ಸಂತ್ರಸ್ತರ ನೆರವಿಗೆ ಸಿಎಂ ವಿನೂತನ ಚಿಂತನೆ

ಲಕ್ಷಾಂತರ ಕುಟುಂಬಗಳಿಗೆ ಶಾಶ್ವತ ನೆಲೆಕಲ್ಪಿಸುವುದರ ಜೊತೆಗೆ ಭಾರಿ ಪ್ರಮಾಣದಲ್ಲಿ ಹಾನಿಯುಂಟಾಗಿರುವ ಸಾರ್ವಜನಿಕ ಆಸ್ತಿಗಳ ಪುನರ್ನಿರ್ಮಾಣ ಸರ್ಕಾರಕ್ಕೆ ದೊಡ್ಡ ಸವಾಲಾಗಿದೆ. ಈ ಸವಾಲನ್ನು ಸ್ವೀಕರಿಸಲು ಸರ್ಕಾರ ಸಮರೋಪದಿಯಲ್ಲಿ ಪರಿಹಾರ ವಿತರಣೆ ಮತ್ತು ಪುನರ್ನಿರ್ಮಾಣದ ಕಾರ್ಯದಲ್ಲಿ ತೊಡಗಿದೆ.
ಈ ಕಾಯಕದಲ್ಲಿ ಕೇಂದ್ರ ಸರ್ಕಾರದ ನೆರವು ಮತ್ತು ರಾಜ್ಯಸರ್ಕಾರದ ಸಂಪನ್ಮೂಲಗಳ ನೆರವು ಬಳಸಿಕೊಳ್ಳಲಾಗುತ್ತಿದೆ. ಇದರ ಜೊತೆಗೆ ಉದ್ದಿಮೆಗಳು ಸ್ವಯಂ ಸೇವಾ ಸಂಸ್ಥೆಗಳು, ಮಠ ಮಾನ್ಯಗಳು ಸರ್ಕಾರಿ ಅಧಿಕಾರಿ ಮತ್ತು ನೌಕರರು, ನಿವೃತ್ತ ನೌಕರರು ಒಟ್ಟಾರೆ ಸಾರ್ವಜನಿಕರು ಪರಿಹಾರ ಮತ್ತು ಪುನರ್ವಸತಿಗಾಗಿ ನೀಡಿರುವ ನೆರವು ಅನನ್ಯ ಮತ್ತು ಅಪೂರ್ವ.
ನೆರೆ ಸಂತ್ರಸ್ತರಿಗೆ ಸಾರ್ವಜನಿಕ ಮತ್ತು ಖಾಸಗಿ ಸಹಭಾಗಿತ್ವದಲ್ಲಿ ಮನೆಗಳನ್ನು ನಿರ್ಮಿಸಿಕೊಡುವ ಆಸರೆ ಕಾರ್ಯಕ್ರಮ ಈಗಾಗಲೇ ಚಾಲನೆಗೊಂಡಿದೆ. ಈ ಕಾರ್ಯಕ್ರಮಕ್ಕೆ ಮತ್ತಷ್ಟು ಚೈತನ್ಯತುಂಬಲು ಮತ್ತು ನೆರೆಪೀಡಿತ ಗ್ರಾಮಗಳ ಆರೋಗ್ಯ ಹಾಗೂ ನೈರ್ಮಲ್ಯ ಸುಧಾರಿಸಲು ನವೆಂಬರ್ 7 ರಿಂದ 11 ರವರೆಗೆ ಸತತ 5 ದಿನಗಳ ಕಾಲ ಮುಖ್ಯಮಂತ್ರಿಗಳು ಉತ್ತರ ಕರ್ನಾಟಕದ ನೆರೆಪೀಡಿತ ಹಳ್ಳಿಗಳಲ್ಲಿ ಪ್ರವಾಸ ಪಾದಯಾತ್ರೆ ಶ್ರಮದಾನ ಬಹಿರಂಗ ಸಭೆ ಮತ್ತು ಗ್ರಾಮವಾಸ್ತವ್ಯ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದಾರೆ.
ಇದು ಪುನರ್ವಸತಿ ಮತ್ತು ಪುನರ್ನಿರ್ಮಾಣ ಕಾರ್ಯದಲ್ಲಿ ಸ್ಥಳೀಯರನ್ನು ಒಳಗೊಂಡ ಕಾರ್ಯಕ್ರಮವಾಗಿದ್ದು ಮುಖ್ಯಮಂತ್ರಿಗಳ ಜೊತೆ ಸಚಿವರು, ಸಂಸದರು, ಶಾಸಕರು, ದಾನಿಗಳು, ಮಠಮಾನ್ಯಗಳ ಮುಖ್ಯಸ್ಥರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ರಾಯಚೂರು ಜಿಲ್ಲೆಯ ಬಿಚ್ಚಾಲೆ ಗ್ರಾಮದಲ್ಲಿ ಈ ಕಾರ್ಯಕ್ರಮವು ಆರಂಭಗೊಳ್ಳಲಿದ್ದು ಆ ನಂತರ ಗುಲ್ಬರ್ಗಾ, ಬಿಜಾಪುರ, ಧಾರವಾಡ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಳ್ಳುವರು.
(ದಟ್ಸ್ ಕನ್ನಡ ವಾರ್ತೆ)
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications