ಶಾಸಕರಿಗೆ ಛೀಮಾರಿ ಹಾಕಿದ ಲೋಕಾಯುಕ್ತ
ಬೆಂಗಳೂರು,
ನ. 8 : ಬಿಜೆಪಿ ಸರಕಾರದಲ್ಲಿನ ಪ್ರಸಕ್ತ ರಾಜಕೀಯ ಬಿಕ್ಕಟ್ಟಿನ ಕುರಿತು ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗಡೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಚುನಾಯಿತ ಪ್ರತಿನಿಧಿಗಳು, ಸಚಿವ ಸಂಪುಟ ಯಾವ ಪುರುಷಾರ್ಥಕ್ಕೆ ? ಇವರು ಇಲ್ಲದೆಯೂ ಆಡಳಿತ ನಡೆಯುತ್ತಿದೆ ಎಂಬುದು ಸಾಬೀತಾಗಿದೆ ಎಂದು ವ್ಯಂಗ್ಯವಾಡಿದರು. id="toptextpromo">ನೆರೆ
ಹಾವಳಿಯಿಂದ ಉತ್ತರ ಕರ್ನಾಟಕದ ಜನ ಬದುಕಲು ಪರದಾಟ ಮಾಡುತ್ತಿರುವ ಸಂದರ್ಭದಲ್ಲಿ ಅದೇ ಜನರು ಆಯ್ಕೆ ಮಾಡಿದ ಶಾಸಕರು ಮೋಜಿನಲ್ಲಿ ತೊಡಗಿರುವುದು ಪ್ರಜಾಪ್ರಭುತ್ವದ ಅಣಕ ಎಂದು ಅಕ್ರೋಶ ವ್ಯಕ್ತಪಡಿಸಿದರು. ಗ್ಲುಕೋಮಾ ಸೋಸೈಟಿ 3 ದಿನಗಳ ವಾರ್ಷಿಕ ಸಮ್ಮೇಳನ ಉದ್ಘಾಟಿಸಿ ಮಾತನಾಡಿ, ರಾಜ್ಯದಲ್ಲಿ ಮುಂದುವರಿದಿರುವ ರಾಜಕೀಯ ಬಿಕ್ಕಟ್ಟು ಗಮನಸಿದರೆ, ಚುನಾಯಿತ ಪ್ರತಿನಿಧಿಗಳು, ಮಂತ್ರಿ ಮಂಡಲ ಅಗತ್ಯವಿದೆಯೇ ? ಜನರು ತಮ್ಮ ಪ್ರತಿನಿಧಿಗಳನ್ನು ಆಯ್ಕೆ ಮಾಡಲು ಕೋಟ್ಯಂತರ ರುಪಾಯಿ ಹಣ ವೆಚ್ಚ ಮಾಡುವುದು ಅಗತ್ಯವೇ ಎಂಬ ಪ್ರಶ್ನೆಗಳನ್ನು ಮುಂದಿಟ್ಟರು. id='are-slot-1' class='oiad oi-axt oiadv'> id='top-searched-articles'>(ದಟ್ಸ್
ಕನ್ನಡ ವಾರ್ತೆ)











Click it and Unblock the Notifications