ಸಾಲಬಾಧೆ : ಇಡೀ ಕುಟುಂಬ ಆತ್ಮಹತ್ಯೆಗೆ ಶರಣು

ಮೃತರ ಅಂತ್ಯಕ್ರಿಯೆ ಇಂದು ದೊಡ್ಡಾಲಹಳ್ಳಿಯಲ್ಲಿ ನಡೆಯಿತು. ಕೆಪಿಸಿಸಿ ಕಾರ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ದೆಹಲಿಯಿಂದ ವಾಪಸಾಗಿ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿ ಮೃತರ ಕುಟುಂಬಕ್ಕೆ ವೈಯುಕ್ತಿಕವಾಗಿ 50 ಸಾವಿರ ಪರಿಹಾರ ನೀಡಿದರು. ಆಡಿನಲಿಯುತ್ತಿದ್ದ ಮಕ್ಕಳಿಗೂ ವಿಷವುಣಿಸಿ, ತಾವು ವಿಷವುಂಡ ದಂಪತಿ ಮುತ್ತು ಮತ್ತು ಸುನಂದರ ಸಾವಿನಿಂದ ಗ್ರಾಮದಲ್ಲಿ ನೀರವ ಮೌನ ಮನೆಮಾಡಿದೆ.
ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ದೊಡ್ಡಾಲಹಳ್ಳಿಯಲ್ಲಿ ಸಾಲಬಾಧೆ ತಾಳಲಾರದೇ ಕಳೆದೆರಡು ದಿನಗಳ ಹಿಂದೆ ಮುತ್ತು-ಸುನಂದ ದಂಪತಿಗಳು ಮತ್ತು ಮಕ್ಕಳಾದ ಹೇಮಾ, ರವಿ ವಿಷಸೇವಿಸಿದ್ದರು. ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ನಾಲ್ಕೂ ಮಂದಿ ನಿನ್ನೆ ರಾತ್ರಿ ಎಲ್ಲೂ ಕೊನೆಯುಸಿರೆಳೆದಿದ್ದಾರೆ.
ಬರಗಾಲದಿಂದ ಫಸಲಿಗೆ ಬಂದಂತಹ ಬೆಳೆ ನಾಶವಾಗಿದ್ದರಿಂದ ನಷ್ಟವನ್ನನುಭವಿಸುತ್ತಿರುವ ರೈತರುಗಳು ಆತ್ಮಹತ್ಯೆಗೆ ಶರಣಾಗುತ್ತಿರುವುದು ದುರದೃಷ್ಟಕರ. ರೈತರ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ತಕ್ಷಣವೇ ಸಂಕಷ್ಟದಲ್ಲಿರುವ ರೈತರ ಸಾಲ ಮತ್ತು ಬಡ್ಡಿಯನ್ನು ಮನ್ನಾ ಮಾಡಬೇಕೆಂದು ಇದೇ ಸಂದರ್ಭದಲ್ಲಿ ಡಿ.ಕೆ.ಶಿವಕುಮಾರ್ ಸರ್ಕಾರವನ್ನು ಆಗ್ರಹಿಸಿದರು.
ಆಡಿ ನಲಿಯಬೇಕಾದ ವಯಸ್ಸಿನಲ್ಲಿ ಬಡತನದ ಬೇಗೆಯಲ್ಲಿ ಬೇಯುತ್ತಿದ್ದ ಮುತ್ತು ಮತ್ತು ಸುನಂದ ದಂಪತಿಗಳ ಮಕ್ಕಳಾದ ಹೇಮಾ ಮತ್ತು ರವಿಯೂ ಕೂಡ ಸಾವಿನ ಬಾಗಿಲು ತಟ್ಟಿದ್ದಾರೆ. ಕಷ್ಟದಲ್ಲೇ ಜೀವನ ನಡೆಸುತ್ತಿದ್ದರೂ 4ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಹೇಮಾ ಓದಿನಲ್ಲಿ ಸದಾ ಮುಂದಿದ್ದಳು ಮತ್ತು ಪ್ರತಿಭಾವಂತೆಯಾಗಿದ್ದಳು. ಆದರೆ ಸುನಂದ-ಮುತ್ತು ದಂಪತಿಗಳ ಸಾಲದ ಹೊರೆಯಲ್ಲಿ ಏನೂ ಅರಿಯದ ಎರಡು ಕಂದಮ್ಮಗಳು ಕೂಡ ಅಪ್ಪ ಅಮ್ಮನೊಂದಿಗೆ ಸಾವಿನ ವಿಧಿಯಾಟದಲ್ಲಿ ಜತೆಯಾಗಿರುವುದು ದುರದೃಷ್ಟಕರ.
ಕಳೆದೆರಡು ಮೂರು ವರ್ಷಗಳಿಂದ ಬೇರೆಯವರಿಂದ ಭೂಮಿ ಗುತ್ತಿಗೆ ಪಡೆದು ರೇಷ್ಮೆ ಕೃಷಿಯನ್ನೇ ಸುನಂದ-ಮುತ್ತು ದಂಪತಿಗಳು ಅವಲಂಬಿಸಿದ್ದರು. ಆದರೆ ಸರಿಯಾದ ಮಳೆ ಮತ್ತು ಸಮರ್ಪಕ ವಿದ್ಯುತ್ ಇಲ್ಲದೇ ರೇಷ್ಮೆಬೆಳೆ ನಷ್ಟವುಂಟಾಗಿದ್ದರಿಂದ ಸಾಲದ ಕೂಪಕ್ಕೆ ಸಿಕ್ಕ ದಂಪತಿಗಳಿಗೆ ಆತ್ಯಹತ್ಯೆಯೇ ದಾರಿಯಾಯಿತು. ಸ್ಥಳೀಯವಾಗಿ 40 ಸಾವಿರದವರೆಗೂ ಸಾಲ ಮಾಡಿಕೊಂಡಿದ್ದ ದಂಪತಿಗಳು ಶೇಕಡಾ 10 ಮತ್ತು 15ರಂತೆ ಬಡ್ಡಿ ಕಟ್ಟುತ್ತಿದ್ದರು. ಆದರೆ ಬೆಳೆ ನಷ್ಟದಿಂದ ಬಡ್ಡಿ ಅಸಲು ಕಟ್ಟಲಾಗದೇ ಸಾಲದ ಹೊರೆಹೊತ್ತಿಕೊಂಡ ಕುಟುಂಬ ಅಂತಿಮವಾಗಿ ಆತ್ಮಹತ್ಯೆಗೆ ಶರಣಾಗಿದೆ.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications