ಜೈಪುರ: ಹಳಿತಪ್ಪಿದ ರೈಲು, ಏಳು ಸಾವು

ರೈಲು ಹಳಿ ತಪ್ಪಿದ ಹಿನ್ನೆಲೆಯಲ್ಲಿ ಹಳಿಗಳ ಒಂದು ಭಾಗ ಎಸಿ ಬೋಗಿಯನ್ನು ತುಂಡರಿಸಿ ಪ್ರಯಾಣಿಕರಿಗೆ ಬಡಿದಿರಬಹುದು ಎಂದು ಶಂಕಿಸಲಾಗಿದೆ. ಒಂದು ಹವಾನಿಯಂತ್ರಿತ ಬೋಗಿ ಸಂಪೂರ್ಣ ತಲೆಕೆಳಗಾಗಿದೆಯೆಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ. ಮೃತರ ನಿಕಟ ಬಂಧುಗಳಿಗೆ 5 ಲಕ್ಷ ರೂ. ಪರಿಹಾರವನ್ನು ರೈಲ್ವೆ ಸಚಿವ ಮಮತಾ ಬ್ಯಾನರ್ಜಿ ಘೋಷಿಸಿದ್ದಾರೆ.
ರೈಲು ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡವರಿಗೆ ಒಂದು ಲಕ್ಷ ರೂ. ಮತ್ತು ಸಣ್ಣಪುಟ್ಟ ಗಾಯಗಳಾದವರಿಗೆ 10,000 ರೂ. ಪರಿಹಾರ ನೀಡಲಾಗುವುದು ಎಂದು ವಾಯವ್ಯ ರೈಲ್ವೆ ವಕ್ತಾರ ತಿಳಿಸಿದರು. ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮೃತರ ಸಮೀಪ ಬಂಧುಗಳಿಗೆ ಎರಡು ಲಕ್ಷ ರೂ. ಪರಿಹಾರ ಮತ್ತು ತೀವ್ರವಾಗಿ ಗಾಯಗೊಂಡವರಿಗೆ ಒಂದು ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.
Helpline numbers
1800-180-6131 (toll free)
011-23967332, 23962389
Alwar: 1274-25205
(ಏಜೆನ್ಸೀಸ್)












Click it and Unblock the Notifications