ಸ್ಪೀಕರ್ ಸ್ಥಾನಕ್ಕೆ ಜಗದೀಶ್ ಶೆಟ್ಟರ್ ರಾಜೀನಾಮೆ

ನ.17 ರಂದು 11.30 ಕ್ಕೆ 11.30 ಕ್ಕೆ ರಾಜಭವನದಲ್ಲಿ ನಡೆವ ಕಾರ್ಯಕ್ರಮದಲ್ಲಿ ಪ್ರಮಾಣ ವಚನ ಸ್ವೀಕರಿಸಿ ಶೆಟ್ಟರ್ ಅವರು ಸಚಿವ ಸಂಪುಟಕ್ಕೆ ಸೇರಲು ಮಹೂರ್ತ ನಿಗದಿಯಾಗಿದೆ.ಇಂದು ಸಂಜೆ ಮುಖ್ಯಮಂತ್ರಿ ಯಡಿಯೂರಪ್ಪ, ಆರೆಸ್ಸೆಸ್ ಮುಖಂಡ ಆನಂದ್ ಸೇರಿದಂತೆ ಪ್ರಮುಖ ನಾಯಕರೊಡನೆ ಸಮಾಲೋಚನಾ ಸಭೆ ನಡೆಯಲಿದ್ದು, ಶೆಟ್ಟರ್ ಅವರು ಪಾಲ್ಗೊಳ್ಳಲಿದ್ದಾರೆ.
ಯಾವ ಖಾತೆ ಸಿಗಬಹುದು?
ಗ್ರಾಮೀಣಾಭಿವೃದ್ಧಿ, ಬೃಹತ್ ಕೈಗಾರಿಕೆ, ವಸತಿ, ಲೋಕೋಪಯೋಗಿ ಖಾತೆ ಸಿಗುವ ಸಾಧ್ಯತೆಯಿದೆ ಎಂಬ ಸುದ್ದಿ ಇದ್ದರೂ ಇನ್ನೂ ಯಾವ ಖಾತೆ ಸಿಗಲಿದೆ ಎನ್ನುವುದು ಸ್ವತಃ ಶೆಟ್ಟರ್ ಅವರಿಗೆ ತಿಳಿದಿಲ್ಲ.ಹಿರಿಯರ ಅಣತಿಯಂತೆ ಸ್ಪೀಕರ್ ಸ್ಥಾನದಲ್ಲಿ ಕಾರ್ಯ ನಿರ್ವಹಿಸಿದೆ. ಈಗ ಸಚಿವ ಸಂಪುಟಕ್ಕೆ ಸೇರುತ್ತಿರುವುದಕ್ಕೂ ಪಕ್ಷದ ಹಿರಿಯರ ನಿರ್ಧಾರವೇ ಕಾರಣ. ಕ್ರಿಯಾಶೀಲ ರಾಜಕಾರಣಿಯಾಗಿ ಕೆಲಸ ನಿರ್ವಹಿಸಿದ ಬಳಿಕ ಸ್ಪೀಕರ್ ಹುದ್ದೆಯಲ್ಲಿದ್ದೆ. ಸ್ಪೀಕರ್ ಸ್ಥಾನ ತುಂಬಾ ಗೌರವಯುತವಾದದ್ದು,ಆದರೆ, ಈಗ ಸಕ್ರಿಯ ರಾಜಕೀಯಕ್ಕೆ ಇಳಿಯುತ್ತಿರುವುದು ಖುಷಿಕೊಟ್ಟಿದೆ ಎಂದು ಶೆಟ್ಟರ್ ಸುದ್ದಿಗಾರರಿಗೆ ತಿಳಿಸಿದರು.
ಶೆಟ್ಟರ್ ಅವರಿಗೆ ಯಾವ ಖಾತೆ ನೀಡಬೇಕು ಎಂಬುದು ಸಿಎಂ ಯಡಿಯೂರಪ್ಪ ಅವರಿಗೆ ಬಿಟ್ಟಿದ್ದು, ಇಂದು ಶೆಟ್ಟರ್ ಅವರು ಸಕ್ರಿಯ ರಾಜಕಾರಣಕ್ಕೆ ಮರಳುತ್ತಿರುವುದು ನಮ್ಮ ಎಲ್ಲಾ ಕಾರ್ಯಕರ್ತರಿಗೆ ಸಂತೋಷದ ವಿಷಯವಾಗಿದೆ. ಪಕ್ಷದ ಹಿತದೃಷ್ಟಿಯ ನಿಟ್ಟಿನಲ್ಲಿ ಹಿರಿಯರು ನೀಡಿದ ಆದೇಶವನ್ನು ನಾವು ಪಾಲನೆ ಮಾಡುತ್ತಿದ್ದೇವೆ. ಆದರೆ, ನಮ್ಮ ಬೇಡಿಕೆ ಈಡೇರಿತು ಎಂದು ಮಾಧ್ಯಮದವರು ಹೇಳುವುದು ಸರಿಯಲ್ಲ. ನಾವು ಯಾವುದೇ ಬೇಡಿಕೆ ಇಟ್ಟಿಲ್ಲ ಎಂದು ಪ್ರವಾಸೋದ್ಯಮ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರು ಪ್ರತಿಕ್ರಿಯಿಸಿದ್ದಾರೆ.
ಸ್ಪೀಕರ್ ಹುದ್ದೆ ಸುರೇಶ್ ಕುಮಾರ್, ವಿಶ್ವೇಶ್ವರ ಹೆಗಡೆ ಕಾಗೇರಿ, ಸಿಎಂ ಉದಾಸಿ ಅವರ ಹೆಸರು ಕೇಳಿ ಬರುತ್ತಿದ್ದು, ಸಮನ್ವಯ ಸಮಿತಿ ರಚನೆಯಾಗಿ ಅದು ಕೈಗೊಳ್ಳುವ ನಿರ್ಧಾರದ ಮೇಲೆ ಎಲ್ಲಾ ಅವಲಂಬಿತವಾಗಿದೆ ಎನ್ನಲಾಗಿದೆ.ಸಮನ್ವಯ ಸಮಿತಿ ಇನ್ನೂ ರಚನೆಯಾಗುವ ಹಂತದಲ್ಲಿದ್ದು, ಸಮಿತಿ ಸೇರಲು ಹಿರಿಯ ನಾಯಕರು ಲಾಬಿ ನಡೆಸುತ್ತಿದ್ದಾರೆ ಎಂಬ ಸುದ್ದಿ ಹೊರಬಿದ್ದಿದೆ. ಸದ್ಯ ಯಡಿಯೂರಪ್ಪ, ಕರುಣಾಕರರೆಡ್ಡಿ, ಅನಂತಕುಮಾರ್, ಜಗದೀಶ್ ಶೆಟ್ಟರ್, ಆರೆಸ್ಸೆಸ್ ನ ಜಿ ಸಂತೋಷ್ ಹಾಗೂ ಸತೀಶ್ ಅವರು ಸಮನ್ವಯ ಸಮಿತಿಯಲ್ಲಿರುವುದು ಖಾತ್ರಿಯಾಗಿದೆ. ಆರ್ ಅಶೋಕ್, ಕಟ್ಟಾ ಸುಬ್ರಮಣ್ಯ ನಾಯ್ಡು ಅವರು ಕೂಡ ಸಮಿತಿಯಲ್ಲಿ ಸ್ಥಾನ ಪಡೆಯಲು ಉತ್ಸುಕರಾಗಿದ್ದಾರೆ ಎನ್ನಲಾಗಿದೆ.
(ದಟ್ಸ್ ಕನ್ನಡವಾರ್ತೆ)
-
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
ರಿಷಬ್ ಸಮಯ ಬಂದಾಗ ಮಾತಾಡ್ತೀನಿ ಅಂದ: ಅನ್ಫಾಲೋ, ಗೆಳೆಯರಲ್ಲಿ ಬಿರುಕು ವದಂತಿ ಬಗ್ಗೆ ಪ್ರಮೋದ್ ಶೆಟ್ಟಿ ಪ್ರತಿಕ್ರಿಯೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾ ಕುಮಾರಿ ನೇಮಕ -
April 5 Horoscope: ನಿಮ್ಮ ಅದೃಷ್ಟ ಹೇಗಿದೆ? ಸಂಪೂರ್ಣ ಮಾಹಿತಿ ಇಲ್ಲಿ -
ಬೆಂಗಳೂರಿನ ಹೊಸೂರು ರಸ್ತೆಯ ದುಸ್ಥಿತಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಟ್ಯಾಗ್ ಮಾಡಿ ಕಿರಣ್ ಮಜುಂದಾರ್ ಶಾ ಆಕ್ರೋಶ -
Bengaluru Viral: ಬೆಂಗಳೂರಿನ ಲಾಲ್ಬಾಗ್ ನೋಡಿ ತಪ್ಪೊಪ್ಪಿಗೆ ಕೊಡಬೇಕು ಎಂದ ವಿದೇಶಿಗ, ವಿಡಿಯೋ ವೈರಲ್ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
Virat Kohli: ಎಲ್ಲೂ ಅವಕಾಶ ಸಿಗದಿದ್ರೆ ಸ್ಯಾಂಡಲ್ವುಡ್ಗೆ ಬರ್ತೀನಿ: ವಿರಾಟ್ ಕೊಹ್ಲಿ ವಿಡಿಯೋ ವೈರಲ್












Click it and Unblock the Notifications