ಉಗ್ರ ಕಸಬ್ ನನ್ನು ಗಲ್ಲಿಗೇರಿಸಿ : ಕವಿತಾ

ನವೆಂಬರ್ 26ಕ್ಕೆ ಮುಂಬೈ ಭಯೋತ್ಪಾದನೆಗೆ ಒಂದು ವರ್ಷ ಪೂರೈಸಲಿದೆ. ಪಾಕಿಸ್ತಾನ ಮೂಲದ ಒಂಬತ್ತು ಉಗ್ರರು ಬೋಟ್ ಮೂಲಕ ಮುಂಬೈ ತಲುಪಿ ತಾಜ್ ಹೋಟೆಲ್ ಸೇರಿ ಮೂರು ಪ್ರಮುಖ ಸ್ಥಳಗಳನ್ನು ಒತ್ತೆಯಿರಿಸಿಕೊಂಡಿದ್ದರು. ಈ ಸಂದರ್ಭದಲ್ಲಿ ಉಗ್ರರೊಂದಿಗೆ ನಡೆದ ಗುಂಡಿನ ದಾಳಿಯಲ್ಲಿ ಮುಂಬೈ ಭಯೋತ್ಪಾದನೆ ನಿಗ್ರಹ ಪಡೆಯ ಮುಖ್ಯಸ್ಥ ಐಎಎಸ್ ಅಧಿಕಾರಿ ಹೇಮಂತ್ ಕರ್ಕರೆ, ವಿಜಯ್ ಸಲಸ್ಕರ್, ಸಂದೀಪ್ ಉನ್ನಿಕೃಷ್ಣನ್, ಅಶೋಕ್ ಕಾಮ್ಟೆ ಸೇರಿದಂತೆ ಭಾರತದ 170ಕ್ಕೂ ಮಂದಿ ಸಾವನ್ನಪ್ಪಿದ್ದರು. 26 ನವೆಂಬರ್ 2008 ಭಾರತದ ಇತಿಹಾಸದಲ್ಲಿ ಕರಾಳ ದಿನವಾಗಿ ದಾಖಲಾಯಿತು. ಮೂರು ದಿನ ನಡೆದ ಪ್ರಹಸನಕ್ಕೆ ಭಾರತ ಭಾರಿ ಬೆಲೆಯನ್ನೇ ತೆರಬೇಕಾಯಿತು. ಈ ಮೂರು ದಿನದಲ್ಲಿ ಸುಮಾರು 5,000 ಕೋಟಿ ರುಪಾಯಿಗಳ ನಷ್ಟವನ್ನು ಭಾರತ ಅನುಭವಿಸಿತು.
ಅಜ್ಮಲ್ ಅಮೀರ್ ಕಸಬ್ ಸಿಕ್ಕಿಬಿದ್ದಿರುವ ಏಕೈಕ ಉಗ್ರನ ವಿಚಾರಣೆ ನಡೆಸಿದ ಭಾರತ, ಈ ಕೃತ್ಯ ಪಾಕಿಸ್ತಾನ ಸರಕಾರದ ಕೃಪಾಪೋಷಿತ ಕೃತ್ಯ ಎಂದು ಸಾಬೀತಾಯಿತು. ಆದರೆ, ಪಾಕಿಸ್ತಾನ ಮಾತ್ರ ನಮ್ಮ ತಪ್ಪಿಲ್ಲ ಎಂದು ಮೊಂಡು ವಾದವನ್ನು ಇಂದು ಕೂಡಾ ಮುಂದುವರಿಸಿದೆ. ಈ ಎಲ್ಲ ಬೆಳವಣಿಗೆ ಹಿನ್ನೆಲೆಯಲ್ಲಿ ಹೇಮಂತ್ ಕರ್ಕರೆ ಅವರ ಪತ್ನಿ ಕವಿತಾ ಕರ್ಕರೆ ಕಾಂಗ್ರೆಸ್ ಸೋನಿಯಾ ಗಾಂಧಿ ಅವರನ್ನು ಭೇಟಿ ಕಸಬ್ ನನ್ನು ಗಲ್ಲಿಗೇರಿಸಿ, ಆ ಮೂಲಕ ಮುಂಬೈ ದಾಳಿಯಲ್ಲಿ ಮಡಿದವರ ಆತ್ಮಕ್ಕೆ ಶಾಂತಿ ಸಿಗುವಂತೆ ಮಾಡಿ ಎಂದು ಒತ್ತಾಯಿಸಿದ್ದಾರೆ. ಆದರೆ, ಸೋನಿಯಾ ಗಾಂಧಿ ಅವರಿಂದ ಎಂತಹ ಭರವಸೆ ಸಿಕ್ಕಿದೆ ಎನ್ನುವುದು ತಿಳಿದು ಬಂದಿಲ್ಲ.
(ದಟ್ಸ್ ಕನ್ನಡ ವಾರ್ತೆ)
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications