ಐದು ಪುತ್ಥಳಿಗಳಿಗೆ ಶೆಟ್ಟರ್ ಮಾಲಾರ್ಪಣೆ

ಸಚಿವರಾಗಿ ಅಧಿಕಾರವಹಿಸಿಕೊಂಡ ನಂತರ ಮಹಾನಗರಕ್ಕೆ ಶುಕ್ರವಾರ ಬಂದಿದ್ದ ಸಚಿವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಗ್ರಾಮೀಣ ಅಭಿವೃದ್ಧಿಯಂತಹ ಮಹತ್ವದ ಇಲಾಖೆಯ ಹೊಣೆಯಿಂದಾಗಿ ಗುರುತರ ಜವಾಬ್ದಾರಿ ತಮ್ಮ ಮೇಲಿರುವುದಾಗಿ ತಿಳಿಸಿದ ಸಚಿವರು, ಗ್ರಾಮೀಣ ಪ್ರದೇಶಗಳಲ್ಲಿ ಮೂಲಭೂತ ಸೌಕರ್ಯ ಒದಗಿಸಲು ಹಾಗೂ ಉದ್ಯೋಗ ಮತ್ತು ಸರ್ಕಾರದ ವಿವಿಧ ಯೋಜನೆಗಳನ್ನು ಗ್ರಾಮಗಳಿಗೆ ಕೊಂಡೊಯ್ಯುವ ಮೂಲಕ ಹಳ್ಳಿಗರ ಜೀವನ ಮಟ್ಟ ಸುಧಾರಿಸುವುದು ತಮ್ಮ ಆದ್ಯತೆಯಾಗಿದೆ ಎಂದು ಹೇಳಿದರು.
ಗ್ರಾಮೀಣ ಅಭಿವೃದ್ಧಿ ಕಾರ್ಯಕ್ರಮಗಳ ಅನುಷ್ಠಾನ ಕುರಿತಂತೆ ನಿನ್ನೆಯಷ್ಟೇ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಚರ್ಚಿಸಲಾಗಿದ್ದು, ಪ್ರತಿಯೊಂದು ಯೋಜನೆಯ ಅನುಷ್ಠಾನದ ಬಗ್ಗೆ ವೈಯಕ್ತಿಕ ಆಸಕ್ತಿ ವಹಿಸಿ, ಅವುಗಳನ್ನು ಉದ್ದೇಶಿತ ಜನಸಮುದಾಯಕ್ಕೆ ತಲುಪಿಸಲು ಕ್ರಮಕೈಕೊಳ್ಳುವುದಾಗಿ ಸಚಿವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ರಾಜ್ಯದಲ್ಲಿ ನೆರೆ ಪರಿಹಾರ ಕಾರ್ಯಗಳು ಹಿಂದೆಂದಿಗಿಂತಲೂ ಚುರುಕಾಗಿ ಸಾಗಿವೆ. ಪರಿಹಾರ ವಿತರಣೆಯಲ್ಲಿ ಹಿಂದೆ ಇಂತಹ ತೀವ್ರತೆ ಇರಲಿಲ್ಲ ಎಂದು ಅವರು ನುಡಿದರು. ಗ್ರಾಮಗಳ ಸ್ಥಳಾಂತರದಂತಹ ಬಹುದಿನಗಳ ಬೇಡಿಕೆ ಈಡೇರಿಸಲು ಸರ್ಕಾರ ಸನ್ನದ್ಧವಾಗಿರುವುದನ್ನು ಕೂಡ ಅವರು ಪ್ರಸ್ತಾಪಿಸಿದರು. ಅನೇಕ ಸಂಘ ಸಂಸ್ಥೆ ಹಾಗೂ ಮಠ ಮಾನ್ಯಗಳು ಗ್ರಾಮಗಳ ನವ ನಿರ್ಮಾಣಕ್ಕೆ ಕೈಜೋಡಿಸಿರುವುದರಿಂದ ಮನೆ ಕಟ್ಟುವ ಕೆಲಸಕ್ಕೆ ಈಗಾಗಲೇ ಎಲ್ಲೆಡೆ ಚಾಲನೆ ದೊರೆತಿದೆ ಎಂದರು.
ನೆರೆ ಸಂತ್ರಸ್ತ ಪ್ರದೇಶಗಳಿಗೆ ತಾವು ಭೇಟಿ ನೀಡಿ ಪರಿಶೀಲನೆ ನಡೆಸುವುದಲ್ಲದೇ ಗ್ರಾಮೀಣ ಅಭಿವೃದ್ಧಿ,ಗ್ರಾಮ ಸಡಕ್ ಹಾಗೂ ಉದ್ಯೋಗ ಖಾತ್ರಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಕ್ರಮಕೈಗೊಳ್ಳುವದಾಗಿ ಶೆಟ್ಟರ್ ಭರವಸೆ ನೀಡಿದರು. ತಮಗೆ ಈ ಸಚಿವ ಸ್ಥಾನ ತೃಪ್ತಿ ತಂದಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದ ಸಚಿವರು,ಇದರಿಂದಾಗಿ ಈ ಭಾಗದ ಜನರ ಕನಸು ಸಾಕಾರಗೊಂಡಿರುವುದಾಗಿ ತಿಳಿಸಿದರು.
ಸಚಿವರಾದ ನಂತರ ಪ್ರಥಮ ಬಾರಿಗೆ ಶುಕ್ರವಾರ ಬೆಳಿಗ್ಗೆ ಹುಬ್ಬಳ್ಳಿಗೆ ಆಗಮಿಸಿದ ಜಗದೀಶ ಶೆಟ್ಟರ ಅವರಿಗೆ ಅಭಿಮಾನಿಗಳಿಂದ ವಿಮಾನ ನಿಲ್ದಾಣದಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಸಚಿವರು ನಗರದಲ್ಲಿರುವ ಬಸವೇಶ್ವರ ಮೂರ್ತಿ, ಕಿತ್ತೂರ ಚೆನ್ನಮ್ಮ ಮೂರ್ತಿ, ಡಾ|| ಬಿ. ಆರ್.ಅಂಬೇಡ್ಕರ್ ಮೂರ್ತಿ, ಸದಾಶಿವ ಶೆಟ್ಟರ್ ಅವರ ಪುತ್ಥಳಿ ಹಾಗೂ ಕೇಶ್ವಾಪುರದಲ್ಲಿರುವ ಅಶ್ವಾರೂಢ ಜಗಜ್ಯೋತಿ ಬಸವೇಶ್ವರ ಮೂರ್ತಿಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು. ನಂತರ ನಾಗಶೆಟ್ಟಿಕೊಪ್ಪದ ಮಾರುತಿ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದರು.
(ದಟ್ಸ್ ಕನ್ನಡ ವಾರ್ತೆ)
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications