2012ವರೆಗೆ ಸಿಎಂ ಸುರಕ್ಷಿತ: ಜ್ಯೋತಿಷಿ ರವಿಶಂಕರ್

ರೆಡ್ಡಿಗಳು ತಪ್ಪು ಮಾಡಿದ್ದಾರೆ. ಯಡಿಯೂರಪ್ಪ ಅವರು ಏನೇ ತಪ್ಪುಗಳು ಮಾಡಿರಲಿ ಅವರು ಕುಟುಂಬದ ಯಜಮಾನರು. ರೆಡ್ಡಿಗಳು ಉಪ್ಪು ತಿಂದಿದ್ದಾರೆ ನೀರು ಕುಡಿದೇ ಕುಡಿಯುತ್ತಾರೆ. ರೆಡ್ಡಿಗಳ ಗ್ರಹಗತಿ ಸರಿಯಾಗಿಲ್ಲ. ಕರುಣಾಕರ ಮನೆಯಲ್ಲಿ ನಾಗರಹಾವು ಕಾಣಿಸಿಕೊಂಡಿದ್ದು, ಇವತ್ತು ಧ್ವಜ ಕಿತ್ತು ಬಿದ್ದಿದ್ದು ಇದಕ್ಕೆ ಸಾಕ್ಷಿ. ರೆಡ್ಡಿಗಳಿಗೆ ಟೈಮ್ ಸರಿ ಇಲ್ಲ. ಮುಂದಿನ ದಿನಗಳಲ್ಲಿ ತೀವ್ರ ತೊಂದರೆಗಳಿಗೆ ಸಿಲುಕುತ್ತಾರೆ. ರಾಜಕೀಯ ಜೇನುಗೂಡಿಗೆ ಕಲ್ಲು ಹೊಡೆದಿರುವುದು ಆತುರದ ನಿರ್ಧಾರ ಎಂದು ಖಾಸಗಿ ಕಾರ್ಯಕ್ರಮವೊಂದರಲ್ಲಿ ರವಿಶಂಕರ್ ನುಡಿದರು.
ರೆಡ್ಡಿಗಳಿಗೆ ಪಕ್ಷಕ್ಕಿಂತ ವಯಕ್ತಿಕ ಲಾಭವೇ ಮುಖ್ಯ. ಅವರು ಬಿಸಿನೆಸ್ ಮ್ಯಾನ್. ಪ್ರಜಾ ಆಡಳಿತವೇ ಬೇರೆ ಎಂದರು. ಯಡಿಯೂರಪ್ಪ 2011-12 ರವರೆಗೆ ಮುಖ್ಯಮಂತ್ರಿ ಆಗಿಯೇ ಮುಂದುವರೆಯುತ್ತಾರೆ. ಆದರೆ, ಈ ಅವಧಿಯಲ್ಲಿ ಸಾಕಷ್ಟು ಗೊಂದಲಗಳು ಉಂಟಾಗುತ್ತವೆ. ಕಾಲೆಳೆಯುವವರೂ ಹೆಚ್ಚುತ್ತಾರೆ. ಒಟ್ಟಿನಲ್ಲಿ ಈ ಎಲ್ಲಾ ಬೆಳವಣಿಗೆಗಳಿಂದ ರಾಜ್ಯದ ಜನತೆ ಸಾಕಷ್ಟು ತೊಂದರೆಗೆ ಸಿಲುಕುತ್ತಾರೆ. ಈ ಪರಿಸ್ಥಿತಿ ಕರ್ನಾಟಕದ್ದು ಮಾತ್ರವಲ್ಲ. ದೇಶದಲ್ಲೂ ಇಂತಹ ಬೆಳವಣಿಗೆ ಆಗುತ್ತವೆ. ಹಲವು ಹಗರಣಗಳು ಬೆಳಕಿಗೆ ಬರಲಿವೆ. ಕೆಲವು ರಾಜಕೀಯ ನಾಯಕರುಗಳು ಅವಮಾನಗಳಿಗೆ ಗುರಿಯಾಗಲಿದ್ದಾರೆ. ಪ್ರಧಾನಿ ಮನಮೋಹನ್ಸಿಂಗ್ ಅವರೂ ಒತ್ತಡಕ್ಕೆ ಸಿಲುಕಲಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)
-
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
ಕರ್ನಾಟಕ PGCET 2026 ಅಧಿಸೂಚನೆ ಪ್ರಕಟ: ಎಂಬಿಎ ಸೇರಿ ವಿವಿಧ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಮಾರ್ಚ್ 23 ರಿಂದ ಅರ್ಜಿ ಆಹ್ವಾನ -
ವಿಶ್ವಮಾತೆ ಎನ್ನುತ್ತಾ ಶ್ರೀಚಾಮುಂಡೇಶ್ವರಿಯ ಕನ್ನಡ ಹಾಡು ಹಂಚಿಕೊಂಡ ಪ್ರಧಾನಿ ಮೋದಿ -
ಮಾರ್ಚ್ 21ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications