
(ದಟ್ಸ್ ಕನ್ನಡ ವಾರ್ತೆ)
-
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ












Click it and Unblock the Notifications