ಮನೆ ಬಿಟ್ಟುಹೋದವಳ ಗರ್ವಭಂಗ

ಭಾರತೀಯ ಕುಟುಂಬ ವ್ಯವಸ್ಥೆಯ ಮೇಲೆ ದೂರಗಾಮಿ ಪರಿಣಾಮ ಬೀರುವಂತಹ ಒಂದು ಐತಿಹಾಸಿಕ ತೀರ್ಪನ್ನು ಭಾರತ ಸರ್ವೋಚ್ಚ ನ್ಯಾಯಾಲಯ ಬುಧವಾರ ಹೊರಹಾಕಿದೆ. ಅದರಂತೆ, ಮನೆಗೆ ವಾಪಸ್ಸು ಬಾರಮ್ಮ ಬಾರಮ್ಮ ಎಂದು ಪರಿಪರಿ ಬೇಡಿಕೊಂಡರೂ ಮೂತಿ ತಿರುವಿಕೊಂಡು ಇನ್ನೊಂದು ತಿರುವಿನಲ್ಲಿ ಹಾದುಹೋಗುವ ಮಹಿಳೆಗೆ ಅವಳ ಗಂಡ ಕ್ಯಾರೇ ಅನ್ನಬಾರದು. ಅವಳ ಜೀವನ ನಿರ್ವಹಣೆಗೆ ಮೂರು ಕಾಸು ಕೊಡಬಾರದು.
ಪೂನಂ ಮತ್ತು ಮಹೇಂದ್ರಕುಮಾರ್ ಎಂಬ ದಂಪತಿಗಳ ಕುಟುಂಬ ವ್ಯಾಜ್ಯದ ಬಗೆಗೆ ನ್ಯಾಯ ನಿರ್ಣಯ ಮಾಡಿದ ಪಂಜಾಬ್ ಉಚ್ಚ ನ್ಯಾಯಾಲಯ ಅವಳಾಗೇ ಬಿಟ್ಟು ಹೋಗಿರುವುದರಿಂದ ಅವಳಿಗೆ ಪರಿಹಾರ ಕೊಡಕೂಡದು ಎಂದು ತೀರ್ಪು ನೀಡಿತ್ತು. ಆ ತೀರ್ಪನ್ನು ಸರ್ವೂಚ್ಚ ನ್ಯಾಯಾಲಯ (ನ್ಯಾಯಮೂರ್ತಿ ವಿ ಎಸ್ ಸಿರ್ ಪುರ್ ಕರ್)ಎತ್ತಿ ಹಿಡಿದು ಬುಧವಾರ ತನ್ನ ತೀರ್ಮಾನವನ್ನು ಪ್ರಕಟಿಸಿತು.
ಹೇಳಲೇಬೇಕಾದ ಮತ್ತು ಹೇಳಲೇಬಾರದ ಕಾರಣಗಳಿಂದಾಗಿ ಮಹಿಳೆಯರು ಗಂಡನ ಮನೆ ಬಿಟ್ಟು ಎಲ್ಲಿಗೋ ಹೋಗುವುದುಂಟು. ಹೋದ ಮೇಲೆ, ವರದಕ್ಷಿಣೆ ಕಿರುಕುಳ ಕೊಡುತ್ತಾರೆ, ಸೀಮೆ ಎಣ್ಣೆ ಹಾಕಿ ಸುಡಲು ಬಂದರು, ಅವನು ಗಂಡಸೇ ಅಲ್ಲ ಎಂಬಿತ್ಯಾದಿ ಆರೋಪಗಳನ್ನು ಗಂಡ ಮತ್ತು ಅವನ ಮನೆಯವರ ಮೇಲೆ ಮಹಿಳೆಯರು ಮಾಡುವುದುಂಟು. ಇಂಥ ಕೇಸುಗಳು ದೇಶದಲ್ಲಿ, ನಮ್ಮದೇ ಕರ್ನಾಟಕದಲ್ಲಿ ಖಂಡಾಪಟ್ಟೆ ಇವೆ.
ನಿನ್ನೆ ನ್ಯಾಯಾಲಯ ನೀಡಿರುವ ಈ ತೀರ್ಪಿನ ಬೆಳಕಲ್ಲಿ ನಮ್ಮ ವಕೀಲರು ಮತ್ತು ಹಿರಿಯ ಹಾಗೂ ಕಿರಿಯ ನ್ಯಾಯಾಲಯದ ಸನ್ಮಾನ್ಯ ನ್ಯಾಯಮೂರ್ತಿಗಳು ಕುಟುಂಬ ವ್ಯಾಜ್ಯಗಳನ್ನು ಸೂಕ್ತವಾಗಿ ಪರಿಹರಿಸುತ್ತಾರೆ ಎಂಬ ಆಶಾವಾದವನ್ನು ಕನ್ನಡನಾಡಿಗರು ಇಟ್ಟುಕೊಳ್ಳಬಹುದು. ಅಂದಹಾಗೆ, ಇವತ್ತು ವಿಶ್ವ ಪುರುಷರ ದಿನ. ಬಡಪಾಯಿ ಗಂಡನಿಗೆ ಕೋರ್ಟು ನೀಡಿದ ತೀರ್ಪು ಉಡುಗೊರೆ ಎಂದೇ ಭಾವಿಸುವುದಕ್ಕೆ ಯಾರ ಅಪ್ಪಣೆಯೂ ಬೇಕಿಲ್ಲ.
(ದಟ್ಸ್ ಕನ್ನಡ ವಾರ್ತೆ)
-
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ












Click it and Unblock the Notifications