ವಂಚಿತೆ ಪ್ರಿಯಾಂಕಾಳಿಗೆ ಆಚಾರ್ಯರ ಶ್ರೀರಕ್ಷೆ

ಗೃಹ ಸಚಿವ ವಿಎಸ್ ಆಚಾರ್ಯಅವರ ನಿವಾಸಕ್ಕೆ ಪ್ರಿಯಾಂಕಾಸೇರಿದಂತೆ ಅವರ ಕುಟುಂಬದ ಸದಸ್ಯರು ಭೇಟಿ ಮಾಡಿದರು.ವಂಚಿತೆ ಪ್ರಿಯಾಂಕಾರಿಂದ ದೂರು ಸ್ವೀಕರಿಸಿದ ಅಚಾರ್ಯ ಅವರು, ತಕ್ಷಣ ನಗರ ಪೊಲೀಸ್ ಆಯುಕ್ತ ಶಂಕರ ಬಿದರಿ ಅವರಿಗೆ ಕರೆ ಮಾಡಿ ಪರಿಸ್ಥಿತಿಯ ವಿವರ ಪಡೆದರು. ನಂತರ ತಪ್ಪಿಸ್ಥರ ವಿರುದ್ಧ ಕ್ರಮದ ಭರವಸೆ ನೀಡಿದರು ಎನ್ನಲಾಗಿದೆ.
ಇದಕ್ಕೂ ಮುನ್ನ ಇಂದು ಬೆಳಗ್ಗೆ ನಂದಿನಿಲೇಔಟ್ ಪೊಲೀಸ್ ಠಾಣೆಯ ಮುಂದೆ ನೂರಾರು ಜನರು ನ್ಯಾಯಕ್ಕಾಗಿ ಆಗ್ರಹಿಸಿ ಧರಣಿ ನಡೆಸಿದರು. ನಂದಿನಿಲೇಔಟ್ ನ ಸರಸ್ವತಿ ಪುರಂ ನಿವಾಸಿ , ವಂಚನೆಗೊಳಗಾದ ಯುವತಿ ಪ್ರಿಯಾಂಕಾ ಅವರಿಗೆ ಸ್ಥಳೀಯ ಮಹಿಳಾ ಸಂಘಟನೆಗಳು, ಸ್ಥಳೀಯ ನಾಗರೀಕ ಸೇವಾ ಸಂಸ್ಥೆಗಳು ಬೆಂಬಲ ವ್ಯಕ್ತಪಡಿಸಿದ್ದು, ದೂರು ದಾಖಲಿಸಲು ನಿರ್ಲಕ್ಷ್ಯ ತೋರಿದ ಪೊಲೀಸ್ ಅಧಿಕಾರಿಗಳನ್ನು ಕೂಡಲೇ ಅಮಾನತುಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.
ನಂತರ ಸ್ಥಳಕ್ಕೆ ಆಗಮಿಸಿದ ಉತ್ತರ ವಲಯ ಡಿಸಿಪಿ ರೇವಣ್ಣ ಅವರು, ಪ್ರಿಯಾಂಕಾ ಅವರ ಅಹವಾಲನ್ನು ಆಲಿಸಿದರು. 24 ಗಂಟೆವರೆಗೂ ಕಾಯಲು ತಿಳಿಸಿದ್ದಾರೆ. ಕಾನೂನು ರೀತಿಯಲ್ಲೇ ಹೋರಾಟ ನಡೆಸುತ್ತೇವೆ. ನಂದಿನಿ ಲೇಔಟ್ ನ ಎಲ್ಲಾ ನಾಗರೀಕರ ಬೆಂಬಲ ನನಗೆ ಸಿಕ್ಕಿದೆ .ಘಟನೆ ಬಗ್ಗೆ ಟಿವಿ9, ಸುವರ್ಣ ಚಾನೆಲ್ ನಲ್ಲಿ ರಾಜ್ಯದ ಜನರು ನೋಡಿದ್ದಾರೆ. ಸರಿಯಾದ ಸಮಯಕ್ಕೆ ನ್ಯಾಯ ದೊರಕದಿದ್ದಲ್ಲಿ ರಾಜ್ಯದ ಜನರ ಬೆಂಬಲ ಪಡೆದು ಹೋರಾಟ ಮುಂದುವರೆಸುವುದಾಗಿ ವಂಚಿತೆ ಪ್ರಿಯಾಂಕಾ ಸುದ್ದಿಗಾರರಿಗೆ ತಿಳಿಸಿದರು.ಈ ಮಧ್ಯೆ ಆರೋಪಿ ಆನಂದ್ ಹಾಗೂಆತನ ಮನೆಯವರು ನಾಪತ್ತೆಯಾಗಿದ್ದಾರೆ. ಮದುವೆ ಮಂಟಪ, ಛತ್ರವನ್ನು ಹಾಗೇ ಬಿಟ್ಟು ಪರಾರಿಯಾಗಿದ್ದಾರೆ. ಪ್ರಿಯಾಂಕ ಹಾಗೂ ಆನಂದ್ ಅವರ ಪ್ರೇಮ ಕಥೆ ನಿಜ ಎಂದು ಅಕ್ಕಪಕ್ಕದ ಮನೆಯವರು ಹೇಳಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)
-
ಬೆಂಗಳೂರಿನ ಹೊಸೂರು ರಸ್ತೆಯ ದುಸ್ಥಿತಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಟ್ಯಾಗ್ ಮಾಡಿ ಕಿರಣ್ ಮಜುಂದಾರ್ ಶಾ ಆಕ್ರೋಶ -
Bengaluru Viral: ಬೆಂಗಳೂರಿನ ಲಾಲ್ಬಾಗ್ ನೋಡಿ ತಪ್ಪೊಪ್ಪಿಗೆ ಕೊಡಬೇಕು ಎಂದ ವಿದೇಶಿಗ, ವಿಡಿಯೋ ವೈರಲ್ -
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
Gold and Silver Rate Today April 5: ಚಿನ್ನ - ಬೆಳ್ಳಿ ಪ್ರಿಯರಿಗೆ ಗುಡ್ನ್ಯೂಸ್, ಮುಂದಿನ ವಾರ ಹೇಗಿರಲಿದೆ ಬಂಗಾರದ ಬೆಲೆ -
Bengaluru Migration: ಅಸ್ಸಾಂನಿಂದ ಬೆಂಗಳೂರಿಗೆ ಬರುವವರ ಸಂಖ್ಯೆ ಕಡಿಮೆಯಾಗಿದೆ ಎಂದ ಸಂಸದ ತೇಜಸ್ವಿ ಸೂರ್ಯ -
ಸಿಎಸ್ಕೆ ವಿರುದ್ಧದ ಹೈವೋಲ್ಟೇಜ್ ಪಂದ್ಯಕ್ಕೂ ಮುನ್ನ ಸ್ಫೋಟಕ ಸತ್ಯ ಬಿಚ್ಚಿಟ್ಟ ಆರ್ಸಿಬಿ ಸ್ಟಾರ್, ಕನ್ನಡಿಗ ಪಡಿಕ್ಕಲ್ -
ಉತ್ತರ ಕರ್ನಾಟಕದ ರೈಲು ಪ್ರಯಾಣಿಕರಿಗೆ ಬಂಪರ್ ಕೊಡುಗೆ: 3 ರೈಲುಗಳು ಇನ್ಮುಂದೆ ಪರ್ಮನೆಂಟ್, ಟಿಕೆಟ್ ದರದಲ್ಲಿ ಭಾರಿ ಇಳಿಕೆ! -
Match Weather Report: ಚಿನ್ನಸ್ವಾಮಿಯಲ್ಲಿ ಆರ್ಸಿಬಿ-ಸಿಎಸ್ಕೆ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
ಉಪೇಂದ್ರ ಅಣ್ಣನ ಮಗನ ಜೊತೆ ಶ್ರೇಯಾಂಕ ಪಾಟೀಲ್ ಮದುವೆ ಸುದ್ದಿ: ಖಡಕ್ ಪ್ರತಿಕ್ರಿಯೆ ಕೊಟ್ಟ ನಟ ನಿರಂಜನ್ ಸುಧೀಂದ್ರ -
Prakash Raj: ಚಹಾ ಮಾರುವುದರಿಂದ ಸಿನಿಮಾ ಮಾರುವವರೆಗೆ ಮೋದಿ ಬಗ್ಗೆ ನಟ ಪ್ರಕಾಶ್ ರಾಜ್ ವ್ಯಂಗ್ಯ -
ಪಾಪರ್ ಸರ್ಕಾರದ ಸಾಹುಕಾರ ಸಿದ್ದರಾಮಯ್ಯ: ಬಾಗಲಕೋಟೆ ಮೆಡಿಕಲ್ ಕಾಲೇಜ್ ಬಗ್ಗೆ ಬೊಮ್ಮಾಯಿ ಪ್ರಶ್ನೆ -
Basavaraj Bommai: ನಾನು ಗೌರವ ಡಾಕ್ಟರೇಟ್ ಸ್ವೀಕರಿಸುವುದಿಲ್ಲ ಎಂದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ












Click it and Unblock the Notifications