ಗಣಿಗಾರಿಕೆ ತನಿಖೆ ಸಿಬಿಐಗೆ ವಹಿಸಿದ ಆಂಧ್ರ

ಆಂಧ್ರದ ಪ್ರಮುಖ ಪ್ರತಿಪಕ್ಷಗಳಾದ ಟಿಡಿಪಿ,ಸಿಪಿಐ, ಸಿಪಿಐ(ಎಂ) ಹಾಗೂ ಲೋಕ್ ಸತ್ತಾ ಸೇರಿದಂತೆ ಆಡಳಿತಾರೂಢ ಕಾಂಗ್ರೆಸ್ ನ ಹಿರಿಯ ನಾಯಕರಾದ ವಿ ಹನುಮಂತರಾವ್ ಅವರು ರೆಡ್ಡಿ ಸೋದರರ ಗಣಿಗಾರಿಕೆ ಹಾಗೂ ಅನಂತಪುರದಲ್ಲಿ ನಡೆದಿದೆ ಎನ್ನಲಾದ ಗಣಿಗಾರಿಕೆ ಅಕ್ರಮವನ್ನು ಸರಿಪಡಿಸಬೇಕು. ಸಿಬಿಐ ತನಿಖೆಗೆ ವಹಿಸಬೇಕು ಎಂದು ಆಗ್ರಹಪಡಿಸಿದ್ದರು. ಈ ನಿಟ್ಟಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಆಂಧ್ರಪ್ರದೇಶದ ಮುಖ್ಯಮಂತ್ರಿ ರೋಶಯ್ಯ ಅವರು ಅನಂತಪುರ ಜಿಲ್ಲೆಯ ಗಣಿಗಾರಿಕೆಯಲ್ಲಿನ ಅಕ್ರಮದ ತನಿಖೆಯನ್ನು ಸಿಬಿಐಗೆ ವಹಿಸಲಾಗಿದೆ ಎಂದು ಹೇಳಿದರು.
ಈ ಮುಂಚೆ ಓಬಳಾಪುರಂ ಗಣಿಗಾರಿಕೆ ನಿಲ್ಲಿಸುವಂತೆ ಸ್ಥಳೀಯ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದರು. ಆದರೆ, ಆಗಿನ ಸಿಎಂ ವೈಎಸ್ ರಾಜಶೇಖರ ರೆಡ್ಡಿ ಅವರ ಸರ್ಕಾರ ತನಿಖೆ ನಡೆಸಿ ಎಲ್ಲವೂ ಸಕ್ರಮವಾಗಿದೆ ಎಂದು ಪ್ರಕಟಿಸಿತ್ತು.
ಸಿಬಿಐ ತನಿಖೆಗೆ ಸಿದ್ಧ: ರೆಡ್ಡಿ
ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಹೋಟೆಲ್ ನಲ್ಲಿ ಪ್ರತಿಕ್ರಿಯಿಸಿದ ಜನಾರ್ದನ ರೆಡ್ಡಿ ಅವರು ಇದು ವೈಯಕ್ತಿಕ ದ್ವೇಷದಿಂದ ಕೈಗೊಂಡ ಕ್ರಮ. ಓಬಳಾಪುರಂ ಗಣಿಗಾರಿಕೆಯಲ್ಲಿ ಯಾವುದೇ ರೀತಿಯ ಲೋಪ ದೋಷಗಳು ನಡೆದಿಲ್ಲ. ಇದರಲ್ಲಿ ಸಂಶಯವಿದ್ದರೆ ಮಾಹಿತಿ ಹಕ್ಕು ಕಾಯಿದೆಯಡಿಯಲ್ಲಿ ಹೆಚ್ಚಿನ ವಿವರಗಳನ್ನು ಪಡೆಯಲಿ. ಆಂಧ್ರಪ್ರದೇಶದಲ್ಲಿ ವೈಎಸ್ ರಾಜಶೇಖರ ರೆಡ್ಡಿ ಅವರ ಅಕಾಲಿಕ ಸಾವಿನ ಲಾಭ ಪಡೆಯಲು ಎಲ್ಲಾ ಪಕ್ಷಗಳು ಹವಣಿಸುತ್ತಿದೆ. ಸಿಬಿಐಗೆ ಒಪ್ಪಿಸಲು ಮುಂದಾಗಿರುವುದು ಕೂಡ ಈ ಹವಣಿಕೆಯ ಫಲ. ನಾವು ಸಂವಿಧಾನಕ್ಕೆ ಬದ್ಧರಾಗಿದ್ದೇವೆ. ಗಣಿಗಾರಿಕೆ ರಾಜ್ಯಕ್ಕೆ ಸೀಮಿತವಾದ ವಿಷಯವಲ್ಲ. ಕೇಂದ್ರ ಸರ್ಕಾರದ ಕಣ್ತಪ್ಪಿಸಿ ದ್ರೋಹ ಮಾಡುವುದು ಸಾಧ್ಯವೇ.
ಚಂದ್ರಬಾಬು ನಾಯ್ಡು ಒಬ್ಬ ನಿರುದ್ಯೋಗಿ ರಾಜಕಾರಣಿ, 2006 ರಲ್ಲೇ ಸಿಬಿಐ ತನಿಖೆ ಸಿದ್ಧ ಎಂದು ಸ್ಪಷ್ಟಪಡಿಸಿದ್ದೆ. ಆಂಧ್ರ ಸಿಎಂ ಅವರು ಪ್ರತಿಪಕ್ಷಗಳ ಒತ್ತಡಕ್ಕೆ ಮಣಿದು ಈ ಕ್ರಮ ಕೈಗೊಂಡಿದ್ದಾರೆ. ಕೇಂದ್ರ ತಂಡದಿಂದ ಈಗಾಗಲೇ ನಮ್ಮ ಗಣಿಗಾರಿಕೆ ಪ್ರದೇಶದ ಸರ್ವೆ ನಡೆದಿದ್ದು, ಯಾವುದೇ ಅಕ್ರಮ ನಡೆದಿಲ್ಲ ಎಂದು ವರದಿಯನ್ನು ಸಲ್ಲಿಸಲಾಗಿದೆ. ಇಷ್ಟಕ್ಕೂ ಸಿಬಿಐ ತನಿಖೆ ನಡೆದರೆ ನಾವು ಸ್ವಾಗತಿಸುತ್ತೇವೆ ಎಂದರು.
(ದಟ್ಸ್ ಕನ್ನಡ ವಾರ್ತೆ)
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications