ರೆಡ್ಡಿಗಳನ್ನು ಕಿತ್ತೆಸೆಯಿರಿ : ಅನಂತಮೂರ್ತಿ

ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು. ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮೊದಲು ತೆಗೆದುಕೊಂಡ ನಿಲುವುಗಳಿಂದ ಅವರ ಬಗ್ಗೆ ಒಂದಿಷ್ಟು ಒಳ್ಳೆಯ ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದೆ. ಆದರೆ, ಅಧಿಕಾರದ ಆಸೆಗಾಗಿ ಬಳ್ಳಾರಿ ರೆಡ್ಡಿ ಸಹೋದರರಿಗೆ ಶರಣಾಗಿ ನಾಮಾಕಾವಸ್ಥೆ ಮುಖ್ಯಮಂತ್ರಿಯಾಗಿರುವುದು ವಿಪರ್ಯಾಸ ಎಂದರು.
ಇನ್ನೂ ಕಾಲ ಮಿಂಚಿಲ್ಲ, ಮುಖ್ಯಮಂತ್ರಿ ದಿಟ್ಟತನ ಪ್ರದರ್ಶಿಸಬೇಕು. ಅಧಿಕಾರದ ಆಸೆಗೆ ಯಾರೋ ಒಬ್ಬರಿಗೆ ರಾಜ್ಯವನ್ನು ಒತ್ತೆಯಿಡುವುದು ಸರಿಯಲ್ಲ. ಈ ಕೂಡಲೇ ಅವರನ್ನು ಸಂಪುಟದಿಂದ ಕಿತ್ತೆಸೆಯಬೇಕು. ಹೀಗಾದಾಗ ಇತಿಹಾಸದಲ್ಲಿ ಅವರಿಗೊಂದು ಒಳ್ಳೆ ಹೆಸರು ಬರುತ್ತದೆ. ರಾಜ್ಯದ ಸಂಪತ್ತು ಕಾಪಾಡಿದ ಹಿರಿಮೆ ಇರುತ್ತದೆ ಎಂದು ಅನಂತಮೂರ್ತಿ ಹೇಳಿದರು.
ಬಿಜೆಪಿ ಹೈಕಮಾಂಡ್ ಇಂದು ಹಣಬಲ, ತೋಳ್ಬಲ ಇರುವವರ ಕಡೆಗೆ ಇದೆ ಎಂಬುದು ಮೊನ್ನೆಯ ಬಿಕ್ಕಟ್ಟಿನ ಶಮನದಿಂದ ಸಾಬೀತಾಗಿದೆ. ದೇಶದ ಆಡಳಿತ ವ್ಯವಸ್ಥೆಯನ್ನು ಬಿಜೆಪಿ ಕೈಗೆ ನೀಡಿದರೆ ಏನಾಗುತ್ತದೆ ಎಂಬುದಕ್ಕೆ ಕರ್ನಾಟಕ ಉದಾಹರಣೆ ಎಂದು ಅವರು ಟೀಕಿಸಿದರು.
(ದಟ್ಸ್ ಕನ್ನಡ ವಾರ್ತೆ)
-
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ












Click it and Unblock the Notifications