ಕೆಎಂಎಫ್ ಗಾದಿಗೆ ರೆಡ್ಡಿ, ಡಿವಿಎಸ್ ಕಿತ್ತಾಟ?

ಸೋಮಶೇಖರ ರೆಡ್ಡಿ ಅವರ ಅಧಿಕಾರವಧಿ ಮುಗಿದಿದೆ ಸದ್ಯದಲ್ಲೇ ಅವರ ಸ್ಥಾನ ಬದಲಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಡಿವಿ ಸದಾನಂದ ಗೌಡ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ರೆಡ್ಡಿ ಅವರು, "ನನಗೆ ಯಾವುದೇಸಚಿವ ಸ್ಥಾನದ ಮೇಲೆ ಆಸಕ್ತಿ ಇಲ್ಲ, ಕೆಎಂಎಫ್ ಅಧ್ಯಕ್ಷ ಸ್ಥಾನದಲ್ಲಿ ಮುಂದುವರೆಯುವುದು ನನ್ನ ಇಚ್ಛೆ. ಮೂರು ತಿಂಗಳ ನಂತರ ಸ್ಥಾನವನ್ನು ತ್ಯಜಿಸುವ ಬಗ್ಗೆ ಬಂದಿರುವ ಊಹಾಪೋಹಗಳಿಗೆ ಬೆಲೆ ಇಲ್ಲ" ಎಂದರು.
ಅವರು ಸೋಮವಾರ ನಗರದಲ್ಲಿ ದ.ಕ. ಹಾಲು ಒಕ್ಕೂಟ ಏರ್ಪಡಿಸಿದ್ದ 6 ಕೆಜಿ ನಂದಿನಿ ಮೊಸರು ಜಂಬೋ ಪ್ಯಾಕೆಟ್' ಬಿಡುಗಡೆ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದರು. ಇಲ್ಲಿನ ಹಾಲು ಒಕ್ಕೂಟದ ಸಮಗ್ರ ಅಭಿವೃದ್ಧಿಗೆ ಅನುದಾನದ ಅಗತ್ಯವನ್ನು ಮನಗಂಡಿದ್ದೇವೆ. ಮುಖ್ಯಮಂತ್ರಿಗಳು ಹಾಗೂ ಸಹೋದರರ ಜತೆ ಚರ್ಚಿಸಿ ದಕ್ಷಿಣ ಕನ್ನಡಕ್ಕೆ ರು.50 ಕೋಟಿ ಅನುದಾನ ಒದಗಿಸಲಾಗುವುದು ಎಂದು ರೆಡ್ಡಿ ನುಡಿದರು.
ಮೊಸರಿನ ಜಂಬೋ ಪ್ಯಾಕೆಟ್ ಬಿಡುಗಡೆ ಮಾಡಿ ಮಾತನಾಡಿದ ಮೂಳೆತಜ್ಞ ಡಾ.ಶಾಂತಾರಾಮ ಶೆಟ್ಟಿ, ಅಸ್ಥಿಗಳ ಬೆಳವಣಿಗೆಗೆ ಹಾಗೂ ಅವುಗಳ ಆರೋಗ್ಯ ಕಾಪಾಡಲು ಕ್ಯಾಲ್ಸಿಯಂ ಮತ್ತು ವಿಟಮಿನ್ ಡಿ ಅತ್ಯಗತ್ಯ. ಹಾಲಿನಲ್ಲಿ ಇವೆರಡು ಸತ್ವಗಳಿವೆ. ಹಾಗಾಗಿ ಎಲ್ಲರೂ ದಿನಕ್ಕೆ ಒಂದು ಲೋಟ ಹಾಲು ಕುಡಿಯುವ ಅಭ್ಯಾಸ ರೂಢಿಸಿಕೊಳ್ಳಬೇಕು. ತಾಯಂದಿರು ಮಕ್ಕಳಿಗೆ ದಿನಾಲು ಒಂದು ಲೋಟ ಹಾಲು ನೀಡಬೇಕು ಎಂದರು.
(ಏಜೆನ್ಸೀಸ್)
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications