ಶಾಸಕರಿಗೆ ಛೀಮಾರಿ ಹಾಕಿದ ಲೋಕಾಯುಕ್ತ

Santosh Hegde
ಬೆಂಗಳೂರು, ನ. 8 : ಬಿಜೆಪಿ ಸರಕಾರದಲ್ಲಿನ ಪ್ರಸಕ್ತ ರಾಜಕೀಯ ಬಿಕ್ಕಟ್ಟಿನ ಕುರಿತು ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗಡೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಚುನಾಯಿತ ಪ್ರತಿನಿಧಿಗಳು, ಸಚಿವ ಸಂಪುಟ ಯಾವ ಪುರುಷಾರ್ಥಕ್ಕೆ ? ಇವರು ಇಲ್ಲದೆಯೂ ಆಡಳಿತ ನಡೆಯುತ್ತಿದೆ ಎಂಬುದು ಸಾಬೀತಾಗಿದೆ ಎಂದು ವ್ಯಂಗ್ಯವಾಡಿದರು.

ನೆರೆ ಹಾವಳಿಯಿಂದ ಉತ್ತರ ಕರ್ನಾಟಕದ ಜನ ಬದುಕಲು ಪರದಾಟ ಮಾಡುತ್ತಿರುವ ಸಂದರ್ಭದಲ್ಲಿ ಅದೇ ಜನರು ಆಯ್ಕೆ ಮಾಡಿದ ಶಾಸಕರು ಮೋಜಿನಲ್ಲಿ ತೊಡಗಿರುವುದು ಪ್ರಜಾಪ್ರಭುತ್ವದ ಅಣಕ ಎಂದು ಅಕ್ರೋಶ ವ್ಯಕ್ತಪಡಿಸಿದರು. ಗ್ಲುಕೋಮಾ ಸೋಸೈಟಿ 3 ದಿನಗಳ ವಾರ್ಷಿಕ ಸಮ್ಮೇಳನ ಉದ್ಘಾಟಿಸಿ ಮಾತನಾಡಿ, ರಾಜ್ಯದಲ್ಲಿ ಮುಂದುವರಿದಿರುವ ರಾಜಕೀಯ ಬಿಕ್ಕಟ್ಟು ಗಮನಸಿದರೆ, ಚುನಾಯಿತ ಪ್ರತಿನಿಧಿಗಳು, ಮಂತ್ರಿ ಮಂಡಲ ಅಗತ್ಯವಿದೆಯೇ ? ಜನರು ತಮ್ಮ ಪ್ರತಿನಿಧಿಗಳನ್ನು ಆಯ್ಕೆ ಮಾಡಲು ಕೋಟ್ಯಂತರ ರುಪಾಯಿ ಹಣ ವೆಚ್ಚ ಮಾಡುವುದು ಅಗತ್ಯವೇ ಎಂಬ ಪ್ರಶ್ನೆಗಳನ್ನು ಮುಂದಿಟ್ಟರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+