ಪುಣ್ಯಕ್ಷೇತ್ರಗಳ ಅಭಿವೃದ್ಧಿಗೆ ಹಣಕೊರತೆಯಿಲ್ಲ

ಮಠ ಮಂದಿರಗಳು, ಪುಣ್ಯ ಕ್ಷೇತ್ರಗಳ ಅಭಿವೃದ್ಧಿಗೆ ನಮ್ಮಲ್ಲಿ ಹಣಕಾಸಿನ ಕೊರತೆ ಇಲ್ಲ. ಅನ್ನ ದಾಸೋಹಕ್ಕೆ ಹೆಸರಾದ ಶ್ರೀಮಠದ ಅಭಿವೃದ್ಧಿಗಾಗಿ ಅಗತ್ಯವಾದ ನೆರವು ನೀಡುವುದಾಗಿ ಅವರು ಹೇಳಿದರು. ಗುರು ಚನ್ನವೀರ ಶ್ರೀಯವರು ಶಾಲೆಗಳನ್ನು ತೆರೆದು ಈ ಭಾಗದಲ್ಲಿ ಶಿಕ್ಷಣದ ಪ್ರಗತಿಗೆ ಶ್ರಮಿಸಿದ್ದಾರೆ. ಇಂಥ ಕೈಂಕರ್ಯ ಶ್ರೀ ಗುರುಪಾದಲಿಂಗ ಶಿವಯೋಗಿಗಳ ಮಾರ್ಗದರ್ಶನದಲ್ಲಿ ನಡೆಯುತ್ತಿರುವುದು ಸಂತಸ ತಂದಿದೆ ಎಂದ ಯಡ್ಡಿ, ನಾಡಿನ ಅಭಿವೃದ್ಧಿಗಾಗಿ ಶಕ್ತಿ ದಯಪಾಲಿಸುವಂತೆ ಶ್ರೀಗಳ ಆಶೀರ್ವಾದ ಕೇಳಿದರು.
ಇದಕ್ಕೂ ಮುನ್ನ ಜೇವರ್ಗಿ ತಾಲೂಕಿನ ಕೂಡಿ ದರ್ಗಾದಲ್ಲಿ ನೆರೆ ಸಂತ್ರಸ್ತರಿಗಾಗಿ ಪುನರ್ವಸತಿ ನಿರ್ಮಾಣಕ್ಕಾಗಿ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಮುಖ್ಯಮಂತ್ರಿಯವರು, ಜೇವರ್ಗಿಯ ಮಹಾಲಕ್ಷ್ಮಿ ದೇವಾಲಯದ ಅಭಿವೃದ್ಧಿಗೆ 50 ಲಕ್ಷ ರೂ. ನೆರವು ನೀಡುವುದಾಗಿ ಘೋಷಿಸಿದರು.
ಯಡಿಯೂರು ತೊಂಟದಾರ್ಯ ಸಂಸ್ಥಾನಮಠದ ಶ್ರೀ ಜಗದ್ಗುರು ತೋಂಟದ ಸಿದ್ಧಲಿಂಗ ಮಹಾಸ್ವಾಮಿಗಳು ಕಾರ್ಯಕ್ರಮದ ಸಾನಿಧ್ಯ ವಹಿಸಿದ್ದರು. ಶಿವಯೋಗಿ ಆಶ್ರಮದ ಶ್ರೀ ರೇವಣಸಿದ್ದ ಮಹಾಸ್ವಾಮಿಗಳು, ಹಾರಕೂಡ ಸಂಸ್ಥಾನದ ಶ್ರೀ ಚನ್ನವೀರ ಶಿವಾಚಾರ್ಯರು, ಸುಲಫಲ ಮಠದ ಶ್ರೀ ಮಹಾಂತ ಶಿವಾಚಾರ್ಯರು, ಚವದಾಪೂರಿ ಹಿರೇಮಠದ ಶ್ರೀ ರಾಜಶೇಖರ ಶಿವಾಚಾರ್ಯರು, ಸಚಿವರಾದ ಲಕ್ಷ್ಮಣ ಸವದಿ, ರೇವುನಾಯಕ್ ಬೆಳಮಗಿ, ಡಾ|| ನಂಜುಂಡಪ್ಪ ವರದಿ ಅನುಷ್ಠಾನ ಸಮಿತಿ ಅಧ್ಯಕ್ಷ ಶಶೀಲ್ ನಮೋಶಿ, ಹೆಚ್ಕೆಡಿಬಿ ಅಧ್ಯಕ್ಷ ಅಮರನಾಥ್ ಪಾಟೀಲ್, ಎಂಎಸ್ಐಎಲ್ ಅಧ್ಯಕ್ಷ ಡಾ|| ವಿಕ್ರಂ ಪಾಟೀಲ್, ಶಾಸಕ ದೊಡ್ಡಪ್ಪಗೌಡ ಪಾಟೀಲ್ ನರಿಬೋಳ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.
(ದಟ್ಸ್ ಕನ್ನಡ ವಾರ್ತೆ)
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications