Get Updates
Get notified of breaking news, exclusive insights, and must-see stories!

ಹಿರಿಯ ಕಾಂಗ್ರೆಸ್ಸಿಗ ಬಿ ಶಂಕರಾನಂದ ನಿಧನ

Former Union minister Shankaranand passes away
ಬೆಳಗಾವಿ, ನ. 20 : ಕಳೆದ ಹಲವಾರು ತಿಂಗಳಿನಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಕೇಂದ್ರದ ಮಾಜಿ ಸಚಿವ ಬಿ ಶಂಕರಾನಂದ ಶುಕ್ರವಾರ ಬೆಳಕಿನ ಜಾವ 2 ಗಂಟೆಗೆ ನಗರದ ಕೆಎಲ್ ಇ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾದರು. ಅವರಿಗೆ 84 ವರ್ಷ ವಯಸ್ಸಾಗಿತ್ತು. ಶಂಕರಾನಂದ ನಿಧನಕ್ಕೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಶೋಕ ವ್ಯಕ್ತಪಡಿಸಿದ್ದು, ಕುಟುಂಬ ಸದಸ್ಯರಿಗೆ ದುಃಖ ಭರಿಸುವ ಶಕ್ತಿ ಆ ದೇವರು ನೀಡಲಿ ಎಂದು ಸಾಂತ್ವನ ಹೇಳಿದ್ದಾರೆ.

ಚಿಕ್ಕೋಡಿ ಲೋಕಸಭೆ ಕ್ಷೇತ್ರದಿಂದ ಸತತ ಏಳು ಬಾರಿ ಸಂಸದರಾಗಿ ಆಯ್ಕೆಯಾಗಿದ್ದ ಶಂಕರಾನಂದ, ಮಾಜಿ ಪ್ರಧಾನಮಂತ್ರಿಗಳಾದ ಇಂದಿರಾ ಗಾಂಧಿ, ರಾಜೀವ್ ಗಾಂಧಿ ಮತ್ತು ಪಿ ವಿ ನರಸಿಂಹರಾವ್ ಅವರ ಮಂತ್ರಿ ಮಂಡಲದಲ್ಲಿ ಸಚಿವರಾಗಿ ಕಾರ್ಯನಿರ್ವಹಿಸಿದ ಹೆಗ್ಗಳಿಕೆ ಹೊಂದಿದ್ದರು. ಜೊತೆಗೆ ಗಾಂಧಿ ಕುಟುಂಬದ ಕಟ್ಟಾ ಅನುಯಾಯಿಯಾಗಿದ್ದ ಅವರು, ಇಂದಿರಾಗಾಂಧಿ ಅಚ್ಚುಮೆಚ್ಚಿನವರಾಗಿದ್ದರು. ಸತತ ಏಳು ಬಾರಿ ಚಿಕ್ಕೋಡಿ ಕ್ಷೇತ್ರದಿಂದ ಆಯ್ಕೆಯಾಗಿದ್ದ ಶಂಕರಾನಂದ ಎಂಟನೇ ಬಾರಿಗೆ ಜೆಡಿಎಸ್ ನ ರತ್ನಮಾಲ ಸವಣೂರ ವಿರುದ್ಧ ಸೋಲುವ ಮೂಲಕ ರಾಜಕೀಯ ಹಿನ್ನೆಡೆ ಅನುಭವಿಸಿದರು. ಅಲ್ಲಿಂದ ಅವರು ಬಹುತೇಕವಾಗಿ ರಾಜಕೀಯವಾಗಿ ಮೂಲೆಗುಂಪಾಗಬೇಕಾಯಿತು.

ದೇಶ ರಾಜಕೀಯದಲ್ಲಿ ಅಲ್ಲೋಲಕಲ್ಲೋಲ ಸೃಷ್ಟಿ ಮಾಡಿದ್ದ ಬೊಫೋರ್ಸ್ ಫಿರಂಗಿ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗಾಗಿ ರಚಿಸಲಾಗಿದ್ದ ಸಂಸದೀಯ ಸಮಿತಿಗೆಮುಖ್ಯಸ್ಥರಾಗಿ ಶಂಕರಾನಂದ ಕಾರ್ಯನಿರ್ವಹಿಸಿದ್ದು ಅವರು ರಾಜಕೀಯ ಜೀವನದ ಉತ್ತುಂಗದ ದಿನಗಳು. ಶಂಕರಾನಂದ ಅವರ ಸ್ವಗ್ರಾಮ ಕಣಗಲಿಯಲ್ಲಿ ಶನಿವಾರ ಬೆಳಗ್ಗೆ 11 ಗಂಟೆಗೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

(ದಟ್ಸ್ ಕನ್ನಡ ವಾರ್ತೆ)

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+