ಸಹಕಾರಿ ಕ್ಷೇತ್ರಕ್ಕೆ ಕಾಯಕಲ್ಪ, ಖರ್ಗೆ

ರಾಜ್ಯ ಸಹಕಾರಿ ವಸತಿ ಮಹಾಮಂಡಲವು ನಗರದ ಬಸವನಗುಡಿಯಲ್ಲಿ ನೂತನವಾಗಿ ನಿರ್ಮಿಸಿರುವ ಸಹಕಾರಿ ವಸತಿ ಭವನವನ್ನು ಬುಧವಾರ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಸಹಕಾರಿ ಕ್ಷೇತ್ರದಲ್ಲಿ ಸರಕಾರದ ಹಸ್ತಕ್ಷೇಪಕ್ಕೆ ಕಡಿವಾಣ ಹಾಕುವ ದೃಷ್ಟಿಯಿಂದ ಕೇಂದ್ರ ಸರಕಾರ ಶೀಘ್ರದಲ್ಲಿಯೇ ಕಾನೂನಿಗೆ ತಿದ್ದುಪಡಿ ತರಲಿದೆ ಎಂದು ಖರ್ಗೆ ತಿಳಿಸಿದರು.
ಸಹಕಾರಿ ವಸತಿ ಮಹಾಮಂಡಲವು ಸರಕಾರ ಸೇರಿದಂತೆ ಯಾವುದೇ ಸಂಸ್ಥೆಯ ನಿಯಂತ್ರಣಕ್ಕೆ ಒಳಗಾಗದೇ ಸ್ವತಂತ್ರವಾಗಿ ಕಾರ್ಯ ರ್ವಹಿಸುವಂತೆ ಮಾಡುವ ಸಲುವಾಗಿ ಕಾನೂನಿಗೆ ತಿದ್ದುಪಡಿ ತರಲಾಗುತ್ತಿದೆ. ಇದರಿಂದ ಸಹಕಾರಿ ಸಂಸ್ಥೆಗಳ ಕಾರ್ಯ ನಿರ್ವಹಣೆ ಸುಗಮವಾಗಲಿದೆ ಎಂದು ಹೇಳಿದರು.
(ದಟ್ಸ್ ಕನ್ನಡ ವಾರ್ತೆ)












Click it and Unblock the Notifications