ಹಾವೇರಿ ಜಿಲ್ಲೆ ನೆರೆಪರಿಹಾರ ಪಕ್ಷಿನೋಟ

ಹಾವೇರಿಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಶುಕ್ರವಾರ ಜರುಗಿದ ಜಿಲ್ಲೆಯಲ್ಲಿನ ಪ್ರಕೃತಿ ವಿಕೋಪ ಹಾಗೂ ಪರಿಹಾರ ನೀಡಿಕೆ ಕುರಿತ ಪ್ರಗತಿಯನ್ನು ಪರಿಶೀಲಿಸಿ ಅವರು ಮಾತನಾಡುತ್ತಿದ್ದರು. ಪ್ರಕೃತಿ ವಿಕೋಪ ಸಂದರ್ಭದಲ್ಲಿ ಹಾನಿಗೊಳಗಾದ ಸಾರ್ವಜನಿಕ ಆಸ್ತಿಪಾಸ್ತಿಗಳ ಪರಿಶೀಲನೆ, ದುರಸ್ತಿ ಕಾಮಗಾರಿಗಳು ಗುಣಮಟ್ಟದಿಂದ ಕೂಡಿರುವ ಹಾಗೂ ನಿಗದಿತ ಸಮಯದಲ್ಲಿ ಪೂರ್ತಿಗೊಳಿಸುವ ಪ್ರಕ್ರಿಯೆಯನ್ನು ಆಗಾಗ ಪರಿಶೀಲಿಸಬೇಕು ಎಂದು ಸಚಿವರು ತಹಶೀಲ್ದಾರರುಗಳಿಗೆ ಸೂಚಿಸಿದರು.
ಪರಿಹಾರ ನೀಡುವಿಕೆ ರಾಜ್ಯಸರ್ಕಾರದ ಜವಾಬ್ದಾರಿಯಿದ್ದು,ಅದರ ವಿತರಣೆ ಸಂದರ್ಭದಲ್ಲಿ ಅರೆಮನಸ್ಸಿನಿಂದ ಕಾರ್ಯನಿರ್ವಹಿಸದೆ, ಪರಿಹಾರ ನೀಡುವಿಕೆ ಉದ್ದೇಶ ಈಡೇರಿಸಿ ಸಂತ್ರಸ್ತರಿಗೆ ಪರಿಹಾರ ಮುಟ್ಟಿದೆ ಎನ್ನುವ ಭಾವನೆ ಇರುವಂತೆ ನೋಡಿಕೊಳ್ಳಿ. ಲೋಕೋಪಯೋಗಿ ಹಾಗೂ ಜಿ.ಪಂ.ಇಂಜನಿಯರಿಂಗ್ ಇಲಾಖೆಗಳು ಪರಿಹಾರ ಕಾಮಗಾರಿಗಳಲ್ಲಿ ಕುಡಿಯುವ ನೀರು, ರಸ್ತೆ ಸಂಪರ್ಕ ಮುಂತಾದವುಗಳಿಗೆ ಪ್ರಥಮ ಆದ್ಯತೆ ನೀಡಿ ಕಾಮಗಾರಿಗಳನ್ನು ಬೇಗನೆ ಮುಗಿಸಬೇಕೆಂದು ಕರುಣಾಕರ ರೆಡ್ಡಿ ಸೂಚನೆ ಕೊಟ್ಟರು.
ಪ್ರಕೃತಿ ವಿಕೋಪದಡಿ ಪ್ರಸಕ್ತ ಸಾಲಿನಲ್ಲಿ ಜಿಲ್ಲೆಗೆ 46 ಕೋಟಿ ರೂ.ಅನುದಾನ ಈವರೆಗೆ ನೀಡಲಾಗಿದೆ. ಇದರಲ್ಲಿ 43 ಕೋಟಿ ರೂ. ವೆಚ್ಚವಾಗಿದ್ದು,ಉಳಿದ 2.98 ಕೋಟಿ ರೂ.ಗಳಲ್ಲಿ ಪರಿಹಾರ ಕಾಮಗಾರಿಗಳಿಗೆ ಇನ್ನೂ 2.46 ಕೋಟಿ ರೂ.ಬಿಡುಗಡೆ ಮಾಡಬೇಕಿದೆ ಎಂದು ಸಭೆಯಲ್ಲಿ ತಿಳಿಸಲಾಯಿತು.
ಅತೀವೃಷ್ಟಿ ಪರಿಹಾರ ಕಾರ್ಯಗಳಿಗೆ ತಾಲೂಕಾವಾರು ಬಿಡುಗಡೆಮಾಡಿದ ಅನುದಾನ ಇಂತಿದೆ. ಹಾವೇರಿ 6.75 ಕೋಟಿ, ರಾಣೇಬೆನ್ನೂರು 7 ಕೋಟಿ, ಬ್ಯಾಡಗಿ 3.35 ಕೋಟಿ, ಹಿರೇಕೆರೂರು5.65 ಕೋಟಿ, ಸವಣೂರು 4.69 ಕೋಟಿ, ಶಿಗ್ಗಾಂವ 4.87 ಕೋಟಿ ಹಾಗೂ ಹಾನಗಲ್ಲ ತಾಲೂಕಿಗೆ 2.63 ಕೋಟಿ ರೂ. ಹಂಚಿಕೆ ಮಾಡಲಾಗಿದೆ.
ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾಧಿಕಾರಿ ಎಚ್.ಜಿ.ಶ್ರೀವರ, ಶಾಸಕರುಗಳಾದ ನೆಹರೂ ಓಲೇಕಾರ, ಜಿ.ಶಿವಣ್ಣ, ಕಂದಾಯ ಇಲಾಖೆ ಕಾರ್ಯದರ್ಶಿಗಳಾದ ಜಿ.ನಾರಾಯಣಸ್ವಾಮಿ, ಜಿ.ಪಂ.ಅಧ್ಯಕ್ಷೆ ಶಾರದಾ ಹಾದಿಮನಿ, ಜಿಪಂ ಮುಖ್ಯಕಾರ್ಯನಿರ್ವಾಹಣಾಧಿಕಾರಿ ಎಂ.ಎಸ್.ಚೆನ್ನಪ್ಪಗೌಡರ ಉಪಸ್ಥಿತರಿದ್ದರು.
(ದಟ್ಸ್ ಕನ್ನಡ ವಾರ್ತೆ)
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications