ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಹೊಸೂರು ರಸ್ತೆಯ ವಿಷ್ಣು ಲಾಡ್ಜ್ ಗೆ ಬೆಂಕಿ

|
Google Oneindia Kannada News

ಬೆಂಗಳೂರು, ನ.15: ಹೊಸೂರು ರಸ್ತೆಯಲ್ಲಿನ ವಿಷ್ಣು ಲಾಡ್ಜ್ ಗೆ 50ಕ್ಕೂ ಹೆಚ್ಚು ಮಂದಿಯಿದ್ದ ದುಷ್ಕರ್ಮಿಗಳ ಗುಂಪು ಬೆಂಕಿ ಹಚ್ಚಿ ದಾಳಿ ಮಾಡಿದ ಘಟನೆ ಭಾನುವಾರ ಮುಂಜಾನೆ ನಡೆದಿದೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಶನಿವಾರ ಆನಂದ್ ಎಂಬ ವ್ಯಕ್ತಿಯ ಹತ್ಯೆ ನಡೆದಿತ್ತು. ಈ ಹಿನ್ನೆಲೆಯಲ್ಲಿ ಪ್ರತಿಕಾರ ತೀರಿಸಿಕೊಳ್ಳಲು ಬನ್ನಹಳ್ಳಿ ಗ್ರಾಮಸ್ಥರು ದಾಳಿ ಮಾಡಿದ್ದಾರೆ ಎನ್ನಲಾಗಿದೆ.

ವಿಷ್ಣು ಲಾಡ್ಜ್ ನ ಮಾಲೀಕ ವೆಂಕಟೇಶ್ ಮೇಲೆ ದುಷ್ಕರ್ಮಿಗಳ ತಂಡ ತೀವ್ರವಾಗಿ ಹಲ್ಲೆ ಮಾಡಿದೆ. ವೆಂಕಟೇಶ್ ಅವರ ಸ್ಕಾರ್ಫಿಯೊ ವಾಹನವನ್ನು ಸುಟ್ಟುಹಾಕಲಾದ್ದು ಲಾಡ್ಜ್ ನಲ್ಲಿನ ವಸ್ತುಗಳು ಬೆಂಕಿಗೆ ಸಂಪೂರ್ಣವಾಗಿ ಆಹುತಿಯಾಗಿವೆ. ಹೊಸೂರು ರಸ್ತೆಯ ನಾರಾಯಣ ಹೃದಯಾಲಯದ ಸಮೀಪವೇ ಈ ಲಾಡ್ಜ್ ಇದೆ.

ಅಗ್ನಿ ಶಾಮಕ ದಳ ಘಟನಾ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಯಿತು. ಹೆಬ್ಬಗೋಡಿ ಪೊಲೀಸರು ಪ್ರಕರಣವನ್ನುದಾಖಲಿಸಿಕೊಂಡಿದ್ದು ತನಿಖೆ ಮುಂದುವರೆದಿದೆ. ಗಾಯಗೊಂಡ ಲಾಡ್ಜ್ ನ ಮಾಲೀಕ ವೆಂಕಟೇಶ್ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

(ದಟ್ಸ್ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X