ಶೋಭಾ ಸುವರ್ಣಟಿವಿ ಜುಗಲಬಂದಿ

ಸುವರ್ಣ ನ್ಯೂಸ್ ಚಾನೆಲ್ ನಡೆಸಿದ ವಿಶೇಷ ಸಂದರ್ಶನದಲ್ಲಿ ಮಾತನಾಡುತ್ತಿದ್ದ ಅವರು, ಸಮಾಜಸೇವಕಿಯಾಗಿ ನಾನು ಮುಂದುವರಿಯುವೆ ಎಂದರು. ನಾನಿಗಾಗಲೇ ಸಚಿವೆ ಸ್ಥಾನಕ್ಕೆ ರಾಜೀನಾಮೆ ನೀಡಿರುವೆ. ಕೆಲವರು ಆರೋಪ ಮಾಡುವಂತೆ ನಾನು ಬೇರೆ ಇಲಾಖೆಯಲ್ಲಿ ಹಸ್ತಕ್ಷೇಪ ಮಾಡಿದ್ದಕ್ಕೆ ಒಂದೇ ಒಂದು ಉದಾಹರಣೆ ನೀಡಿದರೆ, ರಾಜಕೀಯದಿಂದಲೇ ನಿವೃತ್ತಿಯಾಗುವೆ ಎಂದು ಶೋಭಾ ಸವಾಲು ಹಾಕಿದರು.
ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ 30-40 ವರ್ಷಗಳ ರಾಜಕೀಯ ಅನುಭವವಿದೆ. ಯಾವುದೋ ಒಂದು ಲಾಬಿಯಿಂದ ಯಡಿಯೂರಪ್ಪ ಹಾಗೂ ಬಿಜೆಪಿ ಪಕ್ಷವನ್ನು ಅಲ್ಲಾಡಿಸಲು ಯಾರಿಂದಲೂ ಸಾಧ್ಯವಿಲ್ಲ. ಇಂತಹ ಪಿತೂರಿ, ಷಡ್ಯಂತ್ರಗಳನ್ನು ಸಮರ್ಥವಾಗಿ ಎದುರಿಸುವ ಶಕ್ತಿ ಅವರಿಗಿದೆ ಎಂದು ಕಡ್ಡಿಮುರಿದ ಹಾಗೆ ಹೇಳುವ ಮೂಲಕ ರೆಡ್ಡಿಗಳ ಅಡ್ಡಕ್ಕೆ ಲಗ್ಗೆ ಇಟ್ಟರು. ನನ್ನ ರಾಜಕೀಯ ಬದುಕಿನ ಯಶಸ್ವಿಗೆ ಮುಖ್ಯಮಂತ್ರಿ ಪಕ್ಷ, ಸಂಘ ಪರಿವಾರ ಮತ್ತು ಯಡಿಯೂರಪ್ಪ ಅವರು ಕಾರಣ. ಮಕ್ಕಳ ಹಾಗೆ ಯಡಿಯೂರಪ್ಪ ಅವರು ನಮ್ಮನ್ನು ಬೆಳೆಸಿದ್ದಾರೆ ಎಂದು ಶೋಭಾ ಹೇಳಿದರು.
ಒಬ್ಬ ಹೆಣ್ಣಿಗಾಗಿ, ಬರೀ ಶೋಭಾ ಕರಂದ್ಲಾಜೆ ಅವರಿಂದ ರಾಜೀನಾಮೆ ಪಡೆಯಲು 14 ದಿನಗಳ ರಾಜಕೀಯ ಕದನ ನಡೆದಿದೆ ಎನ್ನುವುದಾದರೆ ಅದು ನನಗೆ ಹೆಮ್ಮೆಯ ಸಂಗತಿ. ಆದರೆ, ಒಂದು ಮಾತು ಇಷ್ಟೆಲ್ಲಾ ಮಾಡುವ ಬದಲು ಶೋಭಾ ನೀನು ರಾಜೀನಾಮೆ ನೀಡು ಎಂದು ಹೇಳಿದ್ದರೆ ಸಾಕಿತ್ತು ಸರಕಾರದ ಒಳತಿಗಾಗಿ ರಾಜೀನಾಮೆ ನೀಡುತ್ತಿದ್ದೆ. ಇಷ್ಟೆಲ್ಲಾ ಬೇಕಿತ್ತಾ, ಪಕ್ಷಕ್ಕೆ ಮಸಿ ಬಳಿಯುವ ಕೆಲಸ ಏಕೆ ಮಾಡಿದ್ದು ಎಂದು ನೊಂದು ನುಡಿದರು.
ಪ್ರವಾಹದಿಂದ ಕಂಗಟ್ಟ ಜನರನ್ನು ರಕ್ಷಿಸಲು ನಾನು ಹಗಲಿರುಳು ದುಡಿದೆ. ಆದರೆ, ವಿಪರ್ಯಾಸ ನೋಡಿ, ನಾನು ವಿನಾಕಾರಣ ರಾಜಕೀಯ ಪ್ರವಾಹಕ್ಕೆ ತುತ್ತಾಗಬೇಕಾಯಿತು. ನನಗೆ ನಂಬಿಕೆ ಇದೆ. ಶೋಭಾ ಕರಂದ್ಲಾಜೆ ಸಚಿವೆಯಾಗಿ 18 ತಿಂಗಳ ಉತ್ತಮ ಕೆಲಸ ಮಾಡಿದ್ದಾಳೆ. ಇದೇ ನನಗೆ ಶ್ರೀರಕ್ಷೆ. ನನ್ನನ್ನು ಬೆಂಬಲಿಸುವ ಜನ ರಾಜ್ಯಾದ್ಯಂತ ಇದ್ದಾರೆ. ಅದೇ ನನಗೆ ಹೆಮ್ಮೆ, ಮಂತ್ರಿಯಲ್ಲದೆ ರಾಜ್ಯದ ಜನರ ವಿಶ್ವಾಸ ಗಳಿಸುವೆ ಎಂದು ಶೋಭಾ ವಿಶ್ವಾಸದಿಂದ ನುಡಿದರು.
ಒಬ್ಬ ಸಾಮಾನ್ಯ ಕುಟುಂಬದಿಂದ ಬಂದ ನನ್ನನ್ನು ಸಂಘ ಪರಿವಾರ ಮತ್ತು ಪಕ್ಷ ಇಷ್ಟು ಎತ್ತರಕ್ಕೆ ಬೆಳೆಸಿದೆ. ಆದರೆ, ರಾಜಕೀಯ ಗೊತ್ತಿಲ್ಲದ ನಾನು, ಇಷ್ಟು ಬೇಗ ರಾಜಕೀಯದಲ್ಲಿ ಎತ್ತರಕ್ಕೆ ಬೆಳೆದಿದ್ದು ಕೆಲವರು ಕಣ್ಣು ಕುಕ್ಕುವಂತೆ ಮಾಡಿತು. ಶಾಸಕಿಯಾದೆ, ಸಚಿವೆಯಾದೆ ಉತ್ತಮ ಕೆಲಸ ಮಾಡಿದೆ. ಆದರೆ, ಒಂದು ಪ್ರಾಮಾಣಿಕತೆಗೆ ಬೆಲೆ ಇಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಪಕ್ಷಕ್ಕಾಗಿ ದುಡಿಯುವೆ ಅದರೆ, ಅಧ್ಯಕ್ಷ ಸ್ಥಾನಕ್ಕಾಗಲಿ, ಪ್ರಧಾನ ಕಾರ್ಯದರ್ಶಿ ಸ್ಥಾನದ ಅಕಾಂಕ್ಷಿಯಲ್ಲ. ನಾನು ಏನು ಮಾಡಬೇಕು ಎಂಬುದನ್ನು ಯೋಚಿಸಲು ಕಾಲಾವಕಾಶ ಬೇಕು. ನಾನು ಸ್ವಾರ್ಥಿ ಅಲ್ಲ, ರಾಜಕೀಯ ಸನ್ಯಾಸಿಯೂ ಅಲ್ಲ. ಪಕ್ಷ ಮತ್ತು ಸಂಘ ಪರಿಹಾರದ ಸಹಾಯದಿಂದ ಮೇಲಕ್ಕೆ ಬಂದಿರುವೆ. ನನ್ನ ಶ್ರದ್ಧೆ, ಶ್ರಮದಿಂದ ಮತ್ತೆ ಮಂತ್ರಿಗಿರಿ ಸಿಗಬಹುದು ಎಂಬ ಆಶಾವಾದ ವ್ಯಕ್ತಪಡಿಸಿದರು.
ನಾನು ಮಂತ್ರಿಗಿರಿಗೆ ರಾಜೀನಾಮೆ ನೀಡಿದ್ದು ಏಕೆ ಎಂದು ನನಗೇ ಗೊತ್ತಿಲ್ಲ. ಈ ಬಗ್ಗೆ ನಾನೇನೂ ಹೇಳಲು ಸಾಧ್ಯವಿಲ್ಲ. ಇದಕ್ಕೆ ಉತ್ತರಿಸಲು ನನ್ನಲ್ಲಿ ಉತ್ತರವಿಲ್ಲದ ಕಾರಣ ನಾನು ರಾಜ್ಯದ ಜನತೆಯ ಕ್ಷಮೆಯಾಚಿಸುವೆ ಎಂದು ಶೋಭಾ ಕರಂದ್ಲಾಜೆ ಅವರು ಈ ಸಂದರ್ಭದಲ್ಲಿ ಹೇಳಿದರು.
(ದಟ್ಸ್ ಕನ್ನಡ ವಾರ್ತೆ)
-
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ












Click it and Unblock the Notifications