ಹಾವೇರಿ ಜಿಲ್ಲೆ ನೆರೆಪರಿಹಾರ ಪಕ್ಷಿನೋಟ

ಹಾವೇರಿಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಶುಕ್ರವಾರ ಜರುಗಿದ ಜಿಲ್ಲೆಯಲ್ಲಿನ ಪ್ರಕೃತಿ ವಿಕೋಪ ಹಾಗೂ ಪರಿಹಾರ ನೀಡಿಕೆ ಕುರಿತ ಪ್ರಗತಿಯನ್ನು ಪರಿಶೀಲಿಸಿ ಅವರು ಮಾತನಾಡುತ್ತಿದ್ದರು. ಪ್ರಕೃತಿ ವಿಕೋಪ ಸಂದರ್ಭದಲ್ಲಿ ಹಾನಿಗೊಳಗಾದ ಸಾರ್ವಜನಿಕ ಆಸ್ತಿಪಾಸ್ತಿಗಳ ಪರಿಶೀಲನೆ, ದುರಸ್ತಿ ಕಾಮಗಾರಿಗಳು ಗುಣಮಟ್ಟದಿಂದ ಕೂಡಿರುವ ಹಾಗೂ ನಿಗದಿತ ಸಮಯದಲ್ಲಿ ಪೂರ್ತಿಗೊಳಿಸುವ ಪ್ರಕ್ರಿಯೆಯನ್ನು ಆಗಾಗ ಪರಿಶೀಲಿಸಬೇಕು ಎಂದು ಸಚಿವರು ತಹಶೀಲ್ದಾರರುಗಳಿಗೆ ಸೂಚಿಸಿದರು.
ಪರಿಹಾರ ನೀಡುವಿಕೆ ರಾಜ್ಯಸರ್ಕಾರದ ಜವಾಬ್ದಾರಿಯಿದ್ದು,ಅದರ ವಿತರಣೆ ಸಂದರ್ಭದಲ್ಲಿ ಅರೆಮನಸ್ಸಿನಿಂದ ಕಾರ್ಯನಿರ್ವಹಿಸದೆ, ಪರಿಹಾರ ನೀಡುವಿಕೆ ಉದ್ದೇಶ ಈಡೇರಿಸಿ ಸಂತ್ರಸ್ತರಿಗೆ ಪರಿಹಾರ ಮುಟ್ಟಿದೆ ಎನ್ನುವ ಭಾವನೆ ಇರುವಂತೆ ನೋಡಿಕೊಳ್ಳಿ. ಲೋಕೋಪಯೋಗಿ ಹಾಗೂ ಜಿ.ಪಂ.ಇಂಜನಿಯರಿಂಗ್ ಇಲಾಖೆಗಳು ಪರಿಹಾರ ಕಾಮಗಾರಿಗಳಲ್ಲಿ ಕುಡಿಯುವ ನೀರು, ರಸ್ತೆ ಸಂಪರ್ಕ ಮುಂತಾದವುಗಳಿಗೆ ಪ್ರಥಮ ಆದ್ಯತೆ ನೀಡಿ ಕಾಮಗಾರಿಗಳನ್ನು ಬೇಗನೆ ಮುಗಿಸಬೇಕೆಂದು ಕರುಣಾಕರ ರೆಡ್ಡಿ ಸೂಚನೆ ಕೊಟ್ಟರು.
ಪ್ರಕೃತಿ ವಿಕೋಪದಡಿ ಪ್ರಸಕ್ತ ಸಾಲಿನಲ್ಲಿ ಜಿಲ್ಲೆಗೆ 46 ಕೋಟಿ ರೂ.ಅನುದಾನ ಈವರೆಗೆ ನೀಡಲಾಗಿದೆ. ಇದರಲ್ಲಿ 43 ಕೋಟಿ ರೂ. ವೆಚ್ಚವಾಗಿದ್ದು,ಉಳಿದ 2.98 ಕೋಟಿ ರೂ.ಗಳಲ್ಲಿ ಪರಿಹಾರ ಕಾಮಗಾರಿಗಳಿಗೆ ಇನ್ನೂ 2.46 ಕೋಟಿ ರೂ.ಬಿಡುಗಡೆ ಮಾಡಬೇಕಿದೆ ಎಂದು ಸಭೆಯಲ್ಲಿ ತಿಳಿಸಲಾಯಿತು.
ಅತೀವೃಷ್ಟಿ ಪರಿಹಾರ ಕಾರ್ಯಗಳಿಗೆ ತಾಲೂಕಾವಾರು ಬಿಡುಗಡೆಮಾಡಿದ ಅನುದಾನ ಇಂತಿದೆ. ಹಾವೇರಿ 6.75 ಕೋಟಿ, ರಾಣೇಬೆನ್ನೂರು 7 ಕೋಟಿ, ಬ್ಯಾಡಗಿ 3.35 ಕೋಟಿ, ಹಿರೇಕೆರೂರು5.65 ಕೋಟಿ, ಸವಣೂರು 4.69 ಕೋಟಿ, ಶಿಗ್ಗಾಂವ 4.87 ಕೋಟಿ ಹಾಗೂ ಹಾನಗಲ್ಲ ತಾಲೂಕಿಗೆ 2.63 ಕೋಟಿ ರೂ. ಹಂಚಿಕೆ ಮಾಡಲಾಗಿದೆ.
ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾಧಿಕಾರಿ ಎಚ್.ಜಿ.ಶ್ರೀವರ, ಶಾಸಕರುಗಳಾದ ನೆಹರೂ ಓಲೇಕಾರ, ಜಿ.ಶಿವಣ್ಣ, ಕಂದಾಯ ಇಲಾಖೆ ಕಾರ್ಯದರ್ಶಿಗಳಾದ ಜಿ.ನಾರಾಯಣಸ್ವಾಮಿ, ಜಿ.ಪಂ.ಅಧ್ಯಕ್ಷೆ ಶಾರದಾ ಹಾದಿಮನಿ, ಜಿಪಂ ಮುಖ್ಯಕಾರ್ಯನಿರ್ವಾಹಣಾಧಿಕಾರಿ ಎಂ.ಎಸ್.ಚೆನ್ನಪ್ಪಗೌಡರ ಉಪಸ್ಥಿತರಿದ್ದರು.
(ದಟ್ಸ್ ಕನ್ನಡ ವಾರ್ತೆ)
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications