6 ಸಚಿವರ ತಲೆದಂಡಕ್ಕೆ ರೆಡ್ಡಿ ಪಟ್ಟು

ಸಿ ಎಸ್ ಉದಾಸಿ, ಮುರುಗೇಶ ನಿರಾಣಿ, ಲಕ್ಷ್ಮಣ ಸವದಿ, ಶೋಭಾ ಕರಂದ್ಲಾಜೆ, ಹರತಾಳ್ ಹಾಲಪ್ಪ, ಬಸವರಾಜ ಬೊಮ್ಮಾಯಿ ಅವರ ತಲೆದಂಡವಾಗಬೇಕು. ಅವರ ಬದಲಿಗೆ , ಸಿಟಿ ರವಿ, ರೇಣುಕಾಚಾರ್ಯ, ಆನೇಕಲ್ ನಾರಾಯಣಸ್ವಾಮಿ, ಸೀಮಾ ಮಸೂತಿ, ವೀರಣ್ಣ ಚರಂತಿಮಠ, ಎಸ್ ಕೆ ಬೆಳ್ಳುಬ್ಬಿ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಬೇಕು ಎಂದು ರೆಡ್ಡಿ ಪಟ್ಟು ಹಿಡಿದಿದ್ದಾರೆ.
ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ, ಜನಾರ್ದನರೆಡ್ಡಿ, ರಾಜ್ಯ ಹಿತಕ್ಕಾಗಿ ನಾವು ಮಾಡಿದ ಎಲ್ಲ ಪ್ರಯತ್ನಗಳು ಯಶಸ್ವಿಯಾಗಲಿವೆ. ಇಂದು ಸಂಜೆ ವೇಳೆಗೆ ಎಲ್ಲವೂ ಸುಖಾಂತ್ಯಗೊಳ್ಳಲಿದೆ ಎಂದರು. ಇನ್ನೊಂದಡೆ, ಮುಖ್ಯಮಂತ್ರಿ ಯಡಿಯೂರಪ್ಪ ಮಾತನಾಡಿ, ಸಚಿವರನ್ನು ಕೈಬಿಡುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಯಡಿಯೂರಪ್ಪ ಅವರ ಸೂಚನೆ ಮೇರೆಗೆ 10 ಮಂದಿ ಸಚಿವರು ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ.
ರೆಡ್ಡಿಗಳ ಆರು ಪ್ರಮುಖ ಬೇಡಿಕೆಗಳು
* ಯಡಿಯೂರಪ್ಪ 6 ತಿಂಗಳ ಮಾತ್ರ ಹುದ್ದೆಯಲ್ಲಿದ್ದು ಬಜೆಟ್ ನಂತರ ಕೆಳಗಿಳಿಯಬೇಕು.
* ಆರು ಮಂದಿ ಸಚಿವರ ತಲೆದಂಡವಾಗಬೇಕು
* ಸಮನ್ವಯ ಸಮಿತಿ ರಚನೆಯಾಗಿ ಯಾವುದೇ ವರ್ಗಾವಣೆ ಯೋಜನೆ ರೂಪಿಸುವಾಗಲೂ ಅದರ ಅನುಮತಿ ಪಡೆಯುವುದು ಕಡ್ಡಾಯ. ಮುಖ್ಯಮಂತ್ರಿ ಸ್ವತಂತ್ರವಾಗಿ ಯಾವುದೇ ನಿರ್ಧಾರವನ್ನೂ ತಗೆದುಕೊಳ್ಳುವಂತಿಲ್ಲ.
* ಉಪಚುನಾವಣೆಯಲ್ಲಿ ಸೋತ ಸೋಮಣ್ಣ ರಾಜೀನಾಮೆಯಿಂದ ಖಾಲಿ ಆದ ಸ್ಥಾನಕ್ಕೆ ಸಂಘ ಪರಿವಾರದ ಹಿನ್ನೆಲೆಯಿಂದ ಬಂದವರನ್ನೇ ನೇಮಕ ಮಾಡಬೇಕು.
* ತಮ್ಮ ಬೆಂಬಲಿಗ ಸಚಿವರಿಗೆ ಜಿಲ್ಲಾ ಉಸ್ತುವಾರಿ ನೀಡಬೇಕು.
* ಪ್ರತಿ ತಿಂಗಳ ಶಾಸಕರ ಸಭೆ, ಕ್ಷೇತ್ರವಾರು ಹಣ ಸಮಾನ ವಿಂಗಡಣೆ.
* ನಿಗಮ ಮಂಡಳಿಗಳಲ್ಲಿ ಶೇ. 50 ರಷ್ಟು ಸ್ಥಾನಗಳನ್ನು ತಮ್ಮ ಬೆಂಬಲಿಗರಿಗೆ ನೀಡಬೇಕು.
(ದಟ್ಸ್ ಕನ್ನಡ ವಾರ್ತೆ)
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications