ಮಲೆನಾಡಿನಲ್ಲಿ ಸಸಿನೆಡುವ ಚಳವಳಿ!

ರಾಷ್ಟ್ರೀಯ ಗ್ರಾಮೀಣ ಖಾತ್ರಿ ಯೋಜಿನೆಯಡಿಯಲ್ಲಿ ಶಿವಮೊಗ್ಗ ಜಿಲ್ಲಾಡಳಿತ ಒಂದು ಕೋಟಿ ಎರಡು ಲಕ್ಷ ಸಸಿಗಳನ್ನು ನೆಡಲು ನಿರ್ಧರಿಸಿದೆ. ಇವುಗಳನ್ನು ರೈಲ್ವೆ ಹಳಿಯ ಎರಡೂ ಕಡೆಗಳಲ್ಲಿ ಲೋಕಪಯೋಗಿ ಇಲಾಖೆ ಆವರಣ. ರಾಷ್ಟ್ರೀಯ ಹೆದ್ದಾರಿಯ ಇಕ್ಕೆಲೆಗಳಲ್ಲಿ, ಜಿ.ಪಂ.ಕಚೇರಿ, ಶಾಲಾ -ಕಾಲೇಜುಗಳ ಆವರಣಗಳಲ್ಲಿ ಸಸಿ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಕಾರಿಗಳನ್ನು ತೊಡಗಿಸಿ ಕೊಳ್ಳುವುದರ ಮೂಲಕ ಶಾಲಾ, ಕಾಲೇಜು ವಿದ್ಯಾರ್ಥಿ ವಿದ್ಯಾರ್ಥಿನಿಯರು ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಮಾಡಲಾಗುವುದು ಎಂದು ಅವರು ತಿಳಿಸಿದರು.
ನೆಟ್ಟ ಗಿಡಗಳ ಸುಸ್ಥಿರ ಬೆಳವಣಿಗೆಗೆ ವಿದ್ಯಾರ್ಥಿ ಸಮೂಹದ ಶ್ರಮ ಅತೀ ಮುಖ್ಯವಾದದ್ದು ಎಂದ ಪಾಂಡೆ ಈ ಕಾರ್ಯಕ್ರಮದ ಜ್ಯಾರಿಗೆ ಶಿಸ್ತು ಬದ್ಧ ಜನಾಂದೋಲನವನ್ನು ಹಮ್ಮಿಕೊಳ್ಳಲಾಗುವುದೆಂದು ಅವರು ತಿಳಿಸಿದರು.ಇದರೊಂದಿಗೆ ಶಿವಮೊಗ್ಗವನ್ನು ರಾಜ್ಯದಲ್ಲೇ ಮಾದರಿ ಹಸಿರು ಜಿಲ್ಲೆಯನ್ನಾಗಿಸಲಾಗುವುದೆಂದು ಪ್ರಕಟಿಸಿದರು.ಶಿವಮೊಗ್ಗ ನಗರದಲ್ಲಿ ವಾಹನ ದಟ್ಟಣೆ ಹೆಚ್ಚಾಗುತ್ತಿದ್ದು ಆದರಿಂದ ವಾಯುಮಾಲಿನ್ಯವೂ ಹೆಚ್ಚುತ್ತಿದೆ. ಇದನ್ನು ತಡೆಗಟ್ಟಲು ನಗರಸಭೆ ಇನ್ನಿತರ ಸಂಘ ಸಂಸ್ಥೆ ಸಹಯೋಗದೊಂದಿಗೆ ಶಿವಮೊಗ್ಗದಲ್ಲಿ ಪ್ರತ್ಯೇಕ ಟ್ರಕ್ ಟರ್ಮಿನೆಸ್ ಸ್ಥಾಪನೆ ಮಾಡಲಾಗುವುದು. ಆ ಮೂಲಕ ನಗರ ಮಧ್ಯದಲ್ಲಿ ಲಾರಿಗಳು ನಿಂತು ತೊಂದರೆ ಉಂಟುಮಾಡುವುದನ್ನು ತಪ್ಪಿಸಲಾಗುವುದು ಎಂದರು.
ಹಿಂದುಳಿದ ವರ್ಗದವರಿಗೆ, ಪ.ಜಾ.ಪ.ಪಂಗಡದವರಿಗೆ ಆಟೋರಿಕ್ಷಾ ಓಡಿಸಲು ಉಚಿತವಾಗಿ ಗ್ಯಾಸ್ ಸಿಲಿಂಡರ್ ನೀಡುವ ಅವಕಾಶ ನಗರಸಭೆಗಿದೆ. ಆ ಮೂಲಕವೂ ವಾಯುಮಾಲಿನ್ಯ ತಡೆಗಟ್ಟಬಹುದು ಎಂಬ ಅಭಿಪ್ರಾಯ ವ್ಯಕ್ತ ಪಡಿಸಿದರು. ಪರ್ಯಾಯ ಇಂಧನ ಬಳಕೆ ಕಡೆಯೂ ಜನರು ಲಕ್ಷ್ಯ ವಹಿಸಬೇಕೆಂದು ಕರೆ ನೀಡಿದರು.
ವಾಯುಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ ಬರುವ ಜನವರಿಯಿಂದ ಬೃಹತ್ ಜನಾಂದೋಲನ ಹಮ್ಮಿಕೊಳ್ಳಲಾಗುವುದೆಂದು ಶಿವಮೊಗ್ಗ ಪ್ರಾದೇಶಿಕ ಸಾರಿಗೆ ಅಧಿಕಾರಿ ಮಲ್ಲಿಕಾರ್ಜುನ ತಿಳಿಸಿದರು. ದೇಶಕ್ಕೆ ತೊಂದರೆ ಕೊಡುವ ಕೆಲಸ ಯಾರು ಮಾಡುತ್ತಾರೋ ಅವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಠಿಣ ಕ್ರಮ ಕೈಗೊಳ್ಳಲಾಗುವುದು. ಒಂದು ಮರ ಕಡಿದರೆ ಅದರ ಬದಲು ಹತ್ತು ಗಿಡನೆಡುವ ಕಾರ್ಯವಾಗಬೇಕು. ತಮ್ಮ ಕಚೇರಿ ಆವರಣದಲ್ಲೂ ತಾವು ಇದನ್ನೇ ಮಾಡಿದ್ದಾಗಿ ಅವರು ಸಮರ್ಥಿಸಿಕೊಂಡರು.
ನಗರಗಳಲ್ಲಿ ಸ್ತ್ರೀಶಕ್ತಿ ಗುಂಪು, ಸ್ವಸಹಾಯ ಗುಂಪುಗಳ ಸಹಕಾರದಿಂದ ವಾಯುವಾಲಿನ್ಯ ತಡೆಗಟ್ಟಿ ಶಿವಮೊಗ್ಗವನ್ನು ವಾಯುಮಾಲಿನ್ಯ ರಹಿತ ಜಿಲ್ಲೆಯನ್ನಾಗಿಸುವುದು ತಮ್ಮ ಗುರಿ ಎಂದು ಪಾಂಡೆ ತಿಳಿಸಿದರು.ನಗರಸಭಾಧ್ಯಕ್ಷ ಎನ್.ಜೆ.ರಾಜ ಶೇಖರ, ಉಪಸಾರಿಗೆ ಆಯುಕ್ತ ಮಾರುತಿ ಸಾಂಬ್ರಾಣಿ, ಶಿವಮೊಗ್ಗ ಲಾರಿ ಮಾಲೀಕರ ಸಂಘದ ಅಧ್ಯಕ್ಷ ಜ್ಯೋತಿಪ್ರಕಾಶ್, ಬಸ್ ಮಾಲೀಕರ ಸಂಘದ ಅಧ್ಯಕ್ಷ ಜಯಪ್ರಕಾಶ್ ಶೆಣೈ, ಭಾರತ್ ಪೆಟ್ರೋಲಿಯಂ ಕಾರ್ಪೋರೇಷನ್ ಅಧಿಕಾರಿ ಹೇಮಂತಕುಮಾರ್, ಪ್ರಕಾಶ್, ಎನ್.ಸಿ.ಸಿ.ಕಮಾಂಡರ್ ಸುರೇಶ್, ರೌಂಡ್ ಟೇಬಲ್ ಅಧ್ಯಕ್ಷ ವೆಂಕಟೇಶ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.ಸಾರಿಗೆ ಇಲಾಖೆ ಹೊರತಂದಿರುವ ವಿವಿಧ ನಮೂನೆಯ ಪೋಸ್ಟರ್ಗಳನ್ನು ಇದೇ ಸಂದರ್ಭದಲ್ಲಿ ಬಿಡುಗಡೆಗೊಳಿಸಲಾಯಿತು.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications