ಮುಂದಿಟ್ಟ ಹೆಜ್ಜೆ ಹಿಂದಿಡಲೊಲ್ಲದ ರೆಡ್ಡಿ ಬ್ರದರ್ಸ್

ಕಂದಾಯ ಸಚಿವ ಕರುಣಾಕರರೆಡ್ಡಿ ನಿವಾಸದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರಾದ ಜನಾರ್ದನರೆಡ್ಡಿ ಮತ್ತು ಶ್ರೀರಾಮುಲು ರಾಜ್ಯದ ಹಿತದೃಷ್ಟಿಯಿಂದ ಹಾಗೂ ಬಿಜೆಪಿ ಪಕ್ಷದ ಉಳಿವಿಗಾಗಿ ನಾಯಕತ್ವ ಬದಲಾಗಲೇ ಬೇಕು ಎಂದು ಅದೇ ರಾಗ ಅದೇ ಹಾಡು ಹಾಡಿದರು. ಪಕ್ಷದ ವರಿಷ್ಠರಿಗೆ ಎಲ್ಲವನ್ನೂ ಹೇಳಿದ್ದೇನೆ. ಎರಡು ದಿನಗಳಲ್ಲಿ ಒಳ್ಳೆಯ ನಿರ್ಧಾರ ಹೊರ ಬೀಳಲಿದೆ ಎಂದು ಜನಾರ್ದನ ರೆಡ್ಡಿ ತಿಳಿಸಿದರು.
ನೆರೆ ಸಂತ್ರಸ್ತರಿಗೆ ಒಳ್ಳೆಯ ಕೆಲಸ ಮಾಡಲು ಸರ್ಕಾರದ ಯಜಮಾನರು ಅಡ್ಡಗಾಲು ಹಾಕಿದರು. ಬಳ್ಳಾರಿ ಸಚಿವರಿಗೆ ಒಳ್ಳೆಯ ಹೆಸರು ಬರುವುದನ್ನು ಯಜಮಾನ ಸಹಿಸಲಿಲ್ಲ ಎಂಬ ಹಳೆಯ ಆರೋಪವನ್ನು ಜನಾರ್ದನರೆಡ್ಡಿ ಮಾಡಿದರು. ನಮ್ಮ ನಿಲುವನ್ನು ತಾಯಿ ಸುಷ್ಮಾ ಸ್ವರಾಜ್ ಅವರಿಗೆ ಹಾಗೂ ಹೈಕಮಾಂಡ್ ಗೆ ವಿವರಿಸಲಾಗಿದೆ ಎಂದರು.
ಶೆಟ್ಟರ್ ಭೇಟಿ ಮಾಡಿದ ರೆಡ್ಡಿ ಬ್ರದರ್ಸ್
ಇಂದು ಬೆಂಗಳೂರಿಗೆ ಆಗಮಿಸಿದ ಜರ್ನಾರ್ದನ ರೆಡ್ಡಿ, ಶ್ರೀರಾಮುಲು ಮತ್ತು ಕರುಣಾಕರ ರೆಡ್ಡಿ ಅವರೊಂದಿಗೆ ಚರ್ಚಿಸಿದ ಬಳಿಕ ಸ್ಪೀಕರ್ ಜಗದೀಶ್ ಶೆಟ್ಟರ್ ಅವರನ್ನು ಭೇಟಿ ಮಾಡಿದರು. ಇದೊಂದು ಸೌಹಾರ್ದಯುತ ಭೇಟಿ ಅಷ್ಟೇ ಎಂದು ಕರುಣಾಕರರೆಡ್ಡಿ ಸ್ಪಷ್ಟಪಡಿಸಿದರು.
ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಶೆಟ್ಟರ್ ಅವರೊಂದಿಗೆ ಯಾವುದೇ ರಾಜಕೀಯ ಚರ್ಚೆ ನಡೆದಿಲ್ಲ ಇದೊಂದು ಸೌಜನ್ಯದ ಭೇಟಿ ಅಷ್ಟೇ ಎಂದರು. ರೆಡ್ಡಿ ಸಹೋದರರು ಮತ್ತು ಶೆಟ್ಟರ್ ಅವರೊಂದಿಗೆ ಚರ್ಚಿಸಿ ಸಲಹೆಗಳನ್ನು ಪಡೆಯಲಾಗಿದೆ. ನಾಯಕತ್ವ ಬದಲಾವಣೆ ಬಿಟ್ಟು ಮಿಕ್ಕೆಲ್ಲಾ ಬೇಡಿಕೆಗಳನ್ನು ಈಡೇರಿಸಲಾಗುತ್ತದೆ ಎಂಬ ಬೇಡಿಕೆಯನ್ನು ಹೈಕಮಾಂಡ್ ನೀಡಿದೆ ಎನ್ನಲಾಗಿದೆ.
(ದಟ್ಸ್ ಕನ್ನಡ ವಾರ್ತೆ)
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications