ಬಾಬ್ರಿ ಧ್ವಂಸ ಆರೋಪಿಗಳಿಗೆ ಶಿಕ್ಷೆ ಖಚಿತ, ಮೊಯ್ಲಿ

17 ವರ್ಷಗಳ ಕಾಲ ಸತತ ತನಿಖೆಯ ನಂತರ ನ್ಯಾಯಮೂರ್ತಿ ಮನಮೋಹನ್ ಸಿಂಗ್ ಲಿಬರ್ಹಾನ್ ಸಲ್ಲಿಸಿರುವ ವರದಿಯನ್ನು ತಳ್ಳಿ ಹಾಕುವ ಪ್ರಶ್ನೆಯೇ ಇಲ್ಲ. ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಆಯೋಗ ಹೆಸರಿಸಿರುವ ಎಲ್ಲ 68 ಮಂದಿ ಆರೋಪಿಗಳ ವಿರುದ್ಧ ಕ್ರಮಕೈಗೊಳ್ಳಲು ಸರಕಾರ ಚಿಂತನೆ ನಡೆಸಿದೆ ಎಂದು ಕೇಂದ್ರ ಕಾನೂನು ಸಚಿವ ಎಂ ವೀರಪ್ಪ ಮೊಯ್ಲಿ ತಿಳಿಸಿದ್ದಾರೆ.
ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಆಯೋಗದಲ್ಲಿ ಎಲ್ಲ ಅಂಶಗಳನ್ನು ಕೂಲಂಕಷವಾಗಿ ಪರಿಶೀಲನೆ ನಡೆಸಲಾಗುವುದು ಎಂದರು. ಬಾಬ್ರಿ ಧ್ವಂಸ ಪ್ರಕರಣ ಭಾರತದ ಇತಿಹಾಸದಲ್ಲಿ ಕೆಟ್ಟ ಹೆಸರು ತರುವಂತ ಕೃತ್ಯ. ಇದರ ಹಿಂದೆ ಯಾರೇ ಇದ್ದರೂ ಅವರ ವಿರುದ್ಧ ಸಂವಿಧಾನದಡಿ ಕ್ರಮಕೈಗೊಳ್ಳುವ ಕುರಿತು ತಕ್ಷರೊಂದಿಗೆ ಚರ್ಚಿಸಲಾಗುವುದು. ಬಾಬ್ರಿ ಧ್ವಂಸಕ್ಕೆ ಸಂಬಂಧಿಸಿದಂತೆ ನ್ಯಾಯ ಒದಗಿಸುವುದು ಸರಕಾರದ ಕರ್ತವ್ಯ. ಇದನ್ನು ದೇಶದ ಜನತೆ ಎದುರು ನೋಡುತ್ತಿದೆ ಎಂದು ಮೊಯ್ಲಿ ಹೇಳಿದರು.
ಮಾಜಿ ಪ್ರಧಾನಮಂತ್ರಿ ಅಟಲ್ ಬಿಹಾರಿ ವಾಜಪೇಯಿ, ಪ್ರತಿಪಕ್ಷದ ನಾಯಕ ಎಲ್ ಕೆ ಅಡ್ವಾಣಿ, ಮುರಳಿ ಮನೋಹರ್ ಜೋಶಿ, ಉತ್ತರ ಪ್ರದೇಶದ ಮಾಜಿ ಸಿಎಂ ಕಲ್ಯಾಣ್ ಸಿಂಗ್, ಶಿವಸೇನೆ ಮುಖ್ಯಸ್ಥ ಬಾಳಾ ಠಾಕ್ರೆ, ಉಮಾಭಾರತಿ, ವಿಎಚ್ ಪಿಯ ಆಚಾರ್ಯ ಗಿರಿರಾಜ ಕಿಶೋರ್, ಪ್ರವೀಣಬಾಯಿ ತೂಗಾಡಿಯಾ, ದಿವಂಗತ ವಿಜಯ್ ರಾಜೇ ಸಿಂಧಿಯಾ, ಪ್ರಮೋದ್ ಮಹಾಜನ್, ಮಾಜಿ ಕೇಂದ್ರ ಮಂತ್ರಿ ಶಂಕರ್ ಸಿಂಗ್ ವಾಘೇಲಾ, ಕೆ ಸುದರ್ಶನ್, ಗೋವಿಂದಾಚಾರ್ಯ, ಎಸ್ ಪಿ ಸಿಂಘಾಲ್, ವಿನಯ್ ಕಟಿಯಾರ್, ಅಶೋಕ್ ಸಿಂಘಾಲ್, ಲಲಿತ್ ಟಂಡನ್, ಪುರುಷೋತ್ತಮ ನಾರಾಯಣ ಸಿಂಗ್, ಎಚ್ ಪಿ ಶೇಷಾದ್ರಿ, ರಾಜೇಂದ್ರ ಗುಪ್ತಾ, ನಿವೃತ್ತ ಪೊಲೀಸ್ ಐಜಿ ಎ ಕೆ ಶರಣ್, ಉತ್ತರ ಪ್ರದೇಶದ ಮಾಜಿ ಪ್ರವಾಸೋಧ್ಯಮ ಕಾರ್ಯದರ್ಶಿ ಎ ಸಿಂಹ್ ವರದಿಯಲ್ಲಿರುವ ಪ್ರಮುಖ ಹೆಸರುಗಳು.
(ಏಜನ್ಸೀಸ್)
-
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral












Click it and Unblock the Notifications