ಸಿವಿ ರಾಮನ್ ನಗರ : ವಿವಿಧ ಕಾಮಗಾರಿಗಳಿಗೆ ಚಾಲನೆ

ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, "ಕೆರೆಗಳು ಉಳಿದರೆ ಮಾತ್ರ ಮನುಕುಲ ಉಳಿಯಲು ಸಾಧ್ಯ" ಎಂಬ ಹಿರಿಯರ ನಾಣ್ಣುಡಿಯಂತೆ ಈ ಕೆರೆಯ ಸರ್ವತೋಮುಖ ಅಭಿವೃದ್ಧಿಗೆ ಶಾಸಕರ ಕ್ಷೇತ್ರಾಭಿವೃದ್ಧಿ ನಿಧಿ ಮೂಲಕ ಹಣಕಾಸಿನ ಸೌಲಭ್ಯವನ್ನು ಒದಗಿಸಲಾಗಿದೆ. ಶಾಸಕರ ನಿಧಿಯ ಮುಕ್ಕಾಲು ಪಾಲು ಹಣವನ್ನು ಈ ಯೋಜನೆಗೆಂದೇ ಸದ್ವಿನಿಯೋಗ ಮಾಡಲಾಗುತ್ತಿದೆ ಎಂದರು.
ಬೆಂಗಳೂರು ಉತ್ತರ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಬೆಂಗಳೂರು ಜಲಮಂಡಳಿ ಖಾತೆ ಸಚಿವರಾದ ಕಟ್ಟಾ ಸುಬ್ರಮಣ್ಯನಾಯ್ಡು ಅವರ ಮಾರ್ಗದರ್ಶನದಲ್ಲಿ ಈ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಲಾಗಿದ್ದು, ಕಗ್ಗದಾಸಪುರ ಕೆರೆಯ ಪುನರುಜ್ಜೀವನಕ್ಕೆ ಮೊದಲ ಆದ್ಯತೆ ನೀಡಲಾಗಿದೆ ಎಂದರು.
ಈ ಕೆರೆಯ ಅಭಿವೃದ್ಧಿಯನ್ನು ಹಂತಹಂತವಾಗಿ ಕೈಗೆತ್ತಿಕೊಳ್ಳಲಾಗಿದ್ದು, ಮೊದಲ ಹಂತದಲ್ಲಿ ಕೆರೆ ಪ್ರದೇಶದ ಒತ್ತುವರಿ ತಡೆಯಲು ತಡೆಗೋಡೆಯನ್ನು ನಿರ್ಮಿಸಲಾಗುತ್ತಿದೆ. ಎರಡನೇ ಹಂತದಲ್ಲಿ ಕೆರೆಗಳ ಹೂಳನ್ನು ತೆಗೆದು, ಮಾಲಿನ್ಯ ರಹಿತ ಸ್ಥಳವನ್ನಾಗಿ ಪರಿವರ್ತಿಸುವುದು, ಈ ಭಾಗಗಳ ಜನರಿಗೆ ಸುಂದರವಾದ ಉದ್ಯಾನವನ್ನು ರೂಪಿಸಿ ಒಟ್ಟಾರೆ ಅಂದವಾದ ಕೆರೆಯನ್ನಾಗಿ ನಿರ್ಮಿಸಿ ನನ್ನ ಕ್ಷೇತ್ರದ ವಿಶಿಷ್ಟವಾದ ಪ್ರವಾಸಿ ತಾಣವನ್ನಾಗಿ ಮಾಡುವ ಗುರಿಯನ್ನು ಹೊಂದಲಾಗಿದೆ ಎಂದು ರಘು ವಿವರಿಸಿದರು.
ಇದೇ ಸಂದರ್ಭದಲ್ಲಿ ಮಲ್ಲೇಶ್ಪಾಳ್ಯದಲ್ಲಿ ಶಾಸಕರ ನಿಧಿಯಿಂದ ನೂತನವಾಗಿ ನಿರ್ಮಾಣಗೊಂಡಿರುವ ಬಸ್ ನಿಲ್ದಾಣವನ್ನೂ ಸಹ ಉದ್ಘಾಟಿಸಲಾಯಿತು. ಬೆಂಗಳೂರು ಕೇಂದ್ರ ಬಸ್ ನಿಲ್ದಾಣ ಸೇರಿದಂತೆ ಹಲವಾರು ಪ್ರದೇಶಗಳಿಂದ ಈ ಭಾಗಕ್ಕೆ ದಿನಂಪ್ರತಿ ಹೆಚ್ಚಿನ ಬಸ್ಗಳ ಸಂಚಾರ ಇರುವುದನ್ನು ಗಮನಿಸಿ ಪ್ರಯಾಣಿಕರಿಗೆ ಅನುಕೂಲ ಕಲ್ಪಿಸುವ ಸದುದ್ದೇಶದಿಂದ ಶಾಸಕರ ಅನುದಾನದಿಂದ ಹಣ ತೊಡಗಿಸಿ ನವೀನ ಶೈಲಿಯ ಬಸ್ ನಿಲ್ದಾಣವನ್ನು ನಿರ್ಮಿಸಲಾಗಿದೆ ಎಂದರು.
ಸರ್. ಸಿ.ವಿ.ರಾಮನ್ನಗರ ವಿಧಾನಸಭಾ ಕ್ಷೇತ್ರದಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಹೈಮಾಸ್ಕ್ ವಿದ್ಯುದ್ದೀಪಗಳನ್ನು ಅಳವಡಿಸುವ ಕೆಲಸಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ಈ ಕಾರ್ಯಕ್ರಮದಡಿಯಲ್ಲಿ ಮಲ್ಲೇಶ್ಪಾಳ್ಯದಲ್ಲಿ ಎರಡು ಹೈಮಾಸ್ಟ್ ದೀಪಗಳನ್ನು ಉದ್ಘಾಟಿಸಲಾಯಿತು. ಇದೇ ವೇಳೆ ಡಾಂಬರೀಕರಣ ಕಾಮಗಾರಿ ಪೂರ್ಣಗೊಂಡ ಮಲ್ಲೇಶ್ಪಾಳ್ಯದ ಮುಖ್ಯ ರಸ್ತೆಯನ್ನು ಸಾರ್ವಜನಿಕರ ಬಳಕೆಗೆ ಅರ್ಪಿಸಲಾಗಿದ್ದು, ಇದರಿಂದ ಈ ಭಾಗದಲ್ಲಿ ಇಲ್ಲಿಯವರೆಗೆ ಇದ್ದ ಸಂಚಾರ ಸಮಸ್ಯೆಗೆ ಒಂದು ದೊಡ್ಡ ಪರಿಹಾರ ದೊರೆತಂತಾಗಿದೆ. ಅಲ್ಲದೆ ಮಲ್ಲೇಶ್ಪಾಳ್ಯದಲ್ಲಿ ನಿರ್ಮಿಸಲಾಗಿದ್ದ ಕಿರುನೀರು ಯೋಜನೆಗೂ ಸಹ ಇಂದು ವಿದ್ಯುಕ್ತವಾಗಿ ಚಾಲನೆ ನೀಡಲಾಯಿತು.
ಇನ್ನೊಂದು ಪ್ರಮುಖವಾದ ಸಂಗತಿಯೆಂದರೆ ಮಲ್ಲೇಶ್ಪಾಳ್ಯದಿಂದ ನಗರದ ನಾಲ್ಕು ಕಡೆಗಳಿಗೆ ವೋಲ್ವೋ ಬಸ್ಗಳ ಸೌಲಭ್ಯವನ್ನು ಕಲ್ಪಿಸಿರುವುದು. ಈ ಸೌಲಭ್ಯದಿಂದ ಮಲ್ಲೇಶ್ಪಾಳ್ಯ ಮತ್ತು ಸುತ್ತ-ಮುತ್ತಲ ಪ್ರದೇಶಗಳ ಜನರು ಇನ್ನುಮುಂದೆ ಕೆಂಪೇಗೌಡ ಬಸ್ನಿಲ್ದಾಣ, ಶಿವಾಜನಗರ ಬಸ್ನಿಲ್ದಾಣ, ಕೆ.ಆರ್.ಮಾರ್ಕೆಟ್ ವರೆಗೆ "ವೋಲ್ವೋ" ಬಸ್ನಲ್ಲಿ ಪ್ರಯಾಣ ಮಾಡಬಹುದಾಗಿದೆ ಎಂದು ಶಾಸಕ ಎಸ್ ರಘು ವಿವರಿಸಿದರು.
(ದಟ್ಸ್ ಕನ್ನಡ ವಾರ್ತೆ)
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications