ಹಸೂಡಿ ಮಕ್ಕಳಿಂದ ಚಾಚಾ ನೆಹರೂಗೆ ನಮನ

ಮಕ್ಕಳ ದಿನಾಚರಣೆಯಂದು ಮುಖ್ಯ ಅತಿಥಿಯೊಬ್ಬರನ್ನು ಕರೆಸಿ ಚಾಚಾ ನೆಹರೂ ಬಗ್ಗೆ, ಮಕ್ಕಳ ದಿನಾಚರಣೆ ಬಗ್ಗೆ ಭಾಷಣ ಬಿಗಿಸುವುದು ರೂಢಿಯಾಗಿದೆ. ಆದರೆ, ಇಂದು ಮಕ್ಕಳೇ ಮುಖ್ಯ ಅತಿಥಿಗಳಾಗಿ ವೇದಿಕೆಯನ್ನು ಅಲಂಕರಿಸಿದ್ದರು. ಮಕ್ಕಳ ಮುದ್ದುಮುದ್ದಾದ ಭಾಷಣಗಳೂ ಸಭಿಕರನ್ನು ಮುದ ನೀಡಿದವು.
ಶಾಲೆಯ ಯು.ಕೆ.ಜಿ.ವಿದ್ಯಾರ್ಥಿನಿ ವಾಹಿನೀ ಬಾಲಕೃಷ್ಣ ಮಾತನಾಡಿ ಜವಾಹರಲಾಲ್ ನೆಹರು ಅವರಿಗೆ ಚಿಕ್ಕ ಮಕ್ಕಳೆಂದರೆ ಪಂಚಪ್ರಾಣವಾಗಿತ್ತು. ಆ ಕಾರಣಕ್ಕೆ ಅವರನ್ನು ಮಕ್ಕಳು ಚಾಚಾ ನೆಹರು ಎಂದು ಕರೆಯುತ್ತಿದ್ದರು. ನಮ್ಮ ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದವರಲ್ಲಿ ನೆಹರು ಅವರೂ ಒಬ್ಬರಾಗಿದ್ದರು ಎಂದ ವಾಹಿನೀ ಅವರು ನಮ್ಮ ದೇಶಕ್ಕಷ್ಟೇ ಅಲ್ಲ. ಇಡೀ ಪ್ರಪಂಚಕ್ಕೇ ಪ್ರಸ್ತುತರು. ಶಾಂತಿ ಪ್ರಿಯರಾಗಿದ್ದ ನೆಹರು ಇಂದಿನ ಪುಟಾಣಿಗಳಿಗೆ ಆದರ್ಶರು ಎಂದು ನೆಹರು ಅವರ ಗುಣಗಾನ ಮಾಡಿದಳು.
ಶಾಲೆಯ ನಾಲ್ಕನೇ ತರಗತಿಯ ಮಕ್ಕಳಾದ ಧನುಷ್, ನಟರಾಜ, ಸ್ನೇಹಾ, ಮುಂತಾದವರು ಮುಖ್ಯ ಅತಿಥಿಗಳಾಗಿ ವೇದಿಕೆಯಲ್ಲಿ ಉಪಸ್ಥಿತರಿದ್ದುದು ವಿಶೇಷವಾಗಿತ್ತು. ಶಾಲೆಯ ಶಿಕ್ಷಕಿಯರಾದ ಸುಮಾ, ಚೇತನಾ, ಗೀತಾ, ಜಯಶ್ರೀ ಕಾರ್ಯಕ್ರಮ ನಿರ್ವಹಿಸಿದರು. ನಂತರ ಚಿಣ್ಣರಿಂದ ಮನರಂಜನಾ ಕಾರ್ಯಕ್ರಮ ಜರುಗಿತು.
(ದಟ್ಸ್ ಕನ್ನಡ ವಾರ್ತೆ)
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications