ಯಾವ ಟೈಮಲ್ಲಾದ್ರು ಸ್ಫೋಟಿಸಬಹುದು !

ನಾಯಕತ್ವ ಬದಲಾವಣೆ ಏಕೈಕ ಬೇಡಿಕೆ ಇಟ್ಟುಕೊಂಡು ಮೂರು ದಿನಗಳಿಂದ ನವದೆಹಲಿಯಲ್ಲಿ ಠಿಕಾಣಿ ಹೂಡಿರುವ ಜನಾರ್ದನರೆಡ್ಡಿ ಮೂರು ಬಾರಿ ಸುಷ್ಮಾ ಸ್ವರಾಜ್ ಮತ್ತು ಒಂದು ಸಲ ಅರುಣ್ ಜೇಟ್ಲಿ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್ ಅವರೊಂದಿಗೆ ನಡೆಸಿದ ಸಂಧಾನ ಸಭೆ ವಿಫಲವಾಗಿತ್ತು. ಕರ್ನಾಟಕ ಸರಕಾರದ ನಾಯಕತ್ವದ ಬದಲಾವಣೆ ಇಲ್ಲ ಎಂದು ಸ್ಪಷ್ಟಪಡಿಸಿದೆ. ಆದರೆ, ರೆಡ್ಡಿ ಮಾತ್ರ ಹೈಕಮಾಂಡ್ ಸೆಡ್ಡು ಹೊಡೆಯುವ ನಿಟ್ಟಿನಲ್ಲಿ ಸಾಗಿದ್ದು, ಇಂದು ಮತ್ತೆ ಸುಷ್ಮಾ ಸ್ವರಾಜ್ ಅವರೊಂದಿಗೆ ನಾಲ್ಕನೇ ಸುತ್ತಿನ ಮಾತುಕತೆ ನಡೆಸಿದರು.
ಮಾತುಕತೆ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ರೆಡ್ಡಿ, ನಾಯಕತ್ವ ಬದಲಾವಣೆ ಬಿಟ್ಟು ಬೇರೆನೂ ಬೇಡಿಕೆ ಇಲ್ಲ. ನಾಯಕತ್ವ ಚೇಂಜ್ ಆಗ್ಬೇಕು ಎಂಬ ನಮ್ಮ ನಿಲುವು ಅಚಲ. ಅದರಿಂದ ಹಿಂದೆ ಸರಿಯುವ ಮಾತೇ ಇಲ್ಲ ಎಂದು ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ. 54 ಸಾವಿರ ಮನೆಗಳನ್ನು ಕಟ್ಟಿಸಿಕೊಡಲು ನಾವುಗಳು ಮುಂದಾದರೆ ಅದಕ್ಕೆ ಅನೇಕ ಅಡ್ಡಿ ಆತಂಕಗಳನ್ನು ತಂದಿಟ್ಟಿರುವವರು ರಾಜ್ಯಕ್ಕೆ ಬೇಕಾ ?
ಸಂತ್ರಸ್ತರ ಮನೆಗಳ ನಿರ್ಮಾಣ ನಮ್ಮ ಸ್ವಂತ ಹಣದಿಂದ ಮಾಡಲು ಹೊರಟರೆ ಹೊಟ್ಟೆಕಿಚ್ಚು ಏಕೆ ಪಡಬೇಕು ? ಕಂದಾಯ ಸಚಿವರನ್ನೇ ದೂರು ಇರಿಸಿ ಸಂತ್ರಸ್ತರ ಕಾರ್ಯಗಳನ್ನು ಹಮ್ಮಿಕೊಳ್ಳಲು ಕಾರಣ ಏನು ಎಂದು ರೆಡ್ಡಿ ಪ್ರಶ್ನೆಗಳ ಸುರಿಮಳೆಯನ್ನೇ ಹರಿಸಿದರು. ಯಡಿಯೂರಪ್ಪ ಅವರನ್ನು ಭೇಟಿ ಮಾಡುವುದಿಲ್ಲ. ನನ್ನ ನಿಲುವನ್ನು ಹೈಕಮಾಂಡ್ ಗೆ ಮಾತ್ರ ತಿಳಿಸುತ್ತೇನೆ ಎಂದರು.
ಯಡಿಯೂರಪ್ಪ ಗುಡುಗು
ರೆಸಾರ್ಟ್ ಮತ್ತಿತರ ಕಡೆಗಳಲ್ಲಿ ತಂಗಿರುವ ಶಾಸಕರು ತಮ್ಮ ಕ್ಷೇತ್ರಗಳಿಗೆ ಧಾವಿಸಿ ಅಭಿವೃದ್ಧಿ ಕಾರ್ಯಗಳಲ್ಲಿ ತೊಡಗಬೇಕು. ಇದು ನನ್ನ ಕೊನೆಯ ಎಚ್ಚರಿಕೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಗುಡುಗಿದ್ದಾರೆ. ಗದಗ ಜಿಲ್ಲೆಯ ಗುಡಿಸಾಗರದಲ್ಲಿ ಸಂತ್ರಸ್ತರ ಮನೆಗಳ ನಿರ್ಮಾಣದ ಆಸರೆ ಯೋಜನೆ ಉದ್ಘಾಟಿಸಿ ಮಾತನಾಡಿದ ಅವರು, ಶಾಸಕರು ಕ್ಷೇತ್ರದ ಕಡೆಗೆ ಶೀಘ್ರ ತೆರಳಲಿದ್ದಾರೆ ಎಂಬ ವಿಶ್ವಾಸವಿದೆ ಎಂದರು. ಸಭೆ ನಂತರ ಯಡಿಯೂರಪ್ಪ ದೆಹಲಿಗೆ ತೆರಳಿದ್ದು, ಅಡ್ವಾಣಿ, ರಾಜನಾಥ್ ಸಿಂಗ್ ಮತ್ತು ಸುಷ್ಮಾ ಸ್ವರಾಜ್ ಅವರೊಂದಿಗೆ ಮಾತುಕತೆ ನಡೆಸುವ ಸಾಧ್ಯತೆ ಇದೆ.
(ದಟ್ಸ್ ಕನ್ನಡ ವಾರ್ತೆ)
-
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ












Click it and Unblock the Notifications