ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಮತಾಂತರ ನಿಷೇಧಿಸಿ : ಚಿಮೂ
ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, 60 ರ ದಶಕದಲ್ಲಿಯೇ ಮಧ್ಯಪ್ರದೇಶ, ಒರಿಸ್ಸಾಗಳಲ್ಲಿ ಈ ಕಾನೂನು ಜಾರಿಗೆ ಬಂದಿದ್ದು, ಸುಪ್ರೀಂ ಕೋರ್ಟ್ ಕೂಡ ಇದನ್ನು ಎತ್ತಿ ಹಿಡಿದಿದೆ. ರಾಜ್ಯ ಸರಕಾರವೂ ಈ ದಿಸೆಯಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. 50 ಮಠಾಧೀಶರ ನೇತೃತ್ವದಲ್ಲಿ ಈ ಬಗ್ಗೆ ಸರಕಾರಕ್ಕೆ ಮನವಿ ಸಲ್ಲಿಸಲಾಗಿದೆ.
ಮುಖ್ಯಮಂತ್ರಿ ಪರಿಶೀಲಿಸುವ ಭರವಸೆ ನೀಡಿದ್ದಾರೆ. ಭಯೋತ್ಪಾದಕ ಸಂಘಟನೆಗಳು ಲವ್ ಜಿಹಾದ್ ಬಗ್ಗೆ ಕರಪತ್ರಗಳನ್ನು ಮುದ್ರಿಸಿ ಹಂಚುತ್ತಿರುವುದು ಕೂಡ ಗಮನಕ್ಕೆ ಬಂದಿದೆ. ಇದನ್ನು ಸರಕಾರ ಗಮನಿಸಬೇಕು ಎಂದರು. ಬಹುಸಂಖ್ಯಾತರು ಹಿಂದುಗಳಾಗಿರುವುದರಿಂದ ಅಲ್ಪಸಂಖ್ಯಾತರ ರಕ್ಷಣೆಗೆ ಆದ್ಯತೆ ನೀಡಲಾಗುತ್ತದೆ. ಆದರೆ, ಬಹುಸಂಖ್ಯಾತರನ್ನು ರಕ್ಷಿಸುವವರಿಲ್ಲದಂತಾಗಿದೆ ಎಂದು ವಿಷಾದಿಸಿದರು.
(ದಟ್ಸ್ ಕನ್ನಡ ವಾರ್ತೆ)
Comments
yediyurappa ಬೆಂಗಳೂರು ಯಡಿಯೂರಪ್ಪ ಮತಾಂತರ ಎಂ ಚಿದಾನಂದಮೂರ್ತಿ bengalore m chidanandamurthy ಲವ್ ಜಿಹಾದ್ love jihad
Story first published: Thursday, November 5, 2009, 12:40 [IST]