ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಿಜೆಪಿ ಸಚಿವರ ಭೇಟಿ ನಿಜ: ಕುಮಾರಸ್ವಾಮಿ

|
Google Oneindia Kannada News

HD Kumaraswamy
ಬೆಂಗಳೂರು, ನ.15: ಬಿಜೆಪಿಯ ಇಬ್ಬರು ಸಚಿವರು ತಮ್ಮ ಭೇಟಿ ಮಾಡಿರುವುದು ನಿಜ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ. ಆದರೆ ಅವರು ಯಾವುದೇ ರಾಜಕೀಯ ವಿಷಯಗಳ ಚರ್ಚೆಗಾಗಿ ತಮ್ಮನ್ನು ಭೇಟಿ ಮಾಡಿಲ್ಲ ಎಂದು ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.

ತಮ್ಮ ವೈಯಕ್ತಿಕ ಸಮಸ್ಯೆಗಳನ್ನು ಕುರಿತು ಚರ್ಚಿಸಲು ಸಚಿವರು ಭೇಟಿಯಾಗಿದ್ದರು ಎಂದಿರುವ ಕುಮಾರಸ್ವಾಮಿ ಸಚಿವರ ಹೆಸರನ್ನು ಹೇಳಲು ನಿರಾಕರಿಸಿದ್ದಾರೆ. ಅಧಿಕಾರಿಗಳ ವರ್ಗಾವಣೆ ಬಗ್ಗೆ ಯಡಿಯೂರಪ್ಪ ಸಮರ್ಥಿಸಿಕೊಂಡಿರುವ ಬಗ್ಗೆಯೂ ಕುಮಾರಸ್ವಾಮಿ ಕಿಡಿ ಕಾರಿದರು.

ಇನ್ನೆಂದೂ ವರ್ಗಾವಣೆ ಮಾಡುವುದಿಲ್ಲ ಎಂದು ಬಡಾಯಿ ಕೊಚ್ಚಿಕೊಂಡಿರುವ ಯಡಿಯೂರಪ್ಪ, ವಾರಕ್ಕೊಮ್ಮೆ ಡಜನ್ ಗಟ್ಟಲೆ ಅಧಿಕಾರಿಗಳನ್ನು ವರ್ಗಾವಣೆ ಮಾಡುವ ಮೂಲಕ ಅವರ ಹುದ್ದೆಯ ಘನತೆಯನ್ನು ಗಾಳಿಗೆ ತೂರಿದ್ದಾರೆ ಎಂದು ಕುಮಾರಸ್ವಾಮಿ ಆಕ್ಷೇಪಿಸಿದರು.

ಭೇಟಿ ನಡೆದಿಲ್ಲ: ಯಡಿಯೂರಪ್ಪ
ನಮ್ಮ ಪಕ್ಷದ ಯಾವುದೇ ಸಚಿವರು ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿಲ್ಲ ಎಂದು ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. ನಮ್ಮ ಬಗ್ಗೆ ಕುಮಾರಸ್ವಾಮಿ ಅವರಿಗೆ ಅಷ್ಟೊಂದು ಕಾಳಜಿ ಇದ್ದರೆ ಸಲಹೆ ಕೊಡಲಿ ಎಂದು ವ್ಯಂಗವಾಡಿದರು. ಆಗ ಪಕ್ಕದಲ್ಲೇ ಇದ್ದ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಅವರು ತಾವಂತೂ ಭೇಟಿಯಾಗಿಲ್ಲ ಎಂದು ಹೇಳಿದರು.

(ದಟ್ಸ್ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X